ದೇಶದಲ್ಲಿ ಕೋವಿಡ್ ನಂತರ ಈ ಕಾರಣಕ್ಕೆ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚಳ!
ಕೋವಿಡ್ ಸಾಂಕ್ರಾಮಿಕ ರೋಗದ ನಂತರ ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ ಎನ್ನುವ ಆತಂಕದ ನಡುವೆಯೇ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ(National Crime Records Bureau)ದ ಅಂಕಿ - ಅಂಶಗಳು ಆಘಾತಕಾರಿ ವಿಷಯವನ್ನು ಬಹಿರಂಗಪಡಿಸಿದೆ. ಹೌದು ಕೋವಿಡ್ ಸಾಂಕ್ರಾಮಿಕ ರೋಗದ ನಂತರ ಜನರಲ್ಲಿ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿವೆ ಅಥವಾ ದೈಹಿಕ ಕ್ಷೀಣತೆ, ಆರೋಗ್ಯ ವೈಪರೀತ್ಯಗಳು ಎದುರಾಗುತ್ತಿವೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿ ಬಂದಿದೆ.
ಅಲ್ಲದೇ ಕೋವಿಡ್ ಲಸಿಕೆಯ ಪರಿಣಾಮ ಬೀರಿದೆಯೇ ಎನ್ನುವ ಆತಂಕವೂ ಜನರಲ್ಲಿ ಇದೆ. ಆದರೆ ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಯು ಈಚೆಗೆ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿತ್ತು. ಇದೀಗ ದೇಶದಲ್ಲಿ ಮತ್ತೊಂದು ಗಂಭೀರವಾದ ಸಮಸ್ಯೆ ಎದುರಾಗಿದೆ. ಇದು ಹೃದಯಾಘಾತ ಪ್ರಕರಣಗಳಿಗೆ ಸಂಬಂಧಿಸಿದ್ದಲ್ಲ ಬದಲಿಗೆ, ಆರ್ಥಿಕ ಸಂಕಷ್ಟದಿಂದ ಎದುರಾಗಿರುವ ಸಮಸ್ಯೆ. ಏನು ಆ ಸಮಸ್ಯೆ, ಜನರ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವುದು ಯಾವ ಕಾರಣಕ್ಕೆ ಹಾಗೂ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ ವರದಿಯಲ್ಲಿ ಏನಿದೆ ಎನ್ನುವ ವಿವರ ಇಲ್ಲಿದೆ.

ಕೋವಿಡ್ನ ನಂತರ ಹಲವರ ಜೀವನದಲ್ಲಿ ಅಲ್ಲೋಲ ಕಲ್ಲೋಲವೇ ಆಗಿದೆ. ಕರ್ನಾಟಕವೂ ಸೇರಿದಂತೆ ದೇಶದ ಹಲವರು ತಮ್ಮ ಆತ್ಮೀಯರು ಹಾಗೂ ಕುಟುಂಬದವರನ್ನು ಕಳೆದುಕೊಂಡಿದ್ದಾರೆ. ಆದರೆ ಈ ಸಾಂಕ್ರಾಮಿಕ ರೋಗ ಈಗ ಕಡಿಮೆಯಾಗಿದ್ದರೂ (ರೂಪಾಂತರ ತಳಿಗಳು ವರದಿ ಆಗುವುದು ಇದೆ) ಇದರಿಂದ ಜನರಿಗೆ ಸಂಕಷ್ಟ ಮಾತ್ರ ತಪ್ಪುತ್ತಿಲ್ಲ. ಹೌದು ಕೋವಿಡ್ ಸಾಂಕ್ರಾಮಿಕ ರೋಗದ ಬಳಿಕ ಆತ್ಮಹತ್ಯೆಗಳು, ಅದರಲ್ಲೂ ಆರ್ಥಿಕ ಸಂಕಷ್ಟದ ಕಾರಣಕ್ಕಾಗಿ ಆತ್ಮಹತ್ಯೆಗಳು ಅವ್ಯಾಹತವಾಗಿ ನಡೆಯುತ್ತಿವೆ. ಈ ಸಂಖ್ಯೆ ಇನ್ನೂ ತಗ್ಗಿಲ್ಲ ಎಂದು NCRB ಅಂಕಿ-ಅಂಶಗಳು ತೋರಿಸುತ್ತಿವೆ. ಈ ವಿಚಾರದ ಬಗ್ಗೆ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರತಿದಿನ ಎಚ್ಚರಿಸುತ್ತಾ ಹೋದಂತೆ, ಇದನ್ನು ಗಮನಿಸುವವರಿಗೆ ಅಭ್ಯಾಸ ಆಗುತ್ತಾ ಸಾಗುತ್ತದೆಯೇ ಹೊರತು ನಮ್ಮ ಸುತ್ತ ಏನೋ ಅಸಹಜವಾದದ್ದು ನಡೆಯುತ್ತಿದೆ ಅನ್ನಿಸುವುದೇ ಇಲ್ಲ. ಪ್ರತಿದಿನ ಸಾಯುವವರಿಗೆ ಅಳುವವರು ಯಾರು ಎಂಬ ಯೋಚನೆ ಬರುವುದು ಸಹಜ. ಕುಸಿದು/ಹೃದಯಾಘಾತದ ಸಾವುಗಳಿಗೂ ಇದೇ ಮಾತು ಅನ್ವಯ. ಯಾರಿಗೂ ಬಿದ್ದೇ ಹೋಗಿಲ್ಲ.
ಆರ್ಥಿಕ ಸಂಕಷ್ಟಕ್ಕೆ ಸಂಬಂಧಿಸಿದಂತೆ, ಕರ್ನಾಟಕದಲ್ಲಿ ಗ್ಯಾರಂಟಿ ಹೆಸರಲ್ಲಿ ಬಂದಿರುವ ಯೂನಿವರ್ಸಲ್ ಬೇಸಿಕ್ ಇನ್ಕಂ ವ್ಯವಸ್ಥೆ ಎಷ್ಟು ಮನಗಳಲ್ಲಿ ಜೀವ ಉಳಿಸಿದೆ ಎಂಬುದು ಅಧ್ಯಯನ ಯೋಗ್ಯ. ಇಲ್ಲಿ, ಈ ಮೂಲಭೂತ ಸವಲತ್ತುಗಳನ್ನು ಮೀರಿದ ಆರ್ಥಿಕ ಸಂಕಷ್ಟಗಳಲ್ಲಿ ಸಿಲುಕಿಕೊಂಡವರು ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ. ತಿಂಗಳು-ಎರಡು ತಿಂಗಳಿಗೊಂದು ಇಂತಹ ಘಟನೆಗಳನ್ನು ನಾನು ಕರಾವಳಿಯಲ್ಲಿಯೇ ಗಮನಿಸಿದ್ದೇನೆ. ಮತ್ತೊಮ್ಮೆ ಹೇಳುತ್ತೇನೆ, ಮನುಷ್ಯ ಜೀವಗಳು ಈ ಹಿಂದೆ ಯಾವತ್ತೂ ಇಷ್ಟೊಂದು ಸಸ್ತಾ ಆಗಿರಲಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.
1966 ರಲ್ಲಿ ಮೊದಲ ಬಾರಿಗೆ ಪ್ರಕಟವಾದ ADSI ವರದಿಯ ನಂತರ ಆತ್ಮಹತ್ಯೆ ಪ್ರಮಾಣವು ಗಣನೀಯವಾಗಿ ಏರಿಕೆಯನ್ನು ಕಂಡಿದೆ. 2022 ರಲ್ಲಿ ಆತ್ಮಹತ್ಯೆ ಪ್ರಮಾಣವು 2021ಕ್ಕೆ ಹೋಲಿಕೆ ಮಾಡಿದರೆ, 3.3% ರಷ್ಟು ಹೆಚ್ಚಾಗಿದೆ. 100,000 ಜನಸಂಖ್ಯೆಗೆ 12 ರಿಂದ 12.4 ಕ್ಕೆ (1,64,033 ರಿಂದ 1,70,924) ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಈ ಪ್ರಮಾಣವು 56 ವರ್ಷಗಳಲ್ಲಿ ದಾಖಲಾದ ಅತ್ಯಧಿಕ ಎಂದು ವರದಿಯಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications