Supreme Court: ಅತೀಕ್ ಹತ್ಯೆಯ ತನಿಖೆಗೆ ಕೋರಿ ಸಲ್ಲಿಸಲಾದ ಮನವಿ ಆಲಿಸಲು ಸುಪ್ರೀಂ ಕೋರ್ಟ್ ಸಮ್ಮತಿ
ನವದೆಹಲಿ ಏಪ್ರಿಲ್ 18: ಕ್ರಿಮಿನಲ್ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರ ಹತ್ಯೆಗಳ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಒಪ್ಪಿಕೊಂಡಿದೆ. ಏಪ್ರಿಲ್ 24 ರಂದು ಪ್ರಕರಣದ ವಿಚಾರಣೆ ನಡೆಯಲಿದೆ.
ಉತ್ತರ ಪ್ರದೇಶದಲ್ಲಿ ನಡೆದಿರುವ ನ್ಯಾಯಾಂಗೇತರ ಹತ್ಯೆಗಳ ಬಗ್ಗೆಯೂ ತನಿಖೆ ನಡೆಸುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಶನಿವಾರ ಪ್ರಯಾಗ್ರಾಜ್ನಲ್ಲಿ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಪತ್ರಕರ್ತರಂತೆ ನಟಿಸಿದ ಮೂವರು ವ್ಯಕ್ತಿಗಳು ಅಹ್ಮದ್ ಮತ್ತು ಅಶ್ರಫ್ ಅವರ ಮೇಲೆ ಗುಂಡಿನ ದಾಳಿ ಮಾಡಿದರು. ಘಟನೆಯಲ್ಲಿ ಅಹ್ಮದ್ ಮತ್ತು ಅಶ್ರಫ್ ಮೃತಪಟ್ಟಿದ್ದು, ಮೂವರನ್ನು ಬಂಧಿಸಲಾಗಿದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆರು ವರ್ಷಗಳ ಆಡಳಿತದಲ್ಲಿ ಅಸದ್ ಮತ್ತು ಅವರ ಸಹಚರರು ಸೇರಿದಂತೆ 183 ಕ್ರಿಮಿನಲ್ಗಳನ್ನು ಎನ್ಕೌಂಟರ್ಗಳಲ್ಲಿ ಕೊಲ್ಲಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಹೇಳಿದ್ದಾರೆ.
ಅಹ್ಮದ್ ಮತ್ತು ಆತನ ಸಹೋದರನನ್ನು ಹತ್ಯೆ ಮಾಡಿದ ಮೂವರು ಹಂತಕರನ್ನು ಪೊಲೀಸರು ಲವ್ಲೇಶ್ ತಿವಾರಿ, ಸನ್ನಿ ಸಿಂಗ್ ಮತ್ತು ಅರುಣ್ ಮೌರ್ಯ ಎಂದು ಗುರುತಿಸಿದ್ದಾರೆ. ದಾಳಿಕೋರರು ಇಪ್ಪತ್ತರ ಹರೆಯದವರಾಗಿದ್ದು ಪೋಲೀಸರಿಂದ ತಪ್ಪಿಸಿಕೊಳ್ಳುವ ಮೊದಲು "ಜೈ ಶ್ರೀ ರಾಮ್" ಘೋಷಣೆಗಳನ್ನು ಕೂಗಿದರು.

ಮೂವರನ್ನು ವಾರಾಂತ್ಯದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಅವರನ್ನು ಆರಂಭದಲ್ಲಿ ಪ್ರಯಾಗ್ರಾಜ್ನ ನೈನಿ ಜೈಲಿನಲ್ಲಿ ಇರಿಸಲಾಗಿತ್ತು. ಆದರೆ ಸೋಮವಾರ ಭದ್ರತೆಯ ಕಾರಣಕ್ಕಾಗಿ ಪ್ರತಾಪ್ಗಢ ಜೈಲಿಗೆ ವರ್ಗಾಯಿಸಲಾಯಿತು.
ಲಾರೆನ್ಸ್ ಬಿಷ್ಣಾಯ್ ಅವರ ಭಾಷಣದಿಂದ ಪ್ರೇರಿತರಾದ ಹಂತಕರು
ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಮಾಜಿ ಸಂಸದ ಅತೀಕ್ ಅಹ್ಮದ್ ಮತ್ತು ಅಶ್ರಫ್ ಅವರನ್ನು ಪೊಲೀಸರು ಬಂಧಿಸುವ ವೇಳೆ ಗುಂಡಿಕ್ಕಿ ಹತ್ಯೆಗೈದ ಮೂವರು ಹಂತಕರು ಜೈಲಿನಲ್ಲಿರುವ ಕ್ರಿಮಿನಲ್ ಲಾರೆನ್ಸ್ ಬಿಷ್ಣಾಯ್ ಅವರ ಭಾಷಣದಿಂದ ಆಕರ್ಷಿತರಾಗಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.
ಉತ್ತರ ಪ್ರದೇಶದಲ್ಲಿ, ಪ್ರಖ್ಯಾತ ರೌಡಿ ಮತ್ತು ಸಮಾಜವಾದಿ ಪಕ್ಷದ ಮಾಜಿ ಸಂಸದ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಕೊಲೆ ಪ್ರಕರಣದಲ್ಲಿ ಬಂಧಿಸಿ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಕೆಲವು ದಿನಗಳ ಹಿಂದೆ ಪೊಲೀಸರು ಅತೀಕ್ನ ಮಗನನ್ನು ಎನ್ಕೌಂಟರ್ನಲ್ಲಿ ಹೊಡೆದುರುಳಿಸಿದ್ದರು.
ಅತೀಕ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅನುಮತಿಸದಿದ್ದರೂ, ಪೊಲೀಸರು ಅವರನ್ನು ಮತ್ತು ಅವರ ಸಹೋದರನನ್ನು ವೈದ್ಯಕೀಯ ಪರೀಕ್ಷೆಗಾಗಿ ಪ್ರಯಾಗರಾಜ್ನಲ್ಲಿರುವ ವೈದ್ಯಕೀಯ ಕಾಲೇಜು ಕ್ಯಾಂಪಸ್ಗೆ ಕರೆದೊಯ್ದಿದ್ದರು. ಅವರನ್ನು ಸಂದರ್ಶಿಸಲು ಅಪಾರ ಸಂಖ್ಯೆಯ ಪತ್ರಕರ್ತರು ಸೇರಿದ್ದರು. ಪೊಲೀಸರನ್ನು ಕರೆತರುವ ವೇಳೆ ಸುದ್ದಿಗಾರರು ಕೇಳಿದ ಕೆಲ ಪ್ರಶ್ನೆಗಳಿಗೆ ಅತೀಕ್ ಉತ್ತರಿಸುತ್ತಿದ್ದರು.
ಇದೇ ಗುಂಪಿನಲ್ಲಿದ್ದ ಕೆಲವರು ಗುಂಡಿನ ದಾಳಿ ನಡೆಸಿದ್ದರಿಂದ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಸಾವನ್ನಪ್ಪಿದ್ದಾರೆ. ಶೂಟರ್ಗಳು ಪತ್ರಕರ್ತರಂತೆ ಕಾಣಿಸಿಕೊಂಡು ಗುಂಪನ್ನು ಪ್ರವೇಶಿಸಿದ್ದಾರೆ ಎಂದು ತಿಳಿದುಬಂದಿದೆ. ಕೊಲೆಯಲ್ಲಿ ಭಾಗಿಯಾದ ಲವ್ಲೆಶ್ ತಿವಾರಿ, ಸನ್ನಿ ಸಿಂಗ್ ಮತ್ತು ಅರುಣ್ ಮೌರ್ಯ ಅವರನ್ನು ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದಾರೆ.
ಈ ತನಿಖೆಯಲ್ಲಿ ಹಂತಕರು ಪೊಲೀಸರಿಗೆ ನಾನಾ ಮಾಹಿತಿ ನೀಡಿರುವುದು ಬೆಳಕಿಗೆ ಬಂದಿದೆ. ಕೊಲೆಯ ಹಿಂದಿನ ಮಾಸ್ಟರ್ ಮೈಂಡ್ ಸನ್ನಿ ಸಿಂಗ್ ಎಂಬುದು ಬಹಿರಂಗವಾಗಿದೆ. ವರದಿಗಳ ಪ್ರಕಾರ, ಖ್ಯಾತ ಕ್ರಿಮಿನಲ್ ಲಾರೆನ್ಸ್ ಬಿಷ್ಣಾಯ್ ಅವರ ದ್ವೇಷಪೂರಿತ ವೀಡಿಯೊಗಳಿಂದ ಸನ್ನಿ ಸಿಂಗ್ ಸ್ಫೂರ್ತಿ ಪಡೆದಿದ್ದಾರೆ ಎಂದು ಅವರು ವಿಚಾರಣೆ ವೇಳೆ ತಿಳಿಸಿದ್ದಾರೆ.
ಅದರಂತೆ ಸನ್ನಿ ಸಿಂಗ್ ಅತಿ ದೊಡ್ಡ ಕೊಲೆ ಮಾಡಲು ಸಂಚು ರೂಪಿಸಿದ್ದ ಎಂಬ ಮಾಹಿತಿ ಹೊರಬಿದ್ದಿದೆ. ಅದೇನೆಂದರೆ, ಕಳೆದ ವರ್ಷ ಮೇ 29ರಂದು ದೇಶವನ್ನೇ ಬೆಚ್ಚಿ ಬೀಳಿಸಿದ ಪಂಜಾಬ್ ನ ಖ್ಯಾತ ಸಂಗೀತಗಾರ ಸಿಧು ಮೂಸೆ ವಾಲಾ ಅವರ ಹತ್ಯೆಯಂತಹ ಕೊಲೆಯನ್ನು ಸನ್ನಿ ಸಿಂಗ್ ಮಾಡುವ ಕನಸು ಕಾಣುತ್ತಿದ್ದರು. ಇದಕ್ಕಾಗಿ ಅವರು ಲವ್ಲೆಶ್ ತಿವಾರಿ ಮತ್ತು ಅರುಣ್ ಮೌರ್ಯ ಅವರನ್ನು ಆಹ್ವಾನಿಸಿದ್ದಾರೆ.
ಮೂವರೂ ಸೇರಿ ಅತೀಕ್ ಅಹ್ಮದ್ನನ್ನು ಕೊಲ್ಲಲು ಸಂಚು ರೂಪಿಸಿದ್ದು ಇದೇ ಸನ್ನಿ ಸಿಂಗ್ ಮಾರ್ಗದರ್ಶನದಿಂದ ಎಂದು ತಿಳಿದು ಬಂದಿದೆ. ಈ ಮೂವರು ಪತ್ರಕರ್ತರ ವೇಷ ಧರಿಸಿ ಪೊಲೀಸರ ತನಿಖೆಯಿಂದ ತಪ್ಪಿಸಿಕೊಂಡು ಇತರ ಪತ್ರಕರ್ತರೊಂದಿಗೆ ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಪ್ರಿಯಾಗ್ರಾಜ್ ಆಸ್ಪತ್ರೆಗೆ ತೆರಳಿ ಅತೀಕ್ ಅಹ್ಮದ್ ಮತ್ತು ಅಶ್ರಫ್ ಮೇಲೆ ಗುಂಡು ಹಾರಿಸಿದ್ದಾರೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಳಿಕ ಇವರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಆರೋಪಿ ಮಾಸ್ಟರ್ಮೈಂಡ್ ಸನ್ನಿ ಸಿಂಗ್, ಲವ್ಲೇಶ್ ತಿವಾರಿ ಮತ್ತು ಅರುಣ್ ಮೌರ್ಯ ಅವರ ವಯಸ್ಸು 30 ವರ್ಷಕ್ಕಿಂತ ಕಡಿಮೆ ಎಂದು ಹೇಳಲಾಗುತ್ತಿದೆ. ಹತ್ಯೆಯ ನಂತರ ಪೊಲೀಸರು ಬಂಧಿಸಿ ಕರೆದೊಯ್ದಾಗ ಮೂವರು ಜೈಶ್ರೀರಾಮ್ ಎಂದು ಕೂಗಿದ್ದಾರೆ ಎಂದು ತಿಳಿದು ಬಂದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications