ಸುನಂದಾ ಪುಷ್ಕರ್ ಸಾವಿನ ಹಿಂದೆ ವಿದೇಶಿಗನ ಕೈವಾಡ?
ನವದೆಹಲಿ, ನ. 14: ಸುನಂದಾ ಪುಷ್ಕರ್ ಸಾವಿನ ಹಿಂದೆ ವಿದೇಶಿಗನೊಬ್ಬನ ಕೈವಾಡವಿದೆಯೆ? ಪಾಕಿಸ್ತಾನ ಅಥವಾ ದುಬೈ ಪ್ರಜೆಯೊಬ್ಬನು ಭಾಗಿಯಾಗಿದ್ದಾನೆಯೇ? ಹೀಗೊಂದು ಅನುಮಾನದ ಎಳೆ ಸಿಬಿಐ ಪೊಲೀಸರನ್ನು ಕಾಡತೊಡಗಿದೆ.
ಜನವರಿ 17 ರಂದು ನಿಗೂಢ ಸಾವನ್ನಪ್ಪಿದ ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಸಾವು ಪ್ರತಿದಿನ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪ್ರಕರಣದ ಮೂಲ ಬೇರುಗಳು ಪಾಕಿಸ್ತಾನ ಅಥವಾ ದುಬೈನಲ್ಲಿ ಇರಬಹುದು ಎಂದು ಸಿಬಿಐ ಶಂಕೆ ವ್ಯಕ್ತಪಡಿಸಿದೆ.[ಸುನಂದಾ ದೇಹದಲ್ಲಿತ್ತು ವಿಷದ ಅಂಶ]

ಹಿರಿಯ ಅಧಿಕಾರಿಗಳು ಹೇಳುವಂತೆ ಸಾವಿನಲ್ಲಿ ವಿದೇಶಿಗನೊಬ್ಬ ಪಾಲ್ಗೊಂಡಿದ್ದಾನೆ. ಆತ ಪಾಕಿಸ್ತಾನ ಅಥವಾ ದುಬೈನಿಂದ ಬಂದಿಳಿದಿರಬಹುದು. ಈ ಹಿನ್ನೆಲೆಯಲ್ಲಿ ಜನವರಿ 17 ಮತ್ತು ಹಿಂದಿನ ಒಂದೆರಡು ದಿನ ವಿಮಾನ ಪ್ರಯಾಣ ಮಾಡಿದವರ ಪಟ್ಟಿ ಸಿದ್ಧಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದಕ್ಕೆ ಭಾರತದ ಗುಪ್ತಚರ ದಳ ಮತ್ತು ವಿಮಾನ ಯಾನ ಖಾತೆಯ ನೆರವು ಪಡೆಯಲಾಗುವುದು ಎಂದು ತಿಳಿಸಿದ್ದಾರೆ.[ಸುನಂದಾಗೆ ರಷ್ಯನ್ ವಿಷ, ಮೈತುಂಬಾ ಗಾಯ!]
ಸುನಂದಾ ದೇಹದ ಭಾಗಗಳನ್ನು ಪರಿಶೀಲಿಸಿದಾಗ ಅನೇಕ ಅಂಶಗಳು ಬೆಳಕಿಗೆ ಬಂದಿವೆ, ಆಕೆಯ ಗುಪ್ತಾಂಗದಲ್ಲಿ ವಿಷದ ಅಂಶ ಇತ್ತು ಎಂಬುದನ್ನು ಸ್ಪಷ್ಟಪಡಿಸಲಾಗಿದೆ. ಅಲ್ಲದೇ ಇತ್ತೀಚೆಗೆ ಸುನಂದಾ ಉಳಿದುಕೊಂಡಿದ್ದ ಕೋಣೆಯಲ್ಲಿ ಗಾಜಿನ ಚೂರುಗಳು ಕಂಡು ಬಂದಿವೆ. ಆಕೆಯ ಚಪ್ಪಲಿ ಮತ್ತು ಕೆಲ ಬಟ್ಟೆಗಳನ್ನು ಕಳ್ಳತನ ಮಾಡಲಾಗಿದೆ ಎಂದೂ ವರದಿಯಾಗಿತ್ತು. ಒಟ್ಟಿನಲ್ಲಿ ಪ್ರಕರಣ ಮತ್ತಷ್ಟು ಕಗ್ಗಂಟಾಗುತ್ತಿದ್ದು ಸಿಬಿಐ ಮುಂದೆ ಪ್ರಕರಣದ ಸತ್ಯಾಸತ್ಯತೆ ಬಯಲಿಗೆಳೆಯುವ ಸವಾಲಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications