Sunetra Pawar: ಅಜಿತ್ ಪವಾರ್ ಉತ್ತರಾಧಿಕಾರಿಯಾಗಿ ಪತ್ನಿ ಸುನೇತ್ರಾ; ಉಪಮುಖ್ಯಮಂತ್ರಿಯಾಗಿ ನಾಳೆಯೇ ಪ್ರಮಾಣವಚನ
ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ನಿಧನದ ಹಿನ್ನೆಲೆ ಪತ್ನಿ ಸುನೇತ್ರಾ ಪವಾರ್ ಅವರು ಶನಿವಾರ ಬೆಳಿಗ್ಗೆ 11 ಗಂಟೆಗೆ ನೂತನ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ಅವರು ಮಹಾರಾಷ್ಟ್ರದ ರಾಜಕೀಯ ಇತಿಹಾಸದಲ್ಲಿ ಪ್ರಮುಖ ಸ್ಥಾನ ಪಡೆಯಲಿದ್ದಾರೆ. ಅಜಿತ್ ಪವಾರ್ ಉತ್ತರಾಧಿಕಾರಿಯಾಗಿ ಪತ್ನಿ ಸುನೇತ್ರಾ ಅವರು ಮಹಾರಾಷ್ಟ್ರ ರಾಜಕಾರಣಕ್ಕೆ ಹೊಸ ನಾಂದಿ ಹಾಡಲಿದ್ದಾರೆ.
ರಾಜಕಾರಣಕ್ಕೆ ಹೊಸಬರಲ್ಲ
ಸುನೇತ್ರಾ ಪವಾರ್ ಅವರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕಿಯಾಗಿದ್ದು, ಪ್ರಸ್ತುತ ರಾಜ್ಯಸಭಾ ಸದಸ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 1963 ಅಕ್ಟೋಬರ್ 18ರಂದು ಮಹಾರಾಷ್ಟ್ರದ ಧಾರಾಶಿವ್ನಲ್ಲಿ ಜನಿಸಿದ ಸುನೇತ್ರಾ ಅವರು, ಪ್ರಭಾವಿ ರಾಜಕೀಯ ಹಿನ್ನೆಲೆಯ ಕುಟುಂಬದಿಂದ ಬಂದವರು. ಅಲ್ಲದೆ ಅವರು ಮಾಜಿ ರಾಜ್ಯ ಸಚಿವ ಪದ್ಮಸಿಂಹ ಪಾಟೀಲ್ ಅವರ ಸಹೋದರಿ ಕೂಡ. ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ದೀರ್ಘ ಕಾಲ ಸಕ್ರಿಯರಾಗಿದ್ದ ಸುನೇತ್ರಾ ಪವಾರ್, 2024ರಲ್ಲಿ ಸಕ್ರಿಯ ರಾಜಕೀಯ ಪ್ರವೇಶ ಮಾಡಿದರು.

2024ರ ಲೋಕಸಭಾ ಚುನಾವಣೆಯಲ್ಲಿ ಅವರು ಬಾರಾಮತಿ ಕ್ಷೇತ್ರದಿಂದ ತಮ್ಮ ಸೊಸೆ ಸುಪ್ರಿಯಾ ಸುಳೆ ವಿರುದ್ಧ ಸ್ಪರ್ಧಿಸಿ, ಸುಮಾರು 1.5 ಲಕ್ಷ ಮತಗಳ ಅಂತರದಿಂದ ಸೋಲು ಕಂಡಿದ್ದರು. ಬಳಿಕ, ಪ್ರಫುಲ್ ಪಟೇಲ್ ತೆರವುಗೊಳಿಸಿದ ಸ್ಥಾನಕ್ಕೆ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಪರಿಸರ ಸಂರಕ್ಷಣೆಯಲ್ಲೂ ಅವರು ಸಕ್ರಿಯರಾಗಿದ್ದು 2010ರಲ್ಲಿ ಸ್ಥಾಪಿಸಿದ ಎನ್ವಿರಾನ್ಮೆಂಟಲ್ ಫೋರಂ ಆಫ್ ಇಂಡಿಯಾ (ಇಎಫ್ಒಐ) ಮೂಲಕ ಪರಿಸರ ಗ್ರಾಮಗಳು, ಜೈವಿಕ ಕೃಷಿ ಉತ್ತೇಜನಕ್ಕೆ ಶ್ರಮಿಸಿದ್ದಾರೆ. ಈ ಸೇವೆಗೆ ಅವರಿಗೆ 'ಗ್ರೀನ್ ವಾರಿಯರ್ ಅವಾರ್ಡ್' ಕೂಡ ಸಿಕ್ಕಿದೆ.
