'ಲೋಕಸಭಾ ಚುನಾವಣೆ ಮುಗಿದ ಮೇಲೆ ಬಿಜೆಪಿಯಲ್ಲಿ ಎಎಪಿ ವಿಲೀನ'
ಸದ್ಯ ಭಾರತದಲ್ಲಿ ಲೋಕಸಭಾ ಚುನಾವಣೆಗಳ ಬಿಸಿ ಜೊರಾಗಿದೆ. ಈಗಾಗಲೇ ದೇಶದಲ್ಲಿ ನಾಲ್ಕು ಹಂತದ ಚುನಾವಣೆಗಳು ಮುಗಿದಿದ್ದು, ಇನ್ನು ಮೂರು ಹಂತದ ಚುನಾವಣೆ ಬಾಕಿ ಇದೆ. ಚುನಾವಣಾ ಸಮಯದಲ್ಲಿ ರಾಜಕೀಯ ವ್ಯಕ್ತಿಗಳ ಮಾತಿನ ಚಕಮಕಿ ಸಹ ಭರ್ಜರಿಯಾಗಿದೆ. ಇದೇ ವೇಳೆ ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಹೊಸ ಬಾಂಬ್ ಹಾಕಿದ್ದಾರೆ.
ರಾಷ್ಟ್ರೀಯ ಪಕ್ಷಗಳು ಹಾಗೂ ಸ್ಥಳೀಯ ಪಕ್ಷಗಳು ಲೋಕಸಭಾ ಚುನಾವಣೆಗೆ ಭರದ ಸಿದ್ಧತೆ ಮಾಡಿಕೊಂಡಿವೆ. ದೆಹಲಿಯಲ್ಲಿ ಆಪ್ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು, ಪಂಜಾಬ್ನಲ್ಲಿ ಪ್ರತೇಕವಾಗಿ ಸ್ಪರ್ಧಿಸಲಿವೆ. ಇನ್ನು ಬಹುಕಾಲ ಬಿಜೆಪಿ ಜೊತೆಗಿದ್ದ ಶಿರೋಮಣಿ ಅಕಾಲಿದಳ ಸಹ ಏಕಾಂಗಿಯಾಗಿ ಚುನಾವಣಾ ಕಣಕ್ಕೆ ಧುಮ್ಮುಕ್ಕಿದೆ.

ಚುನಾವಣಾ ಪ್ರಚಾರದ ವೇಳೆ ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ನೀಡಿರುವ ಹೇಳಿಕೆ ಸದ್ಯ ರಾಜಕೀಯ ರಂಗದಲ್ಲಿ ಸಂಚಲವನ್ನು ಮೂಡಿಸಿದೆ.
ಸುಖಬೀರ್ ಸಿಂಗ್ ಹೇಳಿದ್ದೇನು?
ಚುನಾವಣಾ ಪ್ರಚಾರದ ವೇಳೆ ಸುಖಬೀರ್ ಸಿಂಗ್, ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಶೀಘ್ರದಲ್ಲೇ ಬಿಜೆಪಿಗೆ ಸೇರಬಹುದು ಎಂದು ಅವರು ಹೇಳಿದ್ದಾರೆ. ಈಗ ಪ್ರಚಾರ ತಂಡ ಒಂದು ದಿನವೂ ಉಳಿದಿಲ್ಲ ಎಂದರು. ಚುನಾವಣೆಯ ನಂತರ ಯಾವಾಗ ಬೇಕಾದರೂ ಬಿಜೆಪಿ ಸೇರಬಹುದು ಎಂದು ಸುಖ್ಬೀರ್ ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷ ಮತ್ತು ಶಿರೋಮಣಿ ಅಕಾಲಿದಳ ಪರವಾಗಿ ಮತ ಚಲಾಯಿಸುವುದು ಎಂದರೆ ಅವರು ಪರೋಕ್ಷವಾಗಿ ಬಿಜೆಪಿಗೆ ಸಹಾಯ ಮಾಡಿದಂತೆ ಎಂದು ಎಚ್ಚರಿಸಿದ್ದಾರೆ. ಅಲ್ಲದೆ ಸದ್ಯದ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿದಾಗ ಈ ಎರಡೂ ಪಕ್ಷಗಳು ಬಿಜಿಪಿಯನ್ನು ಸೋಲಿಸಲು ಸಾಧ್ಯವಿಲ್ಲ. ಈ ಎರಡೂ ಪಕ್ಷಗಳು ಬಿಜೆಪಿ ವಿರೋಧಿಗಳ ಮತವನ್ನು ಸೆಳೆಯಬಹುದು ಎಂದು ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾಡಿಂಗ್ ಹೇಳಿದ್ದಾರೆ. ಬಿಜೆಪಿಯನ್ನು ಸೋಲಿಸಬೇಕಾದರೆ ಕಾಂಗ್ರೆಸ್ಗೆ ಮತ ಹಾಕುವುದೊಂದೇ ನಿಮ್ಮ ಆಯ್ಕೆಯಾಗಿದೆ ಎಂದರು.
ಪಂಜಾಬ್ನಲ್ಲಿ ಚುನಾವಣೆ ಯಾವಾಗ?
ಭಾರತದಲ್ಲಿ ಚುನಾವಣೆಗಳ ಬಿಸಿ ಆರಂಭವಾಗಿದೆ. ಕರ್ನಾಟಕದಲ್ಲೂ ಎರಡೂ ಹಂತದ ಚುನಾವಣೆಗಳು ಮುಗಿದಿವೆ. ಒಟ್ಟಾರೆ ದೇಶದಲ್ಲಿ ಈಗಾಗಲೇ ನಾಲ್ಕು ಹಂತದ ಚುನಾವಣೆಗಳು ಮುಗಿದಿವೆ. ಇನ್ನು ಮೂರು ಹಂತದ ಚುನಾವಣೆ ಬಾಕಿ ಇದೆ. ಪಂಜಾಬ್ನಲ್ಲಿ ಜೂನ್ 1 ರಂದು, 13 ಲೋಕಸಭಾ ಕ್ಷೇತ್ರಗಳಿಗೆ ಏಕಕಾಲದಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಮಾತ್ರ ಇಲ್ಲಿ ಮತ ಎಣಿಕೆ ನಡೆಯಲಿದೆ.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications