ಐತಿಹಾಸಿಕ ದಿನ: ದಕ್ಷಿಣ ಏಷ್ಯಾ ರಾಷ್ಟ್ರಗಳ ಉಪಗ್ರಹ ಉಡಾಯಿಸಿದ ಇಸ್ರೋ
ದಕ್ಷಿಣ ಏಷ್ಯಾ ದೇಶಗಳ ಮೊದಲ ಉಪಗ್ರಹವನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೊ) ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಐತಿಹಾಸಿಕ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.
ಶ್ರೀಹರಿಕೋಟಾ, ಮೇ 5: ದಕ್ಷಿಣ ಏಷ್ಯಾ ದೇಶಗಳ ಮೊದಲ ಉಪಗ್ರಹವನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೊ) ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ ಐತಿಹಾಸಿಕ ಸಾಧನೆ ಮೆರೆದಿದೆ.
GSAT-9 ಹೆಸರಿನ ಉಪಗ್ರಹವನ್ನು ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಸಂಜೆ 4.57 ನಿಮಿಷಕ್ಕೆ ಉಡಾವಣೆ ಮಾಡಲಾಯಿತು.[ಭಾರತದ ಸಖತ್ ಉಡುಗೊರೆಯನ್ನು ನಯವಾಗಿ ತಿರಸ್ಕರಿಸಿದ ಪಾಕ್]

ಪ್ರಧಾನಿ ಅಭಿನಂದನೆ
ಯಶಸ್ವೀ ಉಪಗ್ರಹ ಉಡಾವಣೆಗೆ ಪ್ರಧಾನಿ ನರೇಂದ್ರ ಮೋದಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ. "ದಕ್ಷಿಣ ಏಷ್ಯಾ ದೇಶಗಳ ಉಪಗ್ರಹ ಉಡಾವಣೆ ಒಂದು ಐತಿಹಾಸಿಕ ಕ್ಷಣ. ದಕ್ಷಿಣ ಏಷ್ಯಾ ದೇಶಗಳ ನಡುವೆ ಹೊಸ ಭ್ರಾತೃತ್ವ ಆರಂಭವಾಗಿದೆ," ಎಂದು ಅವರು ಬಣ್ಣಿಸಿದ್ದಾರೆ.
#WATCH: ISRO launches South Asia Satellite GSAT-9 from Andhra Pradesh's Sriharikota. pic.twitter.com/wbANKY4yq2
— ANI (@ANI_news) May 5, 2017
ಇನ್ನು ಉಡಾವಣೆ ನಂತರ ಸಂಭ್ರಮಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅಫ್ಘಾನಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ಭೂತಾನ್ ಪ್ರಧಾನ ಮಂತ್ರಿಗಳ ಜತೆ ಲೈವ್ ವೀಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.
I congratulate the team of scientists who worked hard for the successful launch of South Asia Satellite. We are very proud of them. @isro
— Narendra Modi (@narendramodi) May 5, 2017
ಇದರಲ್ಲಿ ಮಾತನಾಡಿದ ಪ್ರಧಾನಿ, "ನಾವೆಲ್ಲಾ ದಕ್ಷಿಣ ಏಷ್ಯಾದ ದೇಶಗಳು ಒಗ್ಗಟ್ಟಾಗಿದ್ದೇವೆ. ಶಾಂತಿ, ಸಹಬಾಳ್ವೆ, ಅಭಿವೃದ್ಧಿ ವಿಚಾರಗಳಲ್ಲಿ ನಾವು ಒಟ್ಟಾಗಿರಲಿದ್ದೇವೆ. ಉಪಗ್ರಹ ಉಡಾವಣೆ ದಕ್ಷಿಣ ಏಷ್ಯಾ ದೇಶಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ ," ಎಂದು ಹೇಳಿದ್ದಾರೆ.
#WATCH PM Modi addresses post launch of South Asian Satellite https://t.co/BfdXJQvPuf
— ANI (@ANI_news) May 5, 2017
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications