ವಿದೇಶಾಂಗ ಕಾರ್ಯದರ್ಶಿ: ಸುಜಾತಾ ವಜಾ, ಜೈ ಶಂಕರ್ ಅಧಿಕಾರಕ್ಕೆ
ನವದೆಹಲಿ, ಜ.28: ಅಮೆರಿಕ ಹಾಗೂ ಭಾರತ ನಡುವಿನ ಒಪ್ಪಂದಗಳ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಕೆಲ ದಿನಗಳಲ್ಲೇ ಸುಜಾತಾ ಸಿಂಗ್ ಅವರನ್ನು ಹುದ್ದೆಯಿಂದ ಕೆಳಗಿಳಿಸಲಾಗಿದೆ. ಅವರ ಸ್ಥಾನಕ್ಕೆ ಅಮೆರಿಕದಲ್ಲಿನ ಭಾರತೀಯ ರಾಯಭಾರಿ ಎಸ್. ಜೈಶಂಕರ್ ನೇಮಕಗೊಂಡಿದ್ದು, ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.
ಗಣರಾಜ್ಯೋತ್ಸವ ದಿನಕ್ಕೆ ಅತಿಥಿಯಾಗಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ಬಂದು ಹೋದ ಮೇಲೆ ಈ ಎಲ್ಲಾ ಬೆಳವಣಿಗೆಗಳು ನಡೆದಿವೆ. ಒಬಾಮಾ ಅವರನ್ನು ಅತಿಥಿಯಾಗಿ ಕರೆಸುವಲ್ಲಿ ಜೈಶಂಕರ್ ಅವರ ಪಾತ್ರವೂ ಇತ್ತು ಎಂಬುದು ಉಲ್ಲೇಖಾರ್ಹ. ಆದರೆ, ಯುಪಿಎ ಕಾಲದಲ್ಲಿ ನೇಮಕಗೊಂಡಿದ್ದ ದಕ್ಷ ಅಧಿಕಾರಿ ಸುಜಾತಾ ಸಿಂಗ್ ಅವರು ವಿದೇಶಾಂಗ ಕಾರ್ಯದರ್ಶಿಯಾಗಿ ಇನ್ನು ಆರು ತಿಂಗಳು ಅಧಿಕಾರದಲ್ಲಿ ಇರಬೇಕಿತ್ತು. ಎಎಫ್ ಎಸ್ ಜೈಶಂಕರ್ ಅವರ ಅವಧಿ ಮುಂದಿನ ತಿಂಗಳಿಗೆ ಕೊನೆಗೊಳ್ಳುತ್ತದೆ. [ಮಂಡ್ಯ ಮೂಲದ ವಿವೇಕ್, ಅಮೆರಿಕದ ಪ್ರಧಾನ ಸರ್ಜನ್]

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ವಿದೇಶಾಂಗ ಕಾರ್ಯದರ್ಶಿಯಾಗಿ ಸುಜಾತಾ ಸಿಂಗ್ ಅವರ ಕಾರ್ಯ ವೈಖರಿ ಬಗ್ಗೆ ಅಸಮಾಧಾನವಿತ್ತು ಎಂಬ ಸುದ್ದಿಯೂ ಇದೆ. ಅದರೆ, ಮೋದಿ ಅವರ ಏಷ್ಯಾ ಪ್ರವಾಸದ ವೇಳೆ ಸುಜಾತಾ ಸಿಂಗ್ ಕಾರ್ಯ ವೈಖರಿ ಬಗ್ಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿತ್ತು.
ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಪ್ರತಿಕ್ರಿಯೆ ಹೀಗಿದೆ:
Is sacking of Foreign Secretary late retribution for her stand on Devyani Khorbode affair? Removal after a Presidential visit"coincidental"?
— Manish Tewari (@ManishTewari) January 29, 2015 ಜೂ. 31ಕ್ಕೆ ನಿವೃತ್ತಿ ಹೊಂದ ಬೇಕಿದ್ದ ಜೈಶಂಕರ್ ಅವರು ಬಂಪರ್ ಆಫರ್ ಸಿಕ್ಕಿದ ಬೆನ್ನಲ್ಲೇ ಅಧಿಕಾರ ವಹಿಸಿಕೊಂಡಿದ್ದಾರೆ. ಅಮೆರಿಕ ಹಾಗೂ ಭಾರತ ನಡುವಿನ ಅನೇಕ ಒಪ್ಪಂದಗಳಿಗೆ ಸಹಿ ಬೀಳಲು ಜೈಶಂಕರ್ ಅವರು ಕೂಡಾ ಕಾರಣ ಎಂಬ ಮಾತುಗಳು ಕೇಳಿ ಬಂದಿದೆ. ಮೋದಿ ಅವರಿಂದ ಮೆಚ್ಚುಗೆ ಸಿಕ್ಕಿದ ಕೂಡಲೇ ಅವರಿಗೆ ವಿದೇಶಾಂಗ ಕಾರ್ಯದರ್ಶಿ ಸ್ಥಾನ ಸಿಕ್ಕಿದೆ. [ಭಾರತ-ಅಮೆರಿಕದ ನಡುವೆ 'ಹಾಟ್ ಲೈನ್']
ಅಮೆರಿಕದ ಭಾರತೀಯ ರಾಯಭಾರಿಯಾಗಿ ಅನಿವಾಸಿ ಭಾರತೀಯ ರಿಚರ್ಡ್ ರಾಹುಲ್ ವರ್ಮ ಅವರು ನೇಮಕಗೊಂಡಿರುವುದನ್ನು ಇಲ್ಲಿ ಸ್ಮರಿಸಬಹುದು.[ಯುಎಸ್ ರಾಯಭಾರಿ ರಾಹುಲ್ ವರ್ಮ]
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications