Get Updates
Get notified of breaking news, exclusive insights, and must-see stories!

ಉದಯನಿಧಿ ಸ್ಟಾಲಿನ್, ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚೆನ್ನೈ, ಸೆಪ್ಟೆಂಬರ್‌ 22: ಸನಾತನ ಧರ್ಮ ಕುರಿತು ಹೇಳಿಕೆ ನೀಡಿ ದೇಶದಲ್ಲಿ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ತಮ್ಮ ಹೇಳಿಕೆಗಳಲ್ಲಿ ಜನರಲ್ಲಿ ವಿಭಜನೆ ಮತ್ತು ತಾರತಮ್ಯವನ್ನು ಉತ್ತೇಜಿಸಲು ಸನಾತನ ಧರ್ಮವನ್ನು ದೂಷಿಸಿದ್ದಾರೆ ಮತ್ತು ಅದರ ನಿರ್ಮೂಲನೆಗೆ ಕರೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

Supreme Court Notice to Udayanidhi Stalin, Tamil Nadu Government

ಸನಾತನ ಧರ್ಮದ ಕುರಿತು ಈ ಹಿಂದೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಮಾಜಿ ಕೇಂದ್ರ ಸಚಿವ ಮತ್ತು ಡಿಎಂಕೆ ಮಾಜಿ ಸಂಸದ ಎ ರಾಜಾ ನೀಡಿದ್ದ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ದಾಖಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.

ಸನಾತನ ಧರ್ಮದ ಹೇಳಿಕೆ ವಿಚಾರವಾಗಿ ಚೆನ್ನೈನ ವಕೀಲರೊಬ್ಬರು ಉದಯನಿಧಿ ಮತ್ತು ರಾಜಾ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದರು. ಇದೇ ಅರ್ಜಿ ವಿಚಾರವಾಗಿ ಸುಪ್ರೀಂ ಕೋರ್ಟ್ ತಮಿಳುನಾಡಿನ ಡಿಎಂಕೆ ಸರ್ಕಾರ ಮತ್ತು ಉದಯನಿಧಿ ಸ್ಟಾಲಿನ್ ಗೆ ನೋಟಿಸ್ ಜಾರಿ ಮಾಡಿದೆ.

ಈ ಹಿಂದೆ ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಪಾಲ್ಗೊಂಡು, ''ಕೆಲವು ವಿಷಯಗಳನ್ನು ನಾವು ವಿರೋಧಿಸುವ ಬದಲು ಅವುಗಳನ್ನು ನಿರ್ಮೂಲನೆ ಮಾಡುವುದೇ ಸರಿ. ನಾವು ಕೊರೊನಾ, ಡೆಂಗೆ, ಮಲೇರಿಯಾದಂಥ ಸೋಂಕುಗಳನ್ನು ವಿರೋಧಿಸಬಾರದು. ಆರೋಗ್ಯ ಜಾಗೃತಿಯ ಮೂಲಕ ಅವುಗಳನ್ನು ನಿರ್ಮೂಲನೆ ಮಾಡಬೇಕು. ಹಾಗೆಯೇ ಸನಾತನ ಧರ್ಮವನ್ನೂ ನಾವು ವಿರೋಧಿಸುವ ಬದಲು ಸಾಮಾಜಿಕ ಜಾಗೃತಿಯ ಮೂಲಕ ನಿರ್ಮೂಲನೆ ಮಾಡಬೇಕು ಎಂದು ಕರೆ ನೀಡಿದ್ದರು.

ಸನಾತನ ಧರ್ಮದ ಕುರಿತು ಮತ್ತೊಂದು ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್‌ ಸನಾತನವನ್ನು ತೊಡೆದುಹಾಕಿದರೆ ಅಸ್ಪೃಶ್ಯತೆಯೂ ನಾಶವಾಗುತ್ತದೆ. ಅಸ್ಪೃಶ್ಯತೆ ಹೋಗಲಾಡಿಸಲು ಸಂತಾನ ಧರ್ಮವನ್ನು ತೊಡೆದುಹಾಕಬೇಕು ಎಂದು ನಾವು ಹೇಳುತ್ತೇವೆ, ಸನಾತನ ನಾಶವಾದರೆ ಅಸ್ಪೃಶ್ಯತೆಯೂ ನಾಶವಾಗುತ್ತದೆ ಎಂದು ನಾನು ನಂಬುತ್ತೇನೆ ಎಂದು ಹೇಳಿದ್ದರು.

ಕಳೆದ ವಾರ ತಂಜಾವೂರಿನಲ್ಲಿ ತಮಿಳು ಸೇವಾ ಸಂಗಮ್ ನಡೆಸಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾಜ್ಯಪಾಲ ರವಿ ಅವರು ತಮಿಳುನಾಡಿನ ವಿವಿಧ ಭಾಗಗಳಲ್ಲಿ ಇಂದಿಗೂ ಚಾಲ್ತಿಯಲ್ಲಿರುವ ವ್ಯಕ್ತಿಯ ