ರಾಜೀವ್ ಗಾಂಧಿ ಹಂತಕರಿಗೆ ಗಲ್ಲುಶಿಕ್ಷೆ ಇಲ್ಲ : ಸುಪ್ರೀಂಕೋರ್ಟ್
ನವದೆಹಲಿ, ಜುಲೈ 29: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಗೈದಿದ್ದ ನಳಿನಿ ಶ್ರೀಹರನ್ ಹಾಗೂ ಇತರರಿಗೆ ಗಲ್ಲುಶಿಕ್ಷೆ ನೀಡಲು ಸಾಧ್ಯವಿಲ್ಲ ಜೀವಾವಾಧಿ ಶಿಕ್ಷೆಯನ್ನು ಅನುಭವಿಸಲಿ ಎಂದು ಸುಪ್ರೀಂಕೋರ್ಟ್ ನ್ಯಾಯಪೀಠ ಬುಧವಾರ ಮತ್ತೊಮ್ಮೆ ಆದೇಶ ನೀಡಿದೆ.
ರಾಜೀವ್ ಹಂತಕರು ಅವಧಿಗೆ ಮುನ್ನ ಬಿಡುಗಡೆ ಬಯಸಿ ಸಲ್ಲಿಸಿದ್ದ ಅರ್ಜಿ ಹಾಗೂ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಕ್ಯೂರೇಟರ್ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ತಿರಸ್ಕರಿಸಿದೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಕೊಲ್ಲಲು ವಿದೇಶಿ ನೆರವು ಪಡೆದುಕೊಂಡು ಸಂಚು ರೂಪಿಸಲಾಗಿತ್ತು. ಹೀಗಾಗಿ ಇಂಥವರಿಗೆ ಕ್ಷಮಾದಾನ ನೀಡುವುದಾಗಲಿ, ಅವಧಿಗೆ ಮುನ್ನ ಬಿಡುಗಡೆ ಮಾಡುವುದಾಗಲಿ ಸರಿಯಾದ ಕ್ರಮವಲ್ಲ ಎಂದು ಏಳು ಜನ ಅಪರಾಧಿಗಳ ವಿರುದ್ಧ ಕೇಂದ್ರ ಸರ್ಕಾರ ಅರ್ಜಿ ಸಲ್ಲಿಸಿತ್ತು. [ರಾಜೀವ್ ಹಂತಕರಿಗೆ ಜೀವಾವಧಿ ಶಿಕ್ಷೆ]

ಈ ಬಗ್ಗೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಚ್ ಎಲ್ ದತ್ತು, ಜಸ್ಟೀಸ್ ಫಕೀರ್ ಮೊಹಮ್ಮದ್ ಇಬ್ರಾಹಿಂ ಕಾಲಿಫುಲ್ಲ, ಜಸ್ಟೀಸ್ ಪಿನಾಕಿ ಚಂದ್ರ ಘೋಶ್, ಜಸ್ಟೀಸ್ ಅಭಯ್ ಮನೋಹರ್ ಸಪ್ರೆ ಹಾಗೂ ಜಸ್ಟೀಸ್ ಉದಯ್ ಉಮೇಶ್ ಲಲಿತ್ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ. [ರಾಜೀವ್ ಗಾಂಧಿ ಹಂತಕಿಗೆ ಬಿಡುಗಡೆ ಭಾಗ್ಯವಿಲ್ಲ]
ರಾಜೀವ್ ಗಾಂಧಿ ಹತ್ಯೆಗೆ ಸಂಬಂಧಿಸಿದಂತೆ ಅಪರಾಧಿಗಳಾಗಿರುವ ನಳಿನಿ ಶ್ರೀಹರನ್ ಸೇರಿದಂತೆ ಸಂತನ್, ಮುರಗನ್ ಮತ್ತು ಪೆರಾರಿವೇಲನ್ ಅವರ ಗಲ್ಲುಶಿಕ್ಷೆಯನ್ನು ಫೆ.18ರಂದು ಸುಪ್ರೀಂಕೋರ್ಟ್ ಜೀವಾವಧಿಗೆ ಇಳಿಸಿತ್ತು.
ತಮಿಳುನಾಡಿನ ವೆಲ್ಲೂರಿನ ಜೈಲಿನಲ್ಲಿರುವ ನಳಿನಿ ಅವರು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಅವಧಿ ಪೂರ್ವ ಬಿಡುಗಡೆ ಕೋರಿ ಅರ್ಜಿ ಸಲ್ಲಿಸಿದ್ದರು.ಅದರೆ, ಸುಪ್ರೀಂಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಸಂತನ್, ಮುರಗನ್ ಮತ್ತು ಪೆರಾರಿ ವೇಲನ್ ಅವರುಗಳು ಪ್ರಸ್ತುತ ವೆಲ್ಲೂರು ಕೇಂದ್ರ ಕಾರಾಗೃಹದಲ್ಲಿದ್ದಾರೆ (1991ರಿಂದ). ಉಳಿದ ನಾಲ್ವರು ಶ್ರೀಪೆರಂಬದೂರು ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. 1991ರ ಮೇ 21ರಂದು ಶ್ರೀಪೆರಂಬದೂರು ಸಮೀಪ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಯಾಗಿತ್ತು. ಆ ಬಾಂಬ್ ಸ್ಫೋಟದಲ್ಲಿ ಇನ್ನೂ 14 ಮಂದಿ ಪ್ರಾಣ ತೆತ್ತಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications