ಸುನಂದಾ ಹತ್ಯೆ ಪ್ರಕರಣ: ಅಮರ್ ಸಿಂಗ್ ಗೆ ಸಮನ್ಸ್
ನವದೆಹಲಿ, ಜ.28: ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಮಾಜಿ ಮುಖಂಡ ಅಮರ್ ಸಿಂಗ್ ಅವರಿಗೆ ವಿಶೇಷ ತನಿಖಾ ತಂಡ ಸಮನ್ಸ್ ಬುಧವಾರ ಜಾರಿಗೊಳಿಸಿದೆ.
ಸುನಂದಾ ಪುಷ್ಕರ್ ಕೊಲೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ದೆಹಲಿಯ ವಿಶೇಷಾ ತನಿಖಾ ಅಧಿಕಾರಿಗಳು, ಅಮರ್ ಸಿಂಗ್ ಅವರನ್ನು ವಿಚಾರಣೆಗೊಳಪಡಿಸಿ ಹೆಚ್ಚಿನ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ. ಸುನಂದಾ ಸಾವು, ಐಪಿಎಲ್ ತಂಡಗಳು, ಹಗರಣದ ಬಗ್ಗೆ ಅಮರ್ ಸಿಂಗ್ ಬಳಿ ಹೆಚ್ಚಿನ ಮಾಹಿತಿ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ. [ಶಶಿ ತರೂರ್ಗೆ ಸಿಟ್ ಕೇಳಿದ 6 ಪ್ರಮುಖ ಪ್ರಶ್ನೆಗಳು]

ಐಪಿಎಲ್ ವಿವಾದ: ಇತ್ತೀಚೆಗೆ ಶಶಿ ತರೂರ್ ಅವರನ್ನು ಎಸ್ ಐಟಿ ವಿಚಾರಣೆಗೊಳಪಡಿಸಿತ್ತು. ನಂತರಹಿರಿಯ ಪತ್ರಕರ್ತೆ ನಳಿನಿ ಸಿಂಗ್ ಅವರನ್ನು ವಿಚಾರಣೆಗೊಳಪಡಿಸಲು ಎಸ್ ಐಟಿ ಸಜ್ಜಾಯಿತು. ಇದೆಲ್ಲವೂ ಸುನಂದಾ ಕೊಲೆ ಹಾಗೂ ಐಪಿಎಲ್ ಸುತ್ತಾ ಹುಟ್ಟಿಕೊಂಡಿರುವ ಅನುಮಾನದ ಹುತ್ತವನ್ನು ತುಂಡರಿಸುವುದೇ ಆಗಿದೆ. [ಪತ್ರಕರ್ತೆ ನಳಿನಿ ಸಿಂಗ್ ವಿಚಾರಣೆ]
ಪಾಕಿಸ್ತಾನಿ ಪತ್ರಕರ್ತೆ ತರಾರ್ ಹಾಗೂ ಶಶಿ ತರೂರ್ ನಡುವೆ ನಡೆದಿದೆ ಎನ್ನಲಾದ ಪ್ರಣಯ ಸಂದೇಶ ವಿನಿಮಯದ ಬಗ್ಗೆ ಸುನಂದಾ ಅವರು ನಳಿನಿ ಬಳಿ ಹೇಳಿಕೊಂಡಿದ್ದರು ಎಂದು ನಳಿನಿ ಸಿಂಗ್ ಹೇಳಿಕೆ ನೀಡಿದ ಬೆನ್ನಲ್ಲೇ ವಿಚಾರಣೆ ಎದುರಿಸಬೇಕಾಯಿತು.
ಅದೇ ರೀತಿ ಅಮರ್ ಸಿಂಗ್ ಕೂಡಾ ಸುನಂದಾ ಬಗ್ಗೆ ಮಾತನಾಡುತ್ತಾ, ಆಕೆ ಒಮ್ಮೆ ನನ್ನ ಮುಂದೆ ಗೊಳೋ ಎಂದು ಅತ್ತುಬಿಟ್ಟಳು, ಐಪಿಎಲ್ ಹಗರಣದಿಂದ ಹೊರಬಂದರೆ ಸಾಕು ಎಂದಿದ್ದಳು ಎಂದು ಹೇಳಿದ್ದರು. ಅಮರ್ ಸಿಂಗ್ ಹಾಗೂ ಸುನಂದಾ ಕುಟುಂಬಕ್ಕೆ ನಿಕಟ ನಂಟಿರುವುದು ಎಲ್ಲರಿಗೂ ಗೊತ್ತೇ ಇದೆ. ಅದರೆ, ಅಮರ್ ಸಿಂಗ್ ಅವರ ಬಳಿ ಸುನಂದಾ ನಿಜಕ್ಕೂ ಐಪಿಎಲ್ ವಿಷಯಕ್ಕಾಗಿ ಕಣ್ಣೀರಿಟ್ಟರೇ ಎಂಬುದನ್ನು ಪತ್ತೆ ಹಚ್ಚಲು ಎಸ್ ಐಟಿ ಈಗ ಮುಂದಾಗಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications