ಹೊಸ ಸಂಸತ್ ಕಟ್ಟಡ: ರಾಷ್ಟ್ರಪತಿ ಮುರ್ಮು ಅವರಿಂದ ಉದ್ಘಾಟನೆ ಕೋರಿ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನೂತನ ಸಂಸತ್ ಭವನವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಮೇ 28 ರಂದು ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ಲೋಕಸಭೆ ಸೆಕ್ರೆಟರಿಯೇಟ್ಗೆ ನಿರ್ದೇಶನ ನೀಡಬೇಕು ಎಂದು ಕೇಳಲಾಗಿತ್ತು.
ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳಾದ ಜೆ.ಕೆ.ಮಹೇಶ್ವರಿ ಮತ್ತು ಪಿ.ಎಸ್.ನರಸಿಂಹ ಅವರ ರಜಾಕಾಲದ ಪೀಠ, ಅರ್ಜಿದಾರರಿಗೆ ಅಂತಹ ಅರ್ಜಿಗಳನ್ನು ಸಲ್ಲಿಸಲು ಯಾವುದೇ ಅವಕಾವಿಲ್ಲ ಮತ್ತು ನ್ಯಾಯಾಲಯವು ಅವರಿಗೆ ಯಾವುದೇ ದಂಡ ಹಾಕದ್ದಕ್ಕೆ ಸಂತೋಷ ಪಡಬೇಕು ಎಂದು ಬಾರ್ ಮತ್ತು ಬೆಂಚ್ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಅರ್ಜಿದಾರರಾದ ವಕೀಲ ಸಿಆರ್ ಜಯ ಸುಕಿನ್ ಅವರು ಅರ್ಜಿಯನ್ನು ಹಿಂಪಡೆಯುವುದಾಗಿ ತಿಳಿಸಿದರು. ಆದರೆ, ಅರ್ಜಿ ಹಿಂಪಡದರೆ, ನ್ಯಾಯಾಲಯವು ಅರ್ಜಿದಾರರಿಗೆ ಹೈಕೋರ್ಟ್ಗೆ ಹೋಗಲು ಅವಕಾಶ ನೀಡುತ್ತದೆ ಎಂದು ವಾದಿಸಿತು. "ಇದು ನ್ಯಾಯಸಮ್ಮತವಲ್ಲ. ಅದನ್ನು ನ್ಯಾಯಾಲಯ ಗಮನಿಸಬೇಕು" ಎಂದು ಕೇಂದ್ರ ಸರಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು.
ಸಂವಿಧಾನದ ಉಲ್ಲಂಘನೆ ಎಂದು ವಾದ
ಲೋಕಸಭೆ ಸೆಕ್ರೆಟರಿಯೇಟ್ ನೀಡಿರುವ ಹೇಳಿಕೆ ಮತ್ತು ಉದ್ಘಾಟನಾ ಕಾರ್ಯಕ್ರಮಕ್ಕೆ ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಕಳುಹಿಸಿರುವ ಆಹ್ವಾನ ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವಕೀಲ ಜಯ ಸುಕಿನ್ ವಾದಿಸಿದರು. "ರಾಷ್ಟ್ರಪತಿಗಳು ಈ ನಿಟ್ಟಿನಲ್ಲಿ ಭಾರತದ ಪ್ರಥಮ ಪ್ರಜೆ ಮತ್ತು ಸಂಸತ್ತಿನ ಸಂಸ್ಥೆಯ ಮುಖ್ಯಸ್ಥರು. ದೇಶಕ್ಕೆ ಸಂಬಂಧಿಸಿದ ಎಲ್ಲಾ ಪ್ರಮುಖ ನಿರ್ಧಾರಗಳನ್ನು ಭಾರತದ ರಾಷ್ಟ್ರಪತಿಗಳ ಹೆಸರಿನಲ್ಲಿ ತೆಗೆದುಕೊಳ್ಳಲಾಗುತ್ತದೆ" ಎಂದು ಮನವಿಯಲ್ಲಿ ತಿಳಿಸಲಾಗಿತ್ತು.
ಸಂಸತ್ತನ್ನು ಕರೆಯುವ ಮತ್ತು ಮುಂದೂಡುವ ಅಥವಾ ಲೋಕಸಭೆಯನ್ನು ವಿಸರ್ಜಿಸುವ ಅಧಿಕಾರವನ್ನು ರಾಷ್ಟ್ರಪತಿ ಹೊಂದಿದ್ದಾರೆ ಎಂದು ಜಯ ಸುಕಿನ್ ವಾದಿಸಿದರು. ರಾಷ್ಟ್ರಪತಿಗಳು ಸಂಸತ್ತಿನ ಅವಿಭಾಜ್ಯ ಅಂಗ, ಅವರನ್ನು ಉದ್ಘಾಟನಾ ಕಾರ್ಯಕ್ರಮದಿಂದ ದೂರ ಇಡಬಾರದು ಎಂದು ವಾದಿಸಿದ ಅರ್ಜಿದಾರರು ಭಾರತೀಯ ಸಂವಿಧಾನದ 79 ನೇ ವಿಧಿಯನ್ನು ಉಲ್ಲೇಖಿಸಿದರು.
ನೂತನ ಸಂಸತ್ ಕಟ್ಟಡ ಉದ್ಘಾಟನಾ ವಿಚಾರ ಸದ್ಯ ರಾಜಕೀಯ ತಿರುವು ಪಡೆದುಕೊಂಡಿದೆ. ಸಂವಿಧಾನದ ಪ್ರಕಾರ ಕಟ್ಟಡವನ್ನು ರಾಷ್ಟ್ರಪತಿಗಳು ಉದ್ಘಾಟನೆ ಮಾಡಬೇಕು, ಆದರೆ ಪ್ರಧಾನಿ ಮೋದಿ ನಿಯಮ ಮೀರಿ ಉದ್ಘಾಟನೆ ಮಾಡುತ್ತಿದ್ದಾರೆ ಎಂದು ಹೇಳಿ, 20 ಪಕ್ಷಗಳನ್ನು ಒಳಗೊಂಡ ಸಂಯುಕ್ತ ಪ್ರತಿಪಕ್ಷಗಳು ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಲು ನಿರ್ಧರಿಸಿವೆ. ಇಲ್ಲಿಯವರೆಗೆ, 25 ಪಕ್ಷಗಳು ತಮ್ಮ ಹಾಜರಾತಿಯನ್ನು ಖಚಿತಪಡಿಸಿವೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications