ಸುನಂದಾ ಪುಷ್ಕರ್ ಹತ್ಯೆ: ಎಫ್ ಬಿಐ ನೆರವು ಕೋರಿದ ದೆಹಲಿ ಪೊಲೀಸರು
ನವದೆಹಲಿ, ಆಗಸ್ಟ್ 05: ಕಾಂಗ್ರೆಸ್ ಸಂಸದ, ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣದ ನಿಗೂಢತೆ ಇನ್ನೂ ಬಯಲಾಗಿಲ್ಲ. ಎರಡು ವರ್ಷ ಕಳೆದರೂ ದೆಹಲಿ ಪೊಲೀಸರಿಗೆ ಸುನಂದಾ ಸಾವನ್ನಪ್ಪಿದ್ದು ಹೇಗೆ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಈ ಕುರಿತಂತೆ ದೆಹಲಿ ಪೊಲೀಸರು ಈಗ ಅಮೆರಿಕದ ತನಿಖಾ ಸಂಸ್ಥೆ ಎಫ್ ಬಿಐ ನೆರವು ಕೋರಿದ್ದಾರೆ.
ದೆಹಲಿ ಪೊಲೀಸರ ವಿಶೇಷ ತನಿಖಾ ತಂಡದ ಸದಸ್ಯರು ಸುನಂದಾ ಸಾವಿನ ರಹಸ್ಯ ತಿಳಿಯಲು ಫೆಡರಲ್ ಬ್ಯುರೋ ಆಫ್ ಇನ್ವೇಸ್ಟಿಗೇಷನ್ ಸಹಾಯ ಬಯಸಿದ್ದಾರೆ.
ಸುನಂದಾ ಸಾವಿಗೆ ಸಂಬಂಧಿಸಿದಂತೆ ಹಲವು ಅನುಮಾನಗಳು ವ್ಯಕ್ತವಾಗಿತ್ತು. ಮೃತದೇಹದ ಅಂಗಾಂಗ ಮಾದರಿಯನ್ನು ವಿಶೇಷ ವೈಜ್ಞಾನಿಕ ಪರೀಕ್ಷೆಗಾಗಿ ಅಮೆರಿಕದ ಎಫ್ಬಿಐ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಪರಿಶೀಲನೆ ಬಳಿಕ ಸುನಂದಾ ಪುಷ್ಕರ್ ಅವರು ಪೋಲೋನಿಯಂ ಅಥವಾ ವಿಷ ಕಿರಣಗಳಿಂದ ಸಾವನ್ನಪ್ಪಿಲ್ಲ ಎಂದು ವರದಿ ಬಂದಿತ್ತು.

2015ರಲ್ಲಿ ಎಫ್ ಬಿಐನಿಂದ ಸುನಂದಾ ಅವರ ವಿಸೇರಾ ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ.ವಿಸೇರಾದಲ್ಲಿ ವಿಷದ ಅಂಶ ಇಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ. ಆದರೆ, ಈಗ ಯಾವ ಸುಳಿವು ಹಿಡಿದುಕೊಂಡು ಪೊಲೀಸರು ಮತ್ತೆ ತನಿಖೆ ಮುಂದುವರೆಸಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ.
51 ವರ್ಷ ವಯಸ್ಸಿನ ಸುನಂದಾ ಪುಷ್ಕರ್ ಅವರು ಜನವರಿ 2014 ರಲ್ಲಿ ಹೋಟೆಲ್ ರೂಮೊಂದರಲ್ಲಿ ಶವವಾಗಿ ಪತ್ತೆಯಾಗಿದ್ದರು. ಸುನಂದಾ ಸಾವಿಗೆ ವಿಷಪ್ರಾಶನ ಕಾರಣ ಎಂದು ಮೊದಲಿಗೆ ಅನುಮಾನ ವ್ಯಕ್ತವಾಗಿತ್ತು. ಏಮ್ಸ್ ವೈದ್ಯರಿಂದ ಈ ಬಗ್ಗೆ ಪರೀಕ್ಷೆ ಸಾಧ್ಯವಿಲ್ಲದ ಕಾರಣ ಎಫ್ ಬಿಐನ ನೆರವು ಪಡೆಯಲಾಗಿತ್ತು.
ಸುನಂದಾರ ಪತಿ 60 ವರ್ಷ ವಯಸ್ಸಿನ ಶಶಿ ತರೂರ್ ಅವರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ಬಾರಿ ವಿಚಾರಣೆಗೊಳಪಡಿಸಲಾಯಿತು. ಆರೇಳು ಮಂದಿಗೆ ಪಾಲಿಗ್ರಾಫ್ ಟೆಸ್ಟ್ ಕೂಡಾ ನಡೆಯಿತು. ಎರಡು ವರ್ಷ ಕಳೆದರೂ ಸುನಂದಾ ಸತ್ತದ್ದು ಹೇಗೆ ಎಂಬ ಪ್ರಶ್ನೆ ಹಾಗೆ ಉಳಿದಿದೆ. ಹೀಗಾಗಿ ಎಫ್ ಬಿಐ ನೆರವು ಪಡೆದು ಕೇಸ್ ಕ್ಲೋಸ್ ಮಾಡಲು ದೆಹಲಿಯ ವಿಶೇಷ ತನಿಖಾ ತಂಡ ನಿರ್ಧರಿಸಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications