ಅಕ್ರಮ ಆಸ್ತಿ: ಶಶಿಕಲಾಗೆ ಜೈಲು, ಸುಪ್ರೀಂ ಕೋರ್ಟ್ ಆದೇಶ
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಸಿಬಿಐ ನ್ಯಾಯಾಲಯ 2014ರಲ್ಲಿ ಸೆಪ್ಟಂಬರ್ 27ರಂದು ಬಂದಿದ್ದ ನೀಡಿದ್ದ ತೀರ್ಪು ಎತ್ತಿ ಹಿಡಿದ ಸುಪ್ರೀಂ ಕೋರ್ಟ್
ನವದೆಹಲಿ, ಫೆಬ್ರವರಿ 14: ಅಣ್ಣಾ ದ್ರಾವಿಡ ಮುನೇತ್ರ ಕಳಗಂ (ಎಐಡಿಎಂಕೆ) ಪಕ್ಷದ ನಾಯಕಿ ಶಶಿಕಲಾ ಅವರ ವಿರುದ್ಧದ ಅಕ್ರಮ ಆಸ್ತಿ ತೀರ್ಪು ಹೊರಬಿದ್ದಿದ್ದು, ಶಶಿಕಲಾ ಅವರನ್ನು ದೋಷಿ ಎಂದು ತೀರ್ಮಾನಿಸಿರುವ ಸುಪ್ರೀಂ ಕೋರ್ಟ್ ಅವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಇದರಿಂದಾಗಿ, ತಮಿಳುನಾಡು ಮುಖ್ಯಮಂತ್ರಿ ಸ್ಥಾನಕ್ಕೆ ಪನ್ನೀರ್ ಸೆಲ್ವಂ ಜತೆಗೆ ಸ್ಪರ್ಧೆಗಳಿದಿದ್ದ ಶಶಿಕಲಾ ಅವರ ಕನಸು ಭಗ್ನಗೊಂಡಿದೆ.[LIVE: ಪರಪ್ಪನ ಅಗ್ರಹಾರ ಜೈಲು ಸೇರಲಿರುವ ಶಶಿಕಲಾ]

ಈ ಹಿಂದೆ ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯವು ನೀಡಿದ್ದ ನಾಲ್ಕು ವರ್ಷಗಳ ಜೈಲು ಶಿಕ್ಷೆಯ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ. ಇದರ ಜತೆಯಲ್ಲೇ ಕರ್ನಾಟಕ ಹೈ ಕೋರ್ಟ್ ನೀಡಿದ್ದ ಶಶಿಕಲಾ ಖುಲಾಸೆ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.[ಶಶಿಕಲಾ ಭವಿಷ್ಯ: 2 ಸುಪ್ರೀಂ ಜಡ್ಜ್ ಗಳ ಮುಂದಿರುವ 4 ಸಾಧ್ಯತೆಗಳು]
ಇದಲ್ಲದೆ, ಜೈಲು ಶಿಕ್ಷೆ ಅವಧಿಯೂ ಸೇರಿದಂತೆ ಆನಂತರದ ಆರು ವರ್ಷಗಳ ಕಾಲ ಶಶಿಕಲಾ ಅವರು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಸುಪ್ರೀಂ ಕೋರ್ಟ್ ನಿರ್ಬಂಧ ವಿಧಿಸಿದೆ. ಇದರಿಂದಾಗಿ, ಮುಂದಿನ ಹತ್ತು ವರ್ಷಗಳ ಕಾಲ ಅವರು ರಾಜಕೀಯದಿಂದ ಅನಿವಾರ್ಯವಾಗಿ ದೂರ ಉಳಿಯಬೇಕಾಗಿದೆ.
ಸಹ ಆರೋಪಿಗಳಿಗೂ ಶಿಕ್ಷೆ: ಪ್ರಕರಣದಲ್ಲಿ ಸಹ ಆರೋಪಿಗಳಾಗಿದ್ದ ಇಳವರಸಿ, ವಿ.ಎನ್. ಸುಧಾಕರನ್ ಅವರಿಗೂ ನಾಲ್ಕು ವರ್ಷ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ. ಇದಲ್ಲದೆ, ಈ ಕೇಸಿನ ಎಲ್ಲಾ ಅಪರಾಧಿಗಳಿಗೂ ತಲಾ 10 ಈ ಕೋಟಿ ದಂಡ ವಿಧಿಸಲಾಗಿದೆ. ಅಲ್ಲದೆ, ಈ ನಾಲ್ಕೂ ಅಪರಾಧಿಗಳು ಇಂದೇ (ಫೆ. 14) ಪೊಲೀಸರ ಮುಂದೆ ಶರಣಾಗುವಂತೆ ಸೂಚಿಸಲಾಗಿದೆ.
ಪರಪ್ಪನ ಅಗ್ರಹಾರಕ್ಕೆ: ಇದೀಗ ಸುಪ್ರೀಂ ಕೋರ್ಟ್ ನಲ್ಲಿ ಅಪರಾಧಿಗಳೆಂದು ಸಾಬೀತಾದ ಹಿನ್ನೆಲೆಯಲ್ಲಿ ಅಕ್ರಮ ಆಸ್ತಿ ಪ್ರಕರಣದ ದೋಷಿಗಳೂ (ಶಶಿಕಲಾ, ಇಳವರಸಿ, ಸುಧಾಕರನ್) ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲು ವಾಸ ಅನುಭವಿಸಬೇಕಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications