ಕೆನಡಾ ಪ್ರಧಾನಿ ಹೇಳಿಕೆಗೆ ಭಾರತದ ಪ್ರತಿಭಟನೆ: ಹೈಕಮಿಷನರ್ಗೆ ಸಮನ್ಸ್
ನವದೆಹಲಿ, ಡಿಸೆಂಬರ್ 4: ಕೃಷಿ ಕಾಯ್ದೆಗಳ ವಿರುದ್ಧ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಹೇಳಿಕೆ ನೀಡಿರುವುದರಿಂದ ಅಸಮಾಧಾಗೊಂಡಿರುವ ಭಾರತ, ಕೆನಡಾದ ಹೈ ಕಮಿಷನರ್ಗೆ ಸಮನ್ ನೀಡಿ ತನ್ನ ಪ್ರತಿಭಟನೆ ದಾಖಲಿಸಿದೆ.
ಪ್ರಧಾನಿ ಜಸ್ಟಿನ್ ಟ್ರುಡೋ ಮತ್ತು ಇತರೆ ಸಂಸದರು ಪ್ರತಿಭಟನೆ ಕುರಿತು ಹೇಳಿಕೆ ನೀಡಿರುವುದು ದ್ವಿಪಕ್ಷೀಯ ಸಂಬಂಧಗಳಿಗೆ ಗಂಭೀರ ಹಾನಿಯುಂಟುಮಾಡಲಿದೆ ಎಂದು ಭಾರತ ಎಚ್ಚರಿಕೆ ನೀಡಿದೆ.
ಸೋಮವಾರ ಗುರುನಾನಕ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ, 'ಕೆನಡಾ ಯಾವಾಗಲೂ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಎತ್ತಿಹಿಡಿಯುತ್ತದೆ' ಎಂದಿದ್ದರು.

'ರೈತರ ಪ್ರತಿಭಟನೆಯ ಬಗ್ಗೆ ಭಾರತದಿಂದ ಸುದ್ದಿ ಬರುತ್ತಿದೆ. ಪರಿಸ್ಥಿತಿಯು ಕಳವಳಕಾರಿಯಾಗಿದೆ ಮತ್ತು ಕುಟುಂಬಗಳು ಮತ್ತು ಸ್ನೇಹಿತರ ಬಗ್ಗೆ ನಮಗೆ ಬಹಳ ಚಿಂತೆಯಾಗುತ್ತಿದೆ. ನಾವು ಮಾತುಕತೆಯ ಮಹತ್ವದ ಬಗ್ಗೆ ನಂಬಿಕೆ ಇರಿಸಿದ್ದೇವೆ. ನಮ್ಮ ಕಳವಳಗಳನ್ನು ತಿಳಿಸಲು ನಾವು ಭಾರತದ ಅಧಿಕಾರಿಗಳನ್ನು ನೇರವಾಗಿ ಸಂಪರ್ಕಿಸುತ್ತಿದ್ದೇವೆ. ಇದು ನಾವೆಲ್ಲರೂ ಜತೆಗೂಡಬೇಕಾದ ಸಮಯ' ಎಂದು ಟ್ರುಡೋ ಹೇಳಿಕೆ ನೀಡಿದ್ದರು.
'ಭಾರತದ ರೈತರಿಗೆ ಸಂಬಂಧಿಸಿದಂತೆ ಕೆನಡಾದ ಮುಖಂಡರಿಂದ ಕೆಲವು ತಪ್ಪು ಮಾಹಿತಿಯ ಹೇಳಿಕೆಗಳನ್ನು ನೋಡಿದ್ದೇವೆ. ಅಂತಹ ಹೇಳಿಕೆಗಳು ಅನವಶ್ಯಕವಾಗಿದ್ದವು. ಮುಖ್ಯವಾಗಿ ಒಂದು ಪ್ರಜಾಪ್ರಭುತ್ವ ದೇಶದ ಆಂತರಿಕ ವ್ಯವಹಾರಗಳಿಗೆ ಸಂಬಂಧಿಸಿದ ವಿಚಾರದ ಬಗ್ಗೆ ಹೇಳಿಕೆ ಬೇಕಿರಲಿಲ್ಲ' ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ, ಟ್ರುಡೋ ಹೇಳಿಕೆಗೆ ತೀಕ್ಷ್ಣ ತಿರುಗೇಟು ನೀಡಿದ್ದರು.
-
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications