Delhi Air Pollutin: ದೆಹಲಿ ನೆರೆಯ ರಾಜ್ಯಗಳಿಗೆ ಸುಪ್ರೀಂಕೋರ್ಟ್ ತರಾಟೆ
ದೆಹಲಿಯಲ್ಲಿ ವಾಯುಮಾಲಿನ್ಯ ಸಮಸ್ಯೆ ರಾಜಕೀಯ ಹೋರಾಟಕ್ಕೆ ಬಳಕೆಯಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಉಸಿರುಗಟ್ಟಿಸುವ ಗಾಳಿಯ ಗುಣಮಟ್ಟವು ಜನರ ಆರೋಗ್ಯವನ್ನು ಹಾಳು ಮಾಡಲು ಕಾರಣವಾಗಿದೆ ಎಂದು ಒತ್ತಿ ಹೇಳಿದೆ.
ನೆರೆಯ ರಾಜ್ಯಗಳಾದ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಬೆಳೆಗಳ ಅವಶೇಷಗಳನ್ನು ಸುಡುವುದು ಪ್ರತಿ ಚಳಿಗಾಲದಲ್ಲಿ ದೆಹಲಿಯ ವಾಯುಮಾಲಿನ್ಯದಲ್ಲಿ ಭಾರಿ ಏರಿಕೆಗೆ ಪ್ರಮುಖ ಅಂಶವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಹುಲ್ಲು ಸುಡುವುದನ್ನು ತಡೆಯಲು ರಾಜ್ಯ ಸರ್ಕಾರಗಳು ಕ್ರಮಕೈಗೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಒತ್ತಾಯಿಸಿದೆ. "ತಕ್ಷಣವೇ ಹುಲ್ಲು ಸುಡುವುದನ್ನು ನಿಲ್ಲಿಸಬೇಕು, ಹೇಗೆ ಮಾಡುತ್ತೀರಾ ಎಂದು ನಮಗೆ ಗೊತ್ತಿಲ್ಲ, ಅದು ನಿಮ್ಮ ಕೆಲಸ ಆದರೆ, ಅದನ್ನು ನಿಲ್ಲಸಬೇಕು" ಎಂದು ನ್ಯಾಯಾಲಯವು ಪಂಜಾಬ್ ಸರ್ಕಾರದ ವಕೀಲರಿಗೆ ಹೇಳಿದೆ.
ದೆಹಲಿ ಸರ್ಕಾರದ ವಿರುದ್ಧವೂ ಚಾಟಿ
ದೆಹಲಿ ಸರ್ಕಾರವನ್ನೂ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ. "ದೆಹಲಿ ಸರ್ಕಾರವೂ ಜವಾಬ್ದಾರರಾಗಿರಬೇಕು. ಅನೇಕ ಬಸ್ಸುಗಳು ಹೆಚ್ಚಿನ ಹೊಗೆ ಬಿಡುಗಡೆ ಮಾಡುತ್ತಿವೆ ಮತ್ತು ಅರ್ಧದಷ್ಟು ಸಾಮರ್ಥ್ಯದಲ್ಲಿ ಓಡುತ್ತಿವೆ. ನೀವು ಸಮಸ್ಯೆ ಬಗೆಹರಿಸಲು ಗಮನ ಕೊಡಬೇಕು" ಎಂದು ಹೇಳಿದೆ.
ನ್ಯಾಯಮೂರ್ತಿ ಎಸ್ಕೆ ಕೌಲ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರ ಪೀಠವು ಶುಕ್ರವಾರಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿತು. ಹುಲ್ಲು ಸುಡುವುದನ್ನು ತಡೆಯುವ ಮಾರ್ಗಗಳ ಕುರಿತು ಉತ್ತರ ಪ್ರದೇಶ, ರಾಜಸ್ಥಾನ, ಹರಿಯಾಣ, ಪಂಜಾಬ್ ಮತ್ತು ದೆಹಲಿ ಸರ್ಕಾರಗಳೊಂದಿಗೆ ಸಭೆ ನಡೆಸುವಂತೆ ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರಾದ ಅಪರಾಜಿತಾ ಸಿಂಗ್, ಪಂಜಾಬ್ನಲ್ಲಿನ ಫಾರ್ಮ್ ಬೆಂಕಿಯನ್ನು ಪರಿಶೀಲಿಸಲಾಗಿಲ್ಲ. ದೆಹಲಿಯ ಗಾಳಿಯ ಗುಣಮಟ್ಟ ಕಡಿಮೆಯಾಗಲು ಮುಖ್ಯ ಕಾರಣ ಕೃಷಿ ಹುಲ್ಲು ಸುಡುವುದಾಗಿದೆ ಎಂದು ಹೇಳಿದರು.
ವಾಯು ಗುಣಮಟ್ಟ ನಿರ್ವಹಣೆಗಾಗಿ ಆಯೋಗ ಮತ್ತು ರಾಜ್ಯಗಳು ವಾಯು ಮಾಲಿನ್ಯವನ್ನು ನಿಯಂತ್ರಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದಾಗಿ ಹೇಳುತ್ತಿವೆ. ಆದರೆ ಇನ್ನೂ ಹುಲ್ಲನ್ನು ಕೃಷಿ ಭೂಮಿಯಲ್ಲಿ ಸುಡಲಾಗುತ್ತಿದೆ ಎಂದು ಹೇಳಿದರು.
ಸಂಕಷ್ಟಕ್ಕೆ ಸಿಲುಕಿದ ಎಎಪಿ
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣ್, 2017ರಿಂದ ಈ ಕುರಿತು ವಿಚಾರಣೆ ನಡೆಯುತ್ತಿದ್ದು, ಹಲವು ಆದೇಶಗಳನ್ನು ಹೊರಡಿಸಲಾಗಿದೆ ಎಂದರು.
ದೆಹಲಿಯ ವಾಯುಮಾಲಿನ್ಯದ ಮಟ್ಟದಲ್ಲಿ ವಾರ್ಷಿಕ ಹೆಚ್ಚಳ ಮತ್ತು ಅದರ ಹಿಂದೆ ಹುಲ್ಲು ಸುಡುವ ಪಾತ್ರವು ಕಳೆದ ಕೆಲವು ವರ್ಷಗಳಿಂದ ರಾಜಕೀಯ ವಿಚಾರವಾಗಿದೆ. ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರವು ಈ ಹಿಂದೆ ಪಂಜಾಬ್ ಮತ್ತು ಹರಿಯಾಣದಲ್ಲಿನ ಪ್ರತಿಸ್ಪರ್ಧಿಗಳ ಸರ್ಕಾರಗಳು ಬೆಳೆ ಅವಶೇಷಗಳನ್ನು ಸುಡುವುದನ್ನು ತಡೆಯುತ್ತಿಲ್ಲ ಎಂದು ಆರೋಪಿಸಿದೆ.
ಈ ಬಾರಿ ದೆಹಲಿ ಮತ್ತು ಪಂಜಾಬ್ನಲ್ಲಿ ಎಎಪಿ ಅಧಿಕಾರದಲ್ಲಿದ್ದು, ಪಂಜಾಬ್ನಲ್ಲಿ ಹುಲ್ಲು ಸುಡುವ ಪ್ರಮಾಣ ಕಡಿಮೆಯಾಗಿದ್ದು, ಬಿಜೆಪಿ ಆಡಳಿತವಿರುವ ಹರಿಯಾಣದ ಮೇಲೆ ಆರೋಪ ಹೊರಿಸಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications