Baba Ramdev: ನೀವೇನೂ ಅಮಾಯಕರಲ್ಲ; ಬಾಬಾ ರಾಮ್ದೇವ್ಗೆ ಮತ್ತೆ ಛೀಮಾರಿ ಹಾಕಿದ ಸುಪ್ರೀಂಕೋರ್ಟ್
ಸುಪ್ರೀಂ ಕೋರ್ಟ್ ಎರಡನೇ ಬಾರಿ ಬಾಬಾ ರಾಮ್ದೇವ್ ಅವರಿಗೆ ಛೀಮಾರಿ ಹಾಕಿದೆ. ಅವರ ಬೇಜವಬ್ದಾರಿ ವರ್ತನೆಯನ್ನು ಟೀಕಿಸಿರುವ ಸುಪ್ರೀಂ ಕೋರ್ಟ್ "ನೀವೇನೂ ಮುಗ್ದರಲ್ಲ" ಎಂದು ಹೇಳಿದೆ. ಪತಂಜಲಿ ಆಯುರ್ವೇದ ಔಷಧೀಯ ಉತ್ಪನ್ನಗಳ ತಪ್ಪುದಾರಿಗೆಳೆಯುವ ಜಾಹೀರಾತುಗಳಿಗೆ ಸಂಬಂಧಿಸಿದಂತೆ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯ ಬಾಬಾ ರಾಮ್ದೇವ್ರನ್ನು ಟೀಕಿಸಿತು.
ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಮುಂದಿನ ವಿಚಾರಣೆ ಏಪ್ರಿಲ್ 23 ರಂದು ನಡೆಯಲಿದೆ ಎಂದು ಹೇಳಿದೆ.

ನ್ಯಾಯಾಲಯದಲ್ಲಿ ಹಾಜರಿದ್ದ ಬಾಬಾ ರಾಮ್ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಒಂದು ವಾರದ ಸಮಯವನ್ನು ನೀಡಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಬಾಬಾ ರಾಮ್ದೇವ್ ತಮ್ಮ ತಪ್ಪುಗಳಿಗೆ ಬೇಷರತ್ ಕ್ಷಮೆಯಾಚಿಸುವುದಾಗಿ ನ್ಯಾಯಾಲಕ್ಕೆ ತಿಳಿಸಿದರು.
ತಪ್ಪೊಪ್ಪಿಕೊಂಡ ಬಾಬಾ ರಾಮ್ದೇವ್
ಆ ಸಂದರ್ಭದಲ್ಲಿ ನಾವು ಮಾಡಿದ್ದು ಸರಿಯಲ್ಲ, ಇನ್ನು ಮುಂದೆ ನಾವು ಅದನ್ನು ನೆನಪಿಟ್ಟುಕೊಳ್ಳುತ್ತೇವೆ ಎಂದು ಹೇಳಿದರು.
ರಾಮ್ದೇವ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ನ್ಯಾಯಾಲಯ "ಕಾನೂನು ಎಲ್ಲರಿಗೂ ಸಮಾನವಾಗಿದೆ, ನೀವು ಏನು ಮಾಡಿದರೂ, ನಿಮ್ಮ ಕಾರ್ಯ ಮತ್ತು ನಮ್ಮ ಆದೇಶವನ್ನು ಅನುಸರಿಸಿ ಇದೆಲ್ಲವನ್ನೂ ಮಾಡಿದ್ದೀರಿ. ನೀವು ಗುಣಪಡಿಸಲಾಗದ ಕಾಯಿಲೆಗಳ ಬಗ್ಗೆ ಜಾಹೀರಾತು ನೀಡಲು ಸಾಧ್ಯವಿಲ್ಲ ಎಂದು ನಿಮಗೆ ತಿಳಿದಿದೆಯೇ?" ಎಂದು ಪ್ರಶ್ನೆ ಮಾಡಿತು.
ಇದಕ್ಕೆ ಉತ್ತರ ಕೊಟ್ಟ ರಾಮ್ದೇವ್ ಹಲವು ಪರೀಕ್ಷೆಗಳನ್ನು ನಡೆಸಿರುವುದಾಗಿ ಹೇಳಿದರು.
ಇದಕ್ಕೆ ಸಿಟ್ಟಾದ ಪೀಠವು, "ಇದು ಬೇಜವಾಬ್ದಾರಿ ವರ್ತನೆ. ನಿಮ್ಮ ಇತಿಹಾಸವು ಸರಿಯಾಗಿಲ್ಲ, ನಿಮ್ಮ ಕ್ಷಮೆಯನ್ನು ಸ್ವೀಕರಿಸಬೇಕೆ ಅಥವಾ ಬೇಡವೇ ಎಂದು ನಾವು ಯೋಚಿಸುತ್ತೇವೆ. ಹಲವು ಬಾರಿ ನೀವು ನಿಯಮಗಳನ್ನು ಉಲ್ಲಂಘಿಸಿದ್ದೀರಿ, ನ್ಯಾಯಾಲಯದಲ್ಲಿ ಏನು ನಡೆಯುತ್ತಿದೆ ಎಂದು ಏನೂ ಗೊತ್ತಿಲ್ಲದೇ ಇರುವುದಷ್ಟು ಮುಗ್ಧರಲ್ಲ ಎಂದು ಹೇಳಿದೆ.
ನ್ಯಾಯಮೂರ್ತಿ ಅಮಾನುಲ್ಲಾ ಖಾನ್ ಅವರು, ನೀವು ಮನಸಾರೆ ಕ್ಷಮೆಯನ್ನು ಕೇಳುತ್ತಿಲ್ಲ ಎಂದು ರಾಮ್ದೇವ್ ಅವರಿಗೆ ಹೇಳಿದರು.
ಏಪ್ರಿಲ್ 10 ರಂದು, ಸುಪ್ರೀಂ ಕೋರ್ಟ್ ಬಾಬಾ ರಾಮ್ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರ "ಬೇಷರತ್ ಕ್ಷಮೆ" ಯನ್ನು ವಜಾಗೊಳಿಸಿತು, ಅವರ ಕ್ರಮಗಳು ಉದ್ದೇಶಪೂರ್ವಕವಾಗಿದ್ದು, ಹಲವು ಬಾರಿ ನಿಯಮಗಳ ಉಲ್ಲಂಘೆಯಾಗಿದೆ ಎಂದು ಆದೇಶಗಳಲ್ಲಿ ತಿಳಿಸಿತು.
ಏಪ್ರಿಲ್ 10 ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿಗಳಾದ ಕೊಹ್ಲಿ ಮತ್ತು ಅಮಾನುಲ್ಲಾ ಅವರ ಅದೇ ಪೀಠವು ಪತಂಜಲಿ ಆಯುರ್ವೇದವನ್ನು ತೀವ್ರವಾಗಿ ಟೀಕಿಸಿತು ಮತ್ತು "ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಲಘುವಾಗಿ ಪರಿಗಣಿಸಿದೆ" ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.
ಪತಂಜಲಿ ಉತ್ಪನ್ನಗಳಿಗೆ ಲೈಸೆನ್ಸ್ ನೀಡಿದ್ದಕ್ಕಾಗಿ ಉತ್ತರಾಖಂಡ ಸರ್ಕಾರಕ್ಕೂ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. "ನೀವು ಅಂಚೆ ಕಚೇರಿಯಂತೆ ಕೆಲಸ ಮಾಡುತ್ತಿದ್ದೀರಾ" ಎಂದು ಹೇಳಿದೆ.
-
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ












Click it and Unblock the Notifications