'ಬ್ಯಾಂಕ್ ಗಳ ವರದಿಯನ್ನು ಆರ್ ಟಿಇ ಅಡಿ ರಿಸರ್ವ್ ಬ್ಯಾಂಕ್ ನೀಡಬೇಕು'
ನವದೆಹಲಿ, ಏಪ್ರಿಲ್ 26: ಬ್ಯಾಂಕ್ ಗಳ ವಾರ್ಷಿಕ ಪರಿಶೀಲನಾ ವರದಿಯ ಮಾಹಿತಿಯನ್ನು ಮಾಹಿತಿ ಹಕ್ಕು ಕಾಯ್ದೆ ಅಡಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರದಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಗೆ ನಿರ್ದೇಶನ ಮಾಡಿದೆ. ಕಾನೂನಿನ ಅಡಿಯಲ್ಲಿ ಮಾಹಿತಿ ಬಹಿರಂಗ ಪಡಿಸಲು ಅವಕಾಶ ಇಲ್ಲ ಅನ್ನೋದಾದರೆ ಪರವಾಗಿಲ್ಲ. ಆದರೆ ಅವಕಾಶ ಇದ್ದರೆ ಮಾಹಿತಿ ನೀಡಬೇಕು ಎಂದಿದೆ.
ನ್ಯಾಯಮೂರ್ತಿ ಎಲ್.ನಾಗೇಶ್ವರ್ ನೇತೃತ್ವದ ಪೀಠವು ಆರ್ ಬಿಐಗೆ ನಿರ್ದೇಶನ ನೀಡಿದ್ದು, ಬ್ಯಾಂಕ್ ಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಮಾಹಿತಿ ಹಕ್ಕು ಕಾಯ್ದೆ ಅಡಿ ನೀಡುವ ವಿಚಾರದಲ್ಲಿ ಇರುವ ನಿಯಮವನ್ನು ಪರಿಶೀಲನೆ ನಡೆಸಬೇಕು ಎಂದು ಹೇಳಿದೆ. ಕಾನೂನಿನ ಅಡಿಯಲ್ಲಿ ನಿರ್ವಹಿಸಬೇಕಾದ ಜವಾಬ್ದಾರಿ ಎಂದು ಕೂಡ ತಿಳಿಸಲಾಗಿದೆ.
ಆರ್ ಬಿಐ ವಿರುದ್ಧ ನ್ಯಾಯಾಂಗ ನಿಂದನೆ ಎಂದು ಪರಿಗಣಿಸುವ ಮಟ್ಟಕ್ಕೆ ಕೋರ್ಟ್ ಮುಂದುವರಿಯದೆ, ಇದು ಕೊನೆ ಅವಕಾಶ. ಕಾನೂನಿನ ಪಾರದರ್ಶಕತೆ ಅಡಿಯಲ್ಲಿ ಕಾರ್ಯ ನಿರ್ವಹಿಸಿ ಎಂದು ಸೂಚನೆ ನೀಡಿದೆ.

ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಮಾಹಿತಿ ನೀಡಲು ನಿರಾಕರಿಸಿದರೆ ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ. ಇನ್ನು ಮುಂದೆ ಇಂಥ ಯಾವುದೇ ನಿಯಮ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಎಂದು ಪೀಠವು ಹೇಳಿದೆ.
ಬ್ಯಾಂಕ್ ಗಳ ವಾರ್ಷಿಕ ಪರಿಶೀಲನಾ ವರದಿಯನ್ನು ಮಾಹಿತಿ ಹಕ್ಕು ಕಾಯ್ದೆ ಅಡಿ ಬಹಿರಂಗ ಪಡಿಸದ ಕಾರಣಕ್ಕೆ ಈ ವರ್ಷದ ಜನವರಿಯಲ್ಲಿ ಸುಪ್ರೀಂ ಕೋರ್ಟ್ ನಿಂದ ರಿಸರ್ವ್ ಬ್ಯಾಂಕ್ ಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡಲಾಗಿತ್ತು.
ಪಾರದರ್ಶಕ ಕಾನೂನಿನ ಅನ್ವಯ ಮಾಹಿತಿ ಕೇಳುವವರಿಗೆ ಆರ್ ಬಿಐ ಅದನ್ನು ನಿರಾಕರಿಸ ಕೂಡದು. ಆ ವಿಷಯವನ್ನು ಬಹಿರಂಗ ಪಡಿಸಲು ಕಾನೂನಿನಲ್ಲಿ ಅವಕಾಶ ಇಲ್ಲದಿದ್ದಲ್ಲಿ ಮಾಹಿತಿ ನಿರಾಕರಿಸಬಹುದು ಎಂದು ಅದಕ್ಕೂ ಮುನ್ನ ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಮಾಹಿತಿ ಆಯೋಗವು ಹೇಳಿತ್ತು.
ಆದರೆ, ತನ್ನ ನಡೆಯನ್ನು ಸಮರ್ಥಿಸಿಕೊಂಡಿದ್ದ ರಿಸರ್ವ್ ಬ್ಯಾಂಕ್, ಇದು ವಿಶ್ವಾಸದ ಪ್ರಶ್ನೆ ಎಂದಿತ್ತು. ಈ ನಿಲವಿನ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಹಾಕಲಾಗಿತ್ತು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications