ನಂಬಿ ನಾರಾಯಣನ್ ಇಸ್ರೋ ಗೂಢಚಾರಿಕೆ ಪ್ರಕರಣ: ಸಿಬಿಐ ತನಿಖೆಗೆ 'ಸುಪ್ರೀಂ' ಸೂಚನೆ
ನವದೆಹಲಿ, ಏಪ್ರಿಲ್ 15: ಇಸ್ರೋ ಮಾಜಿ ವಿಜ್ಞಾನಿ ಡಾ. ಎಸ್. ನಂಬಿ ನಾರಾಯಣನ್ ವಿರುದ್ಧದ 1994ರ ಗೂಢಚಾರಿಕೆ ಪ್ರಕರಣದ ಕುರಿತು ಜೈನ್ ಸಮಿತಿ ಸಲ್ಲಿಸಿರುವ ವರದಿಯನ್ನು ಸುಪ್ರೀಂಕೋರ್ಟ್ ಗೋಪ್ಯ ಎಂದು ಪರಿಗಣಿಸಿದೆ. ವರದಿಯಲ್ಲಿರುವ ವಿಚಾರಗಳು ಈ ಪ್ರಕರಣದಲ್ಲಿ ಭಾಗಿಯಾಗಿರುವ ಯಾವುದೇ ಕಕ್ಷಿದಾರರಿಗೂ ಬಹಿರಂಗವಾಗುವಂತಿಲ್ಲ ಮತ್ತು ಸಿಬಿಐ ತನ್ನ ತನಿಖೆಯನ್ನು ಮುಂದುವರಿಸಬೇಕು ಎಂದು ಸೂಚನೆ ನೀಡಿದೆ.
ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಡಿಕೆ ಜೈನ್ ನೇತೃತ್ವದ ಮೂವರು ಸದಸ್ಯರನ್ನು ಒಳಗೊಂಡ ಜೈನ್ ಸಮಿತಿ ವರದಿಯು, 1994ರಲ್ಲಿ ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್ ವಿರುದ್ಧ ಗೂಢಚಾರಿಕೆ ಆರೋಪ ಹೊರಿಸಿದ್ದ ಪೊಲೀಸ್ ಅಧಿಕಾರಿಗಳು ಎಸಗಿದ ತಪ್ಪುಗಳ ಬಗ್ಗೆ ವಿವರಣೆ ನೀಡಿದೆ. ಗಂಭೀರ ಆರೋಪ ಎದುರಿಸುತ್ತಿದ್ದ ನಂಬಿ ನಾರಾಯಣನ್ ಅವರು ಖುಲಾಸೆಗೊಂಡಿದ್ದರು. ಕೋರ್ಟ್ ಆದೇಶದಂತೆ ಅವರಿಗೆ 50 ಲಕ್ಷ ರೂ ಪರಿಹಾರ ನೀಡಲಾಗಿತ್ತು.
ಈ ವರದಿಯನ್ನು ಪರಿಗಣಿಸುವಂತೆ ಸುಪ್ರೀಂಕೋರ್ಟ್ಗೆ ಕೇಂದ್ರ ಸರ್ಕಾರ ಮನವಿ ಮಾಡಿತ್ತು. ಈ ಸಮಿತಿಯು ಕೇರಳ ಪೊಲೀಸ್ನ ಜವಾಬ್ದಾರಿಯುತ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದನ್ನು ಗಮನಿಸಿದೆ. ಈ ವರದಿಯು ಗಂಭೀರ ಸಂಗತಿಗಳ ಸುಳಿವು ನೀಡಿದೆ. ವರದಿ ಆಧರಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಈ ವರದಿಯು ಅನೇಕ ಸಂದರ್ಭಗಳು ಮತ್ತು ಘಟನೆಗಳನ್ನು ಉಲ್ಲೇಖಿಸಿದೆ. ಹೀಗಾಗಿ ಅದರ ಸಮಗ್ರ ತನಿಖೆ ನಡೆಯಬೇಕು ಎಂದು ಸುಪ್ರೀಂಕೋರ್ಟ್ ಹೇಳಿತು. ಜೈನ್ ಸಮಿತಿಯ ವರದಿಯನ್ನು ಪ್ರಾಥಮಿಕ ತನಿಖಾ ವರದಿ ಎಂದು ಪರಿಗಣಿಸಿರುವ ನ್ಯಾಯಾಲಯವು ಸಿಬಿಐಗೆ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಮೂರು ತಿಂಗಳ ಸಮಯ ಕೊಟ್ಟಿದೆ.

ಸುಪ್ರೀಂಕೋರ್ಟ್ ಆದೇಶದ ಬಗ್ಗೆ ನಂಬಿ ನಾರಾಯಣನ್ ಸಂತಸ ವ್ಯಕ್ತಪಡಿಸಿದ್ದಾರೆ. 'ಸಿಬಿಐ ತನಿಖೆ ಅತ್ಯುತ್ತಮ ಪ್ರಗತಿ. ಅದರ ವಿರುದ್ಧ ದೂರಲು ನನಗೇನೂ ಇಲ್ಲ. ಈ ವರದಿಯು ಪ್ರಕರಣವನ್ನು ಒಂದು ಮಟ್ಟಕ್ಕೆ ಇಳಿಸಲಿದೆ ಮತ್ತು ಇದರಲ್ಲಿ ಭಾಗಿಯಾದ ವ್ಯಕ್ತಿಗಳ ವಿರುದ್ಧ ಕಾನೂನು ಪ್ರಕ್ರಿಯೆ ನಡೆಯಲಿದೆ ಎಂಬುದನ್ನು ನಿರೀಕ್ಷಿಸುತ್ತಿದ್ದೆ. ಆದರೆ ವರದಿಯಲ್ಲಿನ ಅಂಶಗಳು ನನಗೆ ತಿಳಿದಿಲ್ಲದ ಕಾರಣ ನಾನು ಇದರ ಬಗ್ಗೆ ಹೇಳಿಕೆ ನೀಡಲು ಸಾಧ್ಯವಿಲ್ಲ' ಎಂದು ಅವರು ಹೇಳಿದ್ದಾರೆ.
ಬೇಹುಗಾರಿಕೆ ಪ್ರಕರಣವು 1994ರಲ್ಲಿ ಭಾರಿ ಸದ್ದು ಮಾಡಿತ್ತು. ಭಾರತದ ಬಾಹ್ಯಾಕಾಶ ಕಾರ್ಯಕ್ರಮಗಳ ರಹಸ್ಯ ದಾಖಲೆಗಳನ್ನು ಇಬ್ಬರು ವಿಜ್ಞಾನಿಗಳು ಮತ್ತು ಮಾಲ್ಡೀವ್ಸ್ನ ಇಬ್ಬರ ಮಹಿಳೆಯರು ಸೇರಿದಂತೆ ಇತರೆ ನಾಲ್ವರು ವಿದೇಶಗಳಿಗೆ ವರ್ಗಾಯಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಪದ್ಮ ಪ್ರಶಸ್ತಿ ಪುರಸ್ಕೃತರಾಗಿದ್ದ ಡಾ. ಎಸ್. ನಂಬಿನಾರಾಯಣನ್ ಅವರನ್ನು 1994ರ ನವೆಂಬರ್ನಲ್ಲಿ ಬಂಧಿಸಲಾಗಿತ್ತು. ನಂಬಿ ನಾರಾಯಣನ್ ಅವರ ಅಕ್ರಮ ಬಂಧನಕ್ಕೆ ಕೇರಳದ ಹಿರಿಯ ಪೊಲೀಸ್ ಅಧಿಕಾರಿಗಳು ಹೊಣೆಗಾರರು ಎಂದು ಸಿಬಿಐ ತನಿಖೆ ಬಳಿಕ ಪ್ರತಿಪಾದಿಸಿತ್ತು.
2018ರ ಸೆ. 14ರಂದು ಸುಪ್ರೀಂಕೋರ್ಟ್, ನಿವೃತ್ತ ನ್ಯಾಯಮೂರ್ತಿ ಡಿಕೆ ಜೈನ್ ನೇತೃತ್ವದಲ್ಲಿ ಮೂವರು ಸದಸ್ಯರ ಸಮಿತಿಯನ್ನು ನೇಮಿಸಿತ್ತು. ಇದೇ ಸಂದರ್ಭದಲ್ಲಿ ನಂಬಿ ನಾರಾಯಣನ್ ಅವರನ್ನು ಅತೀವವಾಗಿ ಅವಮಾನಿಸಿದ್ದ ಕಾರಣಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೇರಳ ಸರ್ಕಾರಕ್ಕೆ ಆದೇಶಿಸಿತ್ತು.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications