26 ವಾರಗಳ ಭ್ರೂಣದ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ, ಅಕ್ಟೋಬರ್ 16: 26 ವಾರಗಳ ಭ್ರೂಣವನ್ನು ಹೊಂದಿರುವ ವಿವಾಹಿತ ಮಹಿಳೆಯು ಗರ್ಭಪಾತ ಮಾಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ಅನುಮತಿಯನ್ನು ನಿರಾಕರಿಸಿದೆ.
ಗರ್ಭಧಾರಣೆಯು 24 ವಾರಗಳಿಗಿಂತ ಹೆಚ್ಚಿದ್ದರೆ, ವೈದ್ಯಕೀಯ ಗರ್ಭಪಾತವನ್ನು ಅನುಮತಿಸಲಾಗುವುದಿಲ್ಲ. ಮಹಿಳೆಯ ಗರ್ಭಾವಸ್ಥೆಯು 26 ವಾರಗಳು ಮತ್ತು ಐದು ದಿನಗಳು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಸಂದರ್ಭದಲ್ಲಿ ಮಹಿಳೆಗೆ ತಕ್ಷಣದ ಅಪಾಯವಿಲ್ಲ ಮತ್ತು ಇದು ಭ್ರೂಣದ ಅಸಂಗತತೆಯ ಪ್ರಕರಣವಲ್ಲ ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಗರ್ಭಾವಸ್ಥೆಯ ಅವಧಿಯು 24 ವಾರಗಳನ್ನು ಮೀರಿದೆ. ಇದು ವೈದ್ಯಕೀಯ ಗರ್ಭಪಾತದ(ಎಂಟಿಪಿ) ಅನುಮತಿಸುವ ಮಿತಿಯೊಳಗೆ ಬರುವುದಿಲ್ಲ. ಆದ್ದರಿಂದ ಗರ್ಭಪಾತಕ್ಕೆ ಅನುಮತಿಸಲಾಗುವುದಿಲ್ಲ. ಭ್ರೂಣವು 26 ವಾರಗಳು ಮತ್ತು 5 ದಿನಗಳು ಮತ್ತು ತಾಯಿಗೆ ತಕ್ಷಣದ ಅಪಾಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಭ್ರೂಣದಲ್ಲಿ ಯಾವುದೇ ವೈಪರೀತ್ಯಗಳಿಲ್ಲ. ಗರ್ಭಧಾರಣೆಯ ಅವಧಿಯು 24 ವಾರಗಳನ್ನು ಮೀರಿದ್ದು, ಸರಿಸುಮಾರು 26 ವಾರಗಳು ಮತ್ತು 5 ದಿನಗಳು. ಗರ್ಭಾವಸ್ಥೆಯ ವೈದ್ಯಕೀಯ ಗರ್ಭಪಾತಕ್ಕೆ ಅನುಮತಿಸಲಾಗುವುದಿಲ್ಲ ಎಂದು ಪೀಠ ಹೇಳಿದೆ. ಕಳೆದ ವಿಚಾರಣೆಯಲ್ಲಿ, ಸುಪ್ರೀಂ ಕೋರ್ಟ್ ಮಹಿಳೆಯ ಆರೋಗ್ಯ ತಪಾಸಣೆಗೆ ಆದೇಶಿಸಿತ್ತು. ಇಂದು ನ್ಯಾಯಾಲಯಕ್ಕೆ ಸಲ್ಲಿಸಿರುವ ಏಮ್ಸ್ ಹೊಸ ವರದಿಯಲ್ಲಿ ಗರ್ಭದಲ್ಲಿರುವ ಮಗು ಸಂಪೂರ್ಣ ಆರೋಗ್ಯವಾಗಿದೆ.
ಮಗುವಿಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ಹೇಳಲಾಗಿದೆ. ಗರ್ಭಿಣಿಯಾದ ನಂತರ ಮಹಿಳೆ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದಾಳೆ ಆದರೆ ಇದಕ್ಕಾಗಿ ಸೇವಿಸುತ್ತಿರುವ ಔಷಧಿ ಮಗುವಿನ ಆರೋಗ್ಯದ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರಿಲ್ಲ. ಇತರ ಪರ್ಯಾಯ ಔಷಧಗಳನ್ನು ನೀಡುವಂತೆ ಮಹಿಳೆಗೆ ಸಲಹೆ ನೀಡಲಾಗಿದೆ.
ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ವೈದ್ಯಕೀಯ ಮಂಡಳಿಯ ವೈದ್ಯರು ಅಕ್ಟೋಬರ್ 10 ರಂದು ಇ-ಮೇಲ್ ಕಳುಹಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಇದರಲ್ಲಿ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಿದರೆ ಭ್ರೂಣವು ಬದುಕುಳಿಯುವ ಬಲವಾದ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇದಕ್ಕೂ ಮೊದಲು, ಮಂಡಳಿಯು ಮಹಿಳೆಯನ್ನು ತನಿಖೆ ಮಾಡಿ ವರದಿಯನ್ನು ಅಕ್ಟೋಬರ್ 6 ರಂದು ಸುಪ್ರೀಂ ಕೋರ್ಟ್ಗೆ ಸಲ್ಲಿಸಿತ್ತು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications