ಸುನಂದಾ ಹತ್ಯೆ ಪ್ರಕರಣ: ಅಮರ್ ಸಿಂಗ್ ಗೆ ಸಮನ್ಸ್
ನವದೆಹಲಿ, ಜ.28: ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಮಾಜಿ ಮುಖಂಡ ಅಮರ್ ಸಿಂಗ್ ಅವರಿಗೆ ವಿಶೇಷ ತನಿಖಾ ತಂಡ ಸಮನ್ಸ್ ಬುಧವಾರ ಜಾರಿಗೊಳಿಸಿದೆ.
ಸುನಂದಾ ಪುಷ್ಕರ್ ಕೊಲೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ದೆಹಲಿಯ ವಿಶೇಷಾ ತನಿಖಾ ಅಧಿಕಾರಿಗಳು, ಅಮರ್ ಸಿಂಗ್ ಅವರನ್ನು ವಿಚಾರಣೆಗೊಳಪಡಿಸಿ ಹೆಚ್ಚಿನ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ. ಸುನಂದಾ ಸಾವು, ಐಪಿಎಲ್ ತಂಡಗಳು, ಹಗರಣದ ಬಗ್ಗೆ ಅಮರ್ ಸಿಂಗ್ ಬಳಿ ಹೆಚ್ಚಿನ ಮಾಹಿತಿ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ. [ಶಶಿ ತರೂರ್ಗೆ ಸಿಟ್ ಕೇಳಿದ 6 ಪ್ರಮುಖ ಪ್ರಶ್ನೆಗಳು]

ಐಪಿಎಲ್ ವಿವಾದ: ಇತ್ತೀಚೆಗೆ ಶಶಿ ತರೂರ್ ಅವರನ್ನು ಎಸ್ ಐಟಿ ವಿಚಾರಣೆಗೊಳಪಡಿಸಿತ್ತು. ನಂತರಹಿರಿಯ ಪತ್ರಕರ್ತೆ ನಳಿನಿ ಸಿಂಗ್ ಅವರನ್ನು ವಿಚಾರಣೆಗೊಳಪಡಿಸಲು ಎಸ್ ಐಟಿ ಸಜ್ಜಾಯಿತು. ಇದೆಲ್ಲವೂ ಸುನಂದಾ ಕೊಲೆ ಹಾಗೂ ಐಪಿಎಲ್ ಸುತ್ತಾ ಹುಟ್ಟಿಕೊಂಡಿರುವ ಅನುಮಾನದ ಹುತ್ತವನ್ನು ತುಂಡರಿಸುವುದೇ ಆಗಿದೆ. [ಪತ್ರಕರ್ತೆ ನಳಿನಿ ಸಿಂಗ್ ವಿಚಾರಣೆ]
ಪಾಕಿಸ್ತಾನಿ ಪತ್ರಕರ್ತೆ ತರಾರ್ ಹಾಗೂ ಶಶಿ ತರೂರ್ ನಡುವೆ ನಡೆದಿದೆ ಎನ್ನಲಾದ ಪ್ರಣಯ ಸಂದೇಶ ವಿನಿಮಯದ ಬಗ್ಗೆ ಸುನಂದಾ ಅವರು ನಳಿನಿ ಬಳಿ ಹೇಳಿಕೊಂಡಿದ್ದರು ಎಂದು ನಳಿನಿ ಸಿಂಗ್ ಹೇಳಿಕೆ ನೀಡಿದ ಬೆನ್ನಲ್ಲೇ ವಿಚಾರಣೆ ಎದುರಿಸಬೇಕಾಯಿತು.
ಅದೇ ರೀತಿ ಅಮರ್ ಸಿಂಗ್ ಕೂಡಾ ಸುನಂದಾ ಬಗ್ಗೆ ಮಾತನಾಡುತ್ತಾ, ಆಕೆ ಒಮ್ಮೆ ನನ್ನ ಮುಂದೆ ಗೊಳೋ ಎಂದು ಅತ್ತುಬಿಟ್ಟಳು, ಐಪಿಎಲ್ ಹಗರಣದಿಂದ ಹೊರಬಂದರೆ ಸಾಕು ಎಂದಿದ್ದಳು ಎಂದು ಹೇಳಿದ್ದರು. ಅಮರ್ ಸಿಂಗ್ ಹಾಗೂ ಸುನಂದಾ ಕುಟುಂಬಕ್ಕೆ ನಿಕಟ ನಂಟಿರುವುದು ಎಲ್ಲರಿಗೂ ಗೊತ್ತೇ ಇದೆ. ಅದರೆ, ಅಮರ್ ಸಿಂಗ್ ಅವರ ಬಳಿ ಸುನಂದಾ ನಿಜಕ್ಕೂ ಐಪಿಎಲ್ ವಿಷಯಕ್ಕಾಗಿ ಕಣ್ಣೀರಿಟ್ಟರೇ ಎಂಬುದನ್ನು ಪತ್ತೆ ಹಚ್ಚಲು ಎಸ್ ಐಟಿ ಈಗ ಮುಂದಾಗಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications