Jallikattu: ತಮಿಳುನಾಡಿನ ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಗೆ ಕೊನೆಗೂ ಸಮ್ಮತಿ ಸೂಚಿಸಿದ ಸುಪ್ರೀಂಕೋರ್ಟ್
ನವದೆಹಲಿ, ಮೇ, 18: ಜಲ್ಲಿಕಟ್ಟು ಕ್ರೀಡೆಯು ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ತುಂಬಾ ಪ್ರಸಿದ್ಧಿ ಪಡೆದಿದೆ. ಅಲ್ಲದೆ ಈ ಕ್ರೀಡೆಯಲ್ಲಿ ಪ್ರಾಣಿಗಳನ್ನು ಹಿಂಸಿಸಲಾಗುತ್ತಿದೆ ಎನ್ನುವ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆದ್ದರಿಂದ ಜಲ್ಲಿಕಟ್ಟು ಕ್ರೀಡೆಯನ್ನು ಪ್ರಶ್ನಿಸಿ ಸಲ್ಲಿಕೆ ಆಗಿರುವ ಅರ್ಜಿಗಳಿಗೆ ಸಂಬಂಧಿಸಿ ಸುಪ್ರಿಂ ಕೋರ್ಟ್ನ ಸಾಂವಿಧಾನಿಕ ಪೀಠ ಗುರುವಾರ (ಮೇ 18) ತನ್ನ ತೀರ್ಪು ನೀಡಿದ್ದು, ಜಲ್ಲಿಕಟ್ಟು ಸ್ಪರ್ಧೆಗೆ ಅನುಮತಿ ನೀಡಿ ಎಂದು ಕೇಳಿಕೊಂಡಿದ್ದ ತಮಿಳುನಾಡು ಕಾನೂನನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಪ್ರಾಣಿ ಹಕ್ಕುಗಳ ಸಂರಕ್ಷಣ ಸಂಸ್ಥೆ ಪೆಟಾ ಜಲ್ಲಿಕಟ್ಟು ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೆ.ಎಂ ಜೋಸೆಫ್, ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿ.ಟಿ. ರವಿಕುಮಾರ್ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿದೆ. ಈ ವೇಳೆ ಜಲ್ಲಿಕಟ್ಟು ಸ್ಪರ್ಧೆಗೆ ಅನುಮತಿ ನೀಡಿ ಎಂದು ತಮಿಳುನಾಡು ಸರ್ಕಾರದ ಕಾನೂನನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿಯುವ ಮೂಲಕ, ಈ ಸ್ಪರ್ಧೆಗೆ ಒಪ್ಪಿಗೆ ನೀಡಿದೆ.

ಜಲ್ಲಿಕಟ್ಟು ಕೇವಲ ಸಾಂಪ್ರದಾಯಿಕ ಆಚರಣೆ ಆಗಿದೆ. ಇದರಲ್ಲಿ ಪ್ರಾಣಿಗಳನ್ನು ಹಿಂಸಿಸುವ ಯಾವುದೇ ಉದ್ದೇಶ ಇಲ್ಲ. ಪೆರು, ಕೊಲಂಬಿಯಾ, ಸ್ಪೇನ್ ಸಹಿತ ಹಲವು ರಾಷ್ಟ್ರಗಳಲ್ಲೂ ಇಂತಹ ಆಚರಣೆಗಳಿವೆ ಎಂದು ತಮಿಳುನಾಡು ಸರ್ಕಾರದ ವಾದವಾಗಿತ್ತು. ಇದನ್ನು ಸುಪ್ರೀಂ ಎತ್ತಿ ಹಿಡಿಯುವ ಮೂಲಕ ಸಮ್ಮತಿ ಸೂಚಿಸಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications