ರಾಜ್ಯಕ್ಕೆ ಹಿನ್ನಡೆ ಮದನಿಗೆ ಮಣಿಪಾಲ್ ಆಸ್ಪತ್ರೆಯಲ್ಲೇ ಚಿಕಿತ್ಸೆ
ನವದೆಹಲಿ, ನ.19: ಸಾಕಷ್ಟು ಚರ್ಚಗೆ ಗ್ರಾಸವಾಗಿದ್ದ ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಪ್ರಧಾನ ಆರೋಪಿ ಅಬ್ದುಲ್ ನಾಸಿರ್ ಮದನಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಆದರೆ ಇದೇ ವೇಳೆ, ಕರ್ನಾಟಕ ಸರಕಾರಕ್ಕೆ ಹೊರೆಯಾಗುವಂತೆ ಮದನಿಗೆ ಖಾಸಗಿ ಆಸ್ಪತ್ರೆಯಲ್ಲೇ ವೈದ್ಯಕೀಯ ಚಿಕಿತ್ಸೆ ಕಲ್ಪಿಸಬೇಕು ಎಂದು ಆದೇಶಿಸಿದೆ.
ಮದನಿಗೆ ಪ್ರತಿಷ್ಠಿತ ಐಷಾರಾಮಿ ಮಣಿಪಾಲ್ ಆಸ್ಪತ್ರೆಯಲ್ಲೇ ಚಿಕಿತ್ಸೆ ಕೊಡಿಸುವುದಕ್ಕೆ ಸುಪ್ರೀಂಕೋರ್ಟಿನಿಂದ ಅಂಕಿತ ಹಾಕಿಸುವಲ್ಲಿ ಖ್ಯಾತ ನ್ಯಾಯವಾದಿ ಪ್ರಶಾಂತ್ ಭೂಷಣ್ ಯಶಸ್ವಿಯಾಗಿದ್ದಾರೆ. ಮದನಿ ಪರ ಸೋಮವಾರ ವಾದ ಮಂಡಿಸಿದ ಆಮ್ ಆದ್ಮಿ ಪಕ್ಷದ ಜತೆ ಗುರುತಿಸಿಕೊಂಡಿರುವ ಪ್ರಶಾಂತ್ ಭೂಷಣ್, ಕರ್ನಾಟಕ ಸರಕಾರ ಹೇಳುವಂತೆ ವಿಕ್ಟೋರಿಯಾ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಅಲ್ಲ. ಆದ್ದರಿಂದ ಮದನಿಯನ್ನು ಮಣಿಪಾಲ್ ಆಸ್ಪತ್ರೆಗೇ ದಾಖಲಿಸಬೇಕು ಎಂದು ವಾದ ಮಂಡಿಸಿ, ಸರ್ವೋಚ್ಛ ನ್ಯಾಯಾಲಯದ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಅಂಧತ್ವ, ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ, ಪರಪ್ಪನ ಅಗ್ರಹಾರ ಜೈಲುವಾಸಿ, ಪಿಡಿಪಿ ನಾಯಕ ಅಬ್ದುಲ್ ನಾಸಿರ್ ಮದನಿ ಪ್ರಸ್ತುತ ಅಗರವಾಲ್ ಆಸ್ಪತ್ರೆಯಲ್ಲಿ ಕಣ್ಣಿನ ಚಿಕಿತ್ಸೆ ಪಡೆಯುತ್ತಿದ್ದಾನೆ.

ರಾಜ್ಯದ ಪ್ರತಿವಾದಕ್ಕೆ ಸುಪ್ರೀಂ ತಿರಸ್ಕಾರ
ಮಣಿಪಾಲ್ ಆಸ್ಪತ್ರೆ ಖಾಸಗಿ ಆಸ್ಪತ್ರೆ. ಸರಕಾರಿ ಸ್ವಾಮ್ಯದ ವಿಕ್ಟೋರಿಯಾ ಆಸ್ಪತ್ರೆ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಾಗಿದ್ದು, ಮದನಿಗೆ ಅಲ್ಲಿಯೇ ಚಿಕಿತ್ಸೇ ಕೊಡಿಸಬಹುದು ಎಂದು ರಾಜ್ಯ ಸರಕಾರದ ಪರ ನ್ಯಾಯವಾದಿಗಳಾದ ಎಚ್ಎಲ್ ಗೋಖಲೆ ಮತ್ತು ಚಲಮೇಶ್ವರ್ ಅವರು ಮಂಡಿಸಿದ ಪ್ರತಿವಾದವನ್ನು ಸುಪ್ರೀಂಕೋರ್ಟ್ ಪುರಸ್ಕರಿಸದೇ ಹೋಯಿತು.

ಮಣಿಪಾಲ್ ಚಿಕಿತ್ಸೆ ವೆಚ್ಚವನ್ನು ರಾಜ್ಯವೇ ಭರಿಸಬೇಕು
ಇದರಿಂದ ಏನಾಗಿದೆ ಅಂದರೆ ಮದನಿ ಮಣಿಪಾಲ್ ಆಸ್ಪತ್ರೆಯ ಚಿಕಿತ್ಸೆ ವೆಚ್ಚವನ್ನು ರಾಜ್ಯ ಸರಕಾರವೇ ಭರಿಸಬೇಕಿದೆ. ಒಂದು ವೇಳೆ, ವಿಕ್ಟೋರಿಯಾ ಆಸ್ಪತ್ರೆ ಸಹ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯೇ. ಅಲ್ಲಿಯೆ ಮದನಿಗೆ ಚಿಕಿತ್ಸೆ ಕೊಡಿಸಿ ಸಾಕು ಎಂದು ಸುಪ್ರೀಂಕೋರ್ಟ್ ಹೇಳಿದ್ದರೆ ರಾಜ್ಯ ಸರಕಾರ ಆ ಖರ್ಚನ್ನು ಉಳಿಸಬಹುದಿತ್ತು.

ಮದನಿ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆ ಸಜ್ಜು
ಮದನಿಗೆ ಚಿಕಿತ್ಸೆ ನೀಡಲು ಮಣಿಪಾಲ್ ಆಸ್ಪತ್ರೆ ಒಪ್ಪುತ್ತದೆಯೋ ಇಲ್ಲವೋ ಗೊತ್ತಿಲ್ಲ. ಒಂದು ವೇಳೆ ಮಣಿಪಾಲ್ ಆಸ್ಪತ್ರೆ ಮದನಿ ಚಿಕಿತ್ಸೆಗೆ ಹಿಂದೇಟು ಹಾಕಿದರೆ ವಿಕ್ಟೋರಿಯಾ ಆಸ್ಪತ್ರೆಗೇ ದಾಖಲು ಮಾಡಿ ಎಂದೂ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಆದರೆ ಇತ್ತ ಬೆಂಗಳೂರಿನಲ್ಲಿ ಮದನಿಗೆ ಚಿಕಿತ್ಸೆ ನೀಡಲು ಮಣಿಪಾಲ್ ಆಸ್ಪತ್ರೆ ಸಜ್ಜಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಸುದರ್ಶನ್ ಬಲ್ಲಾಳ್ ಹೇಳಿದ್ದಾರೆ.

ಮದನಿ ವಿರುದ್ಧ 56 ಪ್ರಕರಣಗಳು ದಾಖಲಾಗಿವೆ
ರಾಜ್ಯ ಸರಕಾರ ದುರುದ್ದೇಶದಿಂದ ಮದನಿಯನ್ನು ವಶದಲ್ಲಿಟ್ಟುಕೊಂಡಿದೆ ಎಂಬ ಪ್ರಶಾಂತ್ ಭೂಷಣ್ ಆರೋಪಕ್ಕೆ ಉತ್ತರಿಸಿದ ರಾಜ್ಯ ವಕೀಲೆ ಅನಿತಾ ಶೆಣೈ ಮದನಿ ವಿರುದ್ಧ ವಿವಿಧ ರಾಜ್ಯಗಳಲ್ಲಿ ಒಟ್ಟು 56 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ಬಾಂಬ್ ಸ್ಫೋಟ ಬಹುದೊಡ್ಡ ಸಂಚಿನ ಒಂದು ಭಾಗವಷ್ಟೇ. ಬೆಂಗಳೂರು ಸ್ಫೋಟದ ಬಳಿಕ ಜೈಪುರ, ಅಹಮದಾಬಾದ್, ಸೂರತ್ ಮತ್ತು ದೆಹಲಿಯಲ್ಲಿ ಉಗ್ರರು ದಾಳಿ ನಡೆಸಿದ್ದರು. ಈತನಿಗೆ ಸಿಮಿ, ಇಂಡಿಯನ್ ಮುಜಾಹಿದ್ದೀನ್ ಸಂಘಟನೆಗಳೊಂದಿಗೆ ನೆಂಟಸ್ತನ ಇದೆ ಎಂದು ವಕೀಲೆ ಅನಿತಾ ಶೆಣೈ ಪ್ರತಿವಾದಿಸಿದರು.
-
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications