ಸುನಂದಾ ಪುಷ್ಕರ್ ಸಾವು ಅಸಹಜ : ದೆಹಲಿ ಹೈಕೋರ್ಟ್
ನವದೆಹಲಿ, ಆಗಸ್ಟ್ 30 : ಸುನಂದಾ ಪುಷ್ಕರ್ ಅವರ ನಿಗೂಢ ಸಾವಿನ ಪ್ರಕರಣದ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್, ಅವರ ಸಾವು ಸಹಜವಾಗಿರಲಿಲ್ಲ ಎಂದು ಹೇಳಿದ್ದು, ತನಿಖೆ ವಿಳಂಬವಾಗುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಸುನಂದಾ ಪುಷ್ಕರ್ ಅವರ ಸಾವಿಗೆ ಸಂಬಂಧಿಸಿದಂತೆ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ಇನ್ನೆರಡು ವಾರದಲ್ಲಿ ತಿಳಿಸಬೇಕು, ಅಂತಿಮ ವರದಿ ಸಲ್ಲಿಸಬೇಕೆಂದು ದೆಹಲಿ ಹೈಕೋರ್ಟ್ ಪೊಲೀಸರಿಗೆ ತಾಕೀತು ಮಾಡಿದೆ. ದೆಹಲಿ ಪೊಲೀಸರು ಜವಾಬ್ದಾರಿಯುತವಾಗಿ ತನಿಖೆ ನಡೆಸುತ್ತಿಲ್ಲ ಎಂದು ತೀವ್ರವಾಗಿ ಟೀಕಿಸಿದೆ.

ತನಿಖೆ ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಜಿಎಸ್ ಸಿಸ್ತಾನಿ ಮತ್ತು ಚಂದರ್ ಶೇಕರ್ ಅವರು, ಈ ಘಟನೆ ನಡೆದಿದ್ದು 2014ರ ಜನವರಿಯಲ್ಲಾದರೂ, ತನಿಖೆಯಲ್ಲಿ ಯಾವುದೇ ಯಶಸ್ಸನ್ನು ಏಕೆ ಸಾಧಿಸಿಲ್ಲ ಎಂದು ತರಾಟಾಗೆ ತೆಗೆದುಕೊಂಡರು.
ಜನವರಿ 17, 2014ರಂದು ದಕ್ಷಿಣ ದೆಹಲಿಯ ಪಂಚತಾರಾ ಹೋಟೆಲ್ ನಲ್ಲಿ, ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಹೆಂಡತಿ ಸುನಂದಾ ಪುಷ್ಕರ್ ಅವರು ನಿಗೂಢವಾಗಿ ಸಾವಿಗೀಡಾಗಿದ್ದರು. ಈ ಸಾವನ್ನು ಅಸಹಜ ಸಾವೆಂದು ಬಣ್ಣಿಸಿರುವ ಸುಬ್ರಮಣಿಯನ್ ಸ್ವಾಮಿಯವರು, ತನಿಖೆಯ ದಾರಿ ತಪ್ಪಿಸುವ ಉದ್ದೇಶದಿಂದಲೇ ವೈಜ್ಞಾನಿಕ ವರದಿ ತರಿಸಿಕೊಳ್ಳುವಲ್ಲಿ ನಿಧಾನ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಅಡಿಷನಲ್ ಸಾಲಿಸಿಟರ್ ಜನರಲ್ ಸಂಜಯ್ ಜೈನ್ ಅವರು, ತನಿಖೆಯಲ್ಲಿ ಯಾವುದೇ ವಿಳಂಬ ಮಾಡುತ್ತಿಲ್ಲ, ತನಿಖಾದಳ ನಡೆಸಿರುವ ತನಿಖೆಯ ವರದಿಯನ್ನು ನ್ಯಾಯಾಲಯ ಪರಿಶೀಲಿಸಬಹುದು ಎಂದು ಹೇಳಿದಾಗ, ಹಾಗೆಲ್ಲ ಪರಿಶೀಲಿಸುವುದು ಸರಿಯಲ್ಲ, ಆದರೆ, ಅಂತಿಮ ವರದಿಯನ್ನು ಇನ್ನೆರಡು ವಾರದಲ್ಲಿ ಸಲ್ಲಿಸತಕ್ಕದ್ದು ಎಂದು ನ್ಯಾಯಮೂರ್ತಿಗಳು ತಾಕೀತು ಮಾಡಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications