ರಚನಾತ್ಮಕ ಟೀಕೆಯನ್ನು ನಮ್ಮ ಪ್ರಧಾನಿ ಸ್ವೀಕರಿಸದೇ ಇರುವುದು ದೊಡ್ಡ ತಪ್ಪು
Recommended Video
ನವದೆಹಲಿ, ಸೆ 30: " ಸಾರ್ವಜನಿಕ ವಲಯಗಳಿಂದ ಬರುವ ರಚನಾತ್ಮಕ ಟೀಕೆಗಳನ್ನು ಸ್ವೀಕರಿಸಲು ಸರಕಾರಕ್ಕೆ ಸಾಧ್ಯವಾಗದೇ ಇದ್ದರೆ, ಮೇಲಿಂದ ಮೇಲೆ ತಪ್ಪಾಗುತ್ತಿರುತ್ತದೆ" ಎಂದು ರಿಸರ್ವ್ ಬ್ಯಾಂಕಿನ ಮಾಜಿ ಗವರ್ನರ್ ರಘುರಾಂ ರಾಜನ್ ಹೇಳಿದ್ದಾರೆ.
" ಇತ್ತೀಚೆಗೆ ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಸಮಿತಿಯಲ್ಲಿದ್ದ ಇಬ್ಬರನ್ನು ವಜಾಗೊಳಿಸಲಾಯಿತು. ಸರಕಾರದ ವಿದೇಶ ಹಣಕಾಸು ನೀತಿಯನ್ನು ಇವರಿಬ್ಬರು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಹಾಗಾಗಿ, ಇವರನ್ನು ಸಮಿತಿಯಿಂದ ಹೊರಹಾಕಲಾಯಿತು" ಎಂದು ರಾಜನ್, ಸರಕಾರವನ್ನು ತರಾಟೆಗೆ ತೆಗೆದುಕೊಂಡರು.
" ಸರಕಾರದ ವಿರುದ್ದ ಮಾತನಾಡಿದರೆ, ದೂರವಾಣಿ ಕರೆಗಳು ಬರುತ್ತವೆ. ಇಲ್ಲವೆಂದರೆ, ಸರಕಾರದ ಪರವಾಗಿರುವವರಿಂದ ಟ್ರೋಲ್ ಗೆ ಒಳಗಾಗಬೇಕಾಗುತ್ತದೆ. ಹಾಗಾಗಿ, ಹೆಚ್ಚಿನ ಹಣಕಾಸು ಸಲಹೆಗಾರರು ಸುಮ್ಮನಾಗಿ ಬಿಡುತ್ತಾರೆ" ಎಂದು ರಘುರಾಂ ರಾಜನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

" ಖಾಸಗಿ ವಲಯದಲ್ಲಿ ಬಂಡವಾಳ ಹೂಡಿಕೆಯನ್ನು ಉತ್ತೇಜಿಸುವ ಸುಧಾರಣಾ ಕ್ರಮವನ್ನು ಸರಕಾರ ತುರ್ತಾಗಿ ತೆಗೆದುಕೊಳ್ಲಬೇಕಿದೆ" ಎಂದು ರಾಜನ್ ಹೇಳಿದ್ದಾರೆ.
" ಈಗಿರುವ ಆರ್ಥಿಕ ಹಿಂಜರಿತ ಕಳವಳಕಾರಿ" ಎಂದು ಹೇಳಿರುವ ರಘುರಾಂ ರಾಜನ್, " ಮುಂಬರುವ ದಿನಗಳಲ್ಲಿ ದೇಶ ದೊಡ್ಡಮಟ್ಟದ ಆರ್ಥಿಕ ಹಿನ್ನಡೆ ಎದುರಿಸುವ ಸಾಧ್ಯತೆ ಕಮ್ಮಿ" ಎಂದು ಹೇಳಿದ್ದಾರೆ.
ನರೇಂದ್ರ ಮೋದಿ ಸರಕಾರದ ಅಪನಗದೀಕರಣ ಮತ್ತು ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್ಟಿ) ರಘುರಾಂ ರಾಜನ್ ಹಲವು ಬಾರಿ ಟೀಕಿಸಿದ್ದರು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications