ದೇಶದಲ್ಲಿ ಅತ್ಯಾಚಾರ ನಿಲ್ಲಬೇಕಾದರೆ ಶೌಚಾಲಯ ಕಟ್ಟಿಸಿ
ನವದೆಹಲಿ, ಜೂ 5: ದೇಶದಲ್ಲಿ ವ್ಯಾಪಕವಾಗಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳಿಗೆ ದೇಶದಲ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲದೇ ಇರುವುದು ಪ್ರಮುಖ ಕಾರಣವೆಂದು ಸುಲಭ್ ಇಂಟರ್ನ್ಯಾಷನಲ್ ಸಂಸ್ಥಾಪಕ ಡಾ. ಬಿಂದೇಶ್ವರ್ ಪಾಠಕ್ ಅಭಿಪ್ರಾಯ ಪಟ್ಟಿದ್ದಾರೆ.
ಉತ್ತರಪ್ರದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡುತ್ತಿದ್ದ ಪಾಠಕ್, ದೇಶದ ಹಲವಾರು ಹಳ್ಳಿಗಳಲ್ಲಿ ಶೌಚಾಲಯಕ್ಕೆ ಬಯಲು ಪ್ರದೇಶವನ್ನೇ ಅವಲಂಬಿಸಿ ಕೊಂಡಿದ್ದಾರೆ. ರಾತ್ರಿಯ ವೇಳೆಯೂ ಮಹಿಳೆಯರು ಹೊರಗೆ ಹೋಗಬೇಕಾಗಿರುವುದರಿಂದ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಗೆ ಪತ್ರವನ್ನು ಬರೆದಿರುವ ಪಾಠಕ್, ಮನೆಯೊಳಗೆ ಶೌಚಾಲಯದ ವ್ಯವಸ್ಥೆ ಇದ್ದರೆ ಒಂದು ಹಂತದ ತನಕ ಅತ್ಯಾಚಾರ ಪ್ರಕರಣಕ್ಕೆ ಕಡಿವಾಣ ಹಾಕಬಹುದು. ಅಲ್ಲದೇ, ರಾತ್ರಿಯ ವೇಳೆ ಮಹಿಳೆಯರು ಹೊರಗೆ ಹೋಗುವುದನ್ನು ತಪ್ಪಿಸಬಹುದು. (ರೇಪ್ ಮಾಡಿ ಯುವತಿಯರನ್ನು ಮರಕ್ಕೆ ನೇಣುಹಾಕಿದರು)
ದೇಶದ ನೈರ್ಮಲ್ಯ ಯೋಜನೆಗೆ ಕೇಂದ್ರ ಸರಕಾರ ಮೀಸಲಿಟ್ಟ ಹಣವನ್ನು ಕೂಡಲೇ ರಾಜ್ಯಗಳಿಗೆ ಹಂಚಬೇಕು. ಜೊತೆಗೆ ಈ ಯೋಜನೆಗೆ ಇನ್ನೂ ಹೆಚ್ಚಿನ ಹಣವನ್ನು ಬಜೆಟಿನಲ್ಲಿ ಮೀಸಲಿಡಿ ಎಂದು ಪಾಠಕ್, ಮೋದಿಯವರಿಗೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಹದಿಹರೆಯದ ಇಬ್ಬರು ಸಹೋದರರಿಯರ ಸಾಮೂಹಿಕ ಅತ್ಯಾಚಾರ ನಡೆದ ಉತ್ತರಪ್ರದೇಶದ ಬದೌನ್ ನಲ್ಲಿ ಮಾತನಾಡುತ್ತಿದ್ದ ಪಾಠಕ್, ಈ ಪ್ರದೇಶದ ಎಲ್ಲಾ ಮನೆಗಳಲ್ಲೂ ಶೌಚಾಲಯ ನಿರ್ಮಾಣ ಮಾಡುವ ಉದ್ದೇಶವನ್ನು ಹೊಂದಿದ್ದೇವೆಂದು ಹೇಳಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications