ಜೂನ್ 15 ರೊಳಗೆ ದೆಹಲಿ ಕೇಂದ್ರ ಕಚೇರಿ ಖಾಲಿ ಮಾಡಿ: ಎಎಪಿಗೆ ಸುಪ್ರೀಂ ಕೋರ್ಟ್ ಆದೇಶ!
ನವದೆಹಲಿ, ಮಾರ್ಚ್ 04: ದೆಹಲಿಯ ರೋಸ್ ಅವೆನ್ಯೂ ಪ್ರದೇಶದಲ್ಲಿ ದೆಹಲಿ ಹೈಕೋರ್ಟ್ನ ಮೂಲಸೌಕರ್ಯ ವಿಸ್ತರಣೆಗೆ ಭೂಮಿಯನ್ನು ಮಂಜೂರು ಮಾಡಿರುವುದರಿಂದ ಆಮ್ ಆದ್ಮಿ ಪಕ್ಷ (ಎಎಪಿ) ಕೇಂದ್ರ ಕಚೇರಿಯನ್ನು ಖಾಲಿ ಮಾಡುವಂತೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.
ದೆಹಲಿಯ ರೋಸ್ ಅವೆನ್ಯೂ ಪ್ರದೇಶದಲ್ಲಿ ತನ್ನ ಕಚೇರಿಯನ್ನು ಮುಂದುವರಿಸಲು ಎಎಪಿಗೆ ಯಾವುದೇ ಕಾನೂನು ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಜಾಗವನ್ನು ಖಾಲಿ ಮಾಡಲು ಆಮ್ ಆದ್ಮಿ ಪಕ್ಷಕ್ಕೆ ಜೂನ್ 15 ರವರೆಗೆ ಕಾಲಾವಕಾಶ ನೀಡಿದೆ. ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿಯ ಆಡಳಿತರೂಢ ಪಕ್ಷಕ್ಕೆ ಆವರಣವನ್ನು ಖಾಲಿ ಮಾಡಲು ನ್ಯಾಯಾಲಯವು ಹೆಚ್ಚುವರಿ ಸಮಯವನ್ನು ನೀಡಿದೆ.

ಜಿಲ್ಲಾ ನ್ಯಾಯಾಲಯವನ್ನು ವಿಸ್ತರಿಸುವ ಉದ್ದೇಶದಿಂದ ದೆಹಲಿ ಹೈಕೋರ್ಟ್ಗೆ ಮಂಜೂರು ಮಾಡಲಾದ ಪ್ಲಾಟ್ನಲ್ಲಿರುವುದರಿಂದ ಕಚೇರಿಯನ್ನು ತೆರವು ಮಾಡಲು ಆದೇಶ ಬಂದಿದೆ. ತನ್ನ ಕಚೇರಿಗಳಿಗೆ ಭೂಮಿ ಮಂಜೂರು ಮಾಡಲು ಭೂಮಿ ಮತ್ತು ಅಭಿವೃದ್ಧಿ ಕಚೇರಿಯನ್ನು ಸಂಪರ್ಕಿಸಲು ಎಎಪಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಪಕ್ಷದ ಮನವಿಯನ್ನು ನಾಲ್ಕು ವಾರಗಳಲ್ಲಿ ಪ್ರಕ್ರಿಯೆಗೊಳಿಸುವಂತೆ ಭೂ ಮತ್ತು ಅಭಿವೃದ್ಧಿ ಕಚೇರಿಗೆ ನಿರ್ದೇಶನ ನೀಡಿದ್ದು, ನಿಗದಿತ ಸಮಯದೊಳಗೆ ತನ್ನ ನಿರ್ಧಾರವನ್ನು ತಿಳಿಸುವಂತೆ ಇಲಾಖೆಗೆ ತಿಳಿಸಿದೆ. ಇನ್ನು, ಆಮ್ ಆದ್ಮಿ ಪಕ್ಷವು ರೂಸ್ ಅವೆನ್ಯೂ ನ್ಯಾಯಾಲಯದ ಬಳಿಯಿರುವ ತನ್ನ ಪಕ್ಷದ ಕಚೇರಿ ಅತಿಕ್ರಮಣವಲ್ಲ ಎಂದು ವಾದಿಸಿದೆ. ಅದನ್ನು ನ್ಯಾಯಾಲಯದ ವಿಸ್ತರಣೆಗೆ ಹಂಚುವ ಮೊದಲೇ ಪಕ್ಷಕ್ಕೆ ಹಂಚಲಾಗಿತ್ತು ಎಂದು ವಾದಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.
ಎಎಪಿ ಪರ ವಕೀಲ ಎಎಂ ಸಿಂಘ್ವಿ, 1993 ಮತ್ತು 2015ರ ನಡುವೆ ಈ ಭೂಮಿಯನ್ನು ಎನ್ಸಿಟಿ ಬಳಸಿಕೊಂಡಿದ್ದು, ಆ ಭೂಮಿಯನ್ನು ಎಎಪಿಗೆ ಹಂಚಿಕೆ ಮಾಡಲಾಗಿದೆ. ಎಎಪಿ ಭಾರತದ 6 ರಾಷ್ಟ್ರೀಯ ಪಕ್ಷಗಳಲ್ಲಿ ಒಂದಾಗಿದೆ ಎಂದು ತಿಳಿಸಿದ್ದಾರೆ. ಇದೇ ಪ್ರದೇಶದಲ್ಲಿ ಬಿಜೆಪಿಗೆ ಕಚೇರಿ ಇದೆ. ಆದರೂ, ಚುನಾವಣೆಗೆ 2 ತಿಂಗಳ ಮೊದಲು, ಪಕ್ಷವನ್ನು ರಸ್ತೆಗೆ ತರಲಾಗುತ್ತಿದೆ ಎಂದು ಹೇಳಿದ್ದಾರೆ.
ಬಾದರ್ಪುರದಲ್ಲಿ ತನ್ನ ಕಚೇರಿಯನ್ನು ನಿರ್ಮಿಸಲು ಎಎಪಿಗೆ ಹೇಳಲಾಗಿದೆ ಎಂದು ಎಎಪಿ ಪರ ವಕೀಲ ಎಎಂ ಸಿಂಘ್ವಿ ಹೇಳಿದ್ದಾರೆ. ಆ ಪ್ರದೇಶದಲ್ಲಿ ಎಲ್ಎನ್ಡಿಒ ಎರಡು ಪ್ಲಾಟ್ಗಳನ್ನು ಹೊಂದಿದ್ದು ಅದನ್ನು ಎಎಪಿಗೆ ಹಂಚಬಹುದು. ಆದರೆ, ಬಾದರ್ಪುರಕ್ಕೆ ಆಫೀಸ್ ಶಿಫ್ಟ್ ಮಾಡುವಂತೆ ಎಎಪಿಗೆ ಸೂಚಿಸಿದರೆ, ಇತರ ಎಲ್ಲ ಪಕ್ಷಗಳಿಗೂ ಕೂಡ ಅದೇ ರೀತಿ ಮಾಡಬೇಕು. ಕೇಂದ್ರ ದೆಹಲಿಯಲ್ಲಾದರೂ ಪಕ್ಷಕ್ಕೆ ಜಾಗ ಸಿಗಬೇಕು ಎಂದಿದ್ದಾರೆ.
-
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ












Click it and Unblock the Notifications