ಶಿಕ್ಷಣ ಕ್ಷೇತ್ರದಲ್ಲೂ ಸಾಧನೆ
ಇನ್ನು ಶಿಕ್ಷಣ ಕ್ಷೇತ್ರದಲ್ಲಿಯೂ ಅವರ ಪಾತ್ರ ಮಹತ್ವದ್ದಾಗಿದ್ದು, 25,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ವಿದ್ಯಾ ಪ್ರತಿಷ್ಠಾನ ಟ್ರಸ್ಟ್ನ ಟ್ರಸ್ಟಿಯಾಗಿದ್ದಾರೆ. ಕೈಗಾರಿಕಾ ವಲಯದಲ್ಲಿ ಬಾರಾಮತಿ ಟೆಕ್ಸ್ಟೈಲ್ ಕಂಪನಿಯ ಅಧ್ಯಕ್ಷೆ ಆಗಿರುವ ಅವರು, 2011ರಿಂದ ಫ್ರಾನ್ಸ್ನ ವಿಶ್ವ ಉದ್ಯಮಶೀಲತೆ ವೇದಿಕೆಯ ಚಿಂತನಾ ಮಂಡಳಿಯ ಸದಸ್ಯೆಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
1985ರಲ್ಲಿ ಅಜಿತ್ ಪವಾರ್ ಅವರನ್ನು ವಿವಾಹವಾಗಿರುವ ಸುನೇತ್ರಾ ಪವಾರ್ ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಹಿರಿಯ ಪುತ್ರ ಪಾರ್ಥ್ ಪವಾರ್ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಕಿರಿಯ ಪುತ್ರ ಜಯ್ ಪವಾರ್ ಉದ್ಯಮಿಯಾಗಿ ಕುಟುಂಬದ ವ್ಯವಹಾರಗಳನ್ನು ನಿರ್ವಹಿಸುತ್ತಿದ್ದಾರೆ. ಇದೀಗ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಅವರ ಪ್ರಮಾಣ ವಚನ ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಿಸಲಿದ್ದಾರೆ.
ಮಹಾರಾಷ್ಟ್ರ ರಾಜ್ಯದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ವಿಮಾನ ಬುಧವಾರ ಪತನಗೊಂಡು ಅವರು ಮತ್ತು ವಿಮಾನದಲ್ಲಿದ್ದ ಇತರ ನಾಲ್ವರು ಸಾವನ್ನಪ್ಪಿದ್ದರು. ಮುಂಬೈನಿಂದ ಪವಾರ್ ಅವರ ತವರು ನಗರವಾದ ಬಾರಾಮತಿಗೆ ತೆರಳುತ್ತಿದ್ದಾಗ ವಿಮಾನವು ರಾಜ್ಯ ರಾಜಧಾನಿಯಿಂದ ಸುಮಾರು 254 ಕಿ.ಮೀ (159 ಮೈಲುಗಳು) ದೂರದಲ್ಲಿ ತೆರೆದ ಮೈದಾನದಲ್ಲಿ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡಿತ್ತು.
ಪವಾರ್ ಮಹಾರಾಷ್ಟ್ರದಲ್ಲಿ ಎರಡನೇ ಅತಿ ಹೆಚ್ಚು ಚುನಾಯಿತರಾಗಿ ಸೇವೆ ಸಲ್ಲಿಸಿದ್ದರು. ಅವರು ರಾಜ್ಯ ಸರ್ಕಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾರತೀಯ ಜನತಾ ಪಕ್ಷದ (ಬಿಜೆಪಿ) ಜೊತೆ ಮೈತ್ರಿ ಮಾಡಿಕೊಂಡಿದ್ದರು. 2023ರಲ್ಲಿ ವಿರೋಧ ಪಕ್ಷವಾದ ಎನ್ಸಿಪಿಯಿಂದ ಬೇರ್ಪಟ್ಟ ಒಂದು ಬಣವನ್ನು ಮುನ್ನಡೆಸಿದರು. ಮಹಾರಾಷ್ಟ್ರ ಸರ್ಕಾರದಲ್ಲಿ ಅವರ ಅಕಾಲಿಕ ನಿಧನದಿಂದ ಖಾಲಿಯಾಗಿದ್ದ ಉಪಮುಖ್ಯಮಂತ್ರಿ ಸ್ಥಾನವನ್ನು ಇದೀಗ ಅವರ ಪತ್ನಿಯಾದ ಸುನೇತ್ರಾ ಪವಾರ್ ತುಂಬಲಿದ್ದಾರೆ. ಈ ಮೂಲಕ ಪವಾರ್ ಅವರ ಉತ್ತರಾಧಿಕಾರತ್ವ ಮುಂದುವರಿದಿದೆ.
-
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications