ರಜನಿಕಾಂತ್ ಹೊಸ ಪಕ್ಷ ಕಟ್ಟುವುದು ಗ್ಯಾರಂಟಿ?
ಬೆಂಗಳೂರು, ಆ.30 : ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬರುತ್ತಾರಾ? ಲೋಕಸಭೆ ಚುನಾವಣೆಯ ದಿನಗಳಿಂದಲೂ ಈ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಸದ್ಯದ ಮಾಹಿತಿ ಪ್ರಕಾರ 2016ರ ತಮಿಳುನಾಡು ವಿಧಾನಸಭೆ ಚುನಾವಣೆ ವೇಳೆಗೆ ರಜನಿ ರಾಜಕೀಯಕ್ಕೆ ಧುಮುಕಲಿದ್ದಾರೆ.
ರಜನಿಕಾಂತ್ ಅವರ ಕುಟುಂಬದವರು ಮತ್ತು ಸ್ನೇಹಿತರು ರಾಜಕೀಯಕ್ಕೆ ಬನ್ನಿ ಎಂದು ರಜನಿಗೆ ಸಲಹೆ ನೀಡುತ್ತಿದ್ದಾರೆ ಮತ್ತು ಒತ್ತಾಯಿಸುತ್ತಿದ್ದಾರೆ. ಅದರಲ್ಲೂ ಲೋಕಸಭೆ ಚುನಾವಣೆ ವೇಳೆಯಲ್ಲಿ ನರೇಂದ್ರ ಮೋದಿ ಅವರು ರಜನಿ ಅವರನ್ನು ಭೇಟಿ ಮಾಡಿ ಹೋದ ನಂತರ ಒತ್ತಡ ಹೆಚ್ಚಾಗಿದೆ. [ಮೋದಿ ಜತೆಯಲ್ಲಿ ಸೂಪರ್ ಸ್ಟಾರ್ ರಜನಿ]

ಇತ್ತ ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಅಮಿತ್ ಶಾ ಅವರು ಸಹ ರಜನಿಗೆ ಕರೆ ಮಾಡಿ ರಾಜಕೀಯಕ್ಕೆ ಬನ್ನಿ ಎಂದು ಆಹ್ವಾನ ನೀಡುತ್ತಿದ್ದಾರೆ ಎನ್ನುತ್ತವೆ ರಜನಿ ಅವರ ಆಪ್ತ ಮೂಲಗಳು. ಆದ್ದರಿಂದ ರಜನಿಕಾಂತ್ ರಾಜಕೀಯಕ್ಕೆ ಬರುವ ಚಿಂತನೆ ನಡೆಸಿದ್ದಾರೆ. [ಚೌತಿ ಹಬ್ಬಕ್ಕೆ ರಜನಿ 'ಲಿಂಗಾ' ಚೂಟಿ ಫಸ್ಟ್ ಲುಕ್]
ಕುಸಿದ ಡಿಎಂಕೆ ಬಲ : ರಜನಿಕಾಂತ್ ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಅವರು ಪರಮಾಪ್ತರು ಎಂಬುದು ಎಲ್ಲರಿಗೂ ತಿಳಿದ ವಿಷಯ. ಆದ್ದರಿಂದ ರಜನಿಕಾಂತ್ ಇಷ್ಟುದಿನ ರಾಜಕೀಯಕ್ಕೆ ಬಂದಿರಲಿಲ್ಲ. ಡಿಎಂಕೆಗೆ ಪೈಪೋಟಿ ನೀಡುವುದು ಬೇಡ ಎಂದು ರಜನಿ ಮೌನವಹಿಸಿದ್ದರು. ಸದ್ಯ, ತಮಿಳುನಾಡಿನಲ್ಲಿ ಡಿಕೆಎಂಕೆ ಬಲ ಕುಸಿದಿದೆ. ಆದ್ದರಿಂದ ರಜನಿ ಅವರ ರಾಜಕೀಯ ಸೇರ್ಪಡೆಗೆ ವೇದಿಕೆ ಸಿದ್ಧಗೊಂಡಿದೆ.
2016ರಲ್ಲಿ ತಮಿಳುನಾಡಿನ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ರಾಜಕಾರಣಕ್ಕೆ ಬಂದು ಚುನಾವಣೆಗೆ ಸ್ಪರ್ಧಿಸುವಂತೆ ರಜನಿಕಾಂತ್ ಅವರಿಗೆ ಸ್ನೇಹಿತರು ಮತ್ತು ಕುಟುಂಬದವರು ಸಲಹೆ ನೀಡಿದ್ದಾರೆ. ನೀವು ರಾಜಕೀಯಕ್ಕೆ ಬಂದರೆ ನಿಮ್ಮ ಅಭಿಮಾನಿಗಳು ಜೊತೆ ನಿಲ್ಲುತ್ತಾರೆ ಎಂದು ಧೈರ್ಯ ತುಂಬಿದ್ದಾರೆ.
ಸ್ವಂತ ಪಕ್ಷ ಸ್ಥಾಪನೆ : ರಜನಿಕಾಂತ್ ಅವರ ಆಪ್ತರ ಪ್ರಕಾರ ರಜನಿ ಅವರು ಯಾವುದೇ ಪಕ್ಷ ಸೇರುವುದಿಲ್ಲ. ಬದಲಾಗಿ ತಮ್ಮದೇ ಸ್ವಂತ ಪಕ್ಷವನ್ನು ಸ್ಥಾಪಿಸಲಿದ್ದಾರೆ. ಚುನಾವಣೆ ಸಮಯದಲ್ಲಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಿದ್ದಾರೆ. ಸ್ವಂತ ಪಕ್ಷ ಸ್ಥಾಪಿಸಲು ರಜನಿಕಾಂತ್ ಸಹ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲೇ ಈ ಕುರಿತ ಅಂತಿಮ ನಿರ್ಧಾರ ಘೋಷಿಸಲಿದ್ದಾರೆ ಎಂದು ತಿಳಿದುಬಂದಿದೆ.
ಒಂದು ಕಡೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅಮ್ಮಾ ಬ್ರಾಂಡ್ಗಳ ಮೂಲಕ ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ವೇದಿಕೆ ಗಟ್ಟಿಗೊಳಿಸಿಕೊಳ್ಳುತ್ತಿದ್ದಾರೆ. ಇದೇ ಸಮಯಕ್ಕೆ ರಜನಿ ಅವರು ರಾಜಕೀಯಕ್ಕೆ ಧುಮುಕಿದರೆ, 2016ರ ವಿಧಾನಸಭೆ ಚುನಾವಣೆ ದೇಶದ ಗಮನಸೆಳೆಯುವುದರಲ್ಲಿ ಸಂಶಯವಿಲ್ಲ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications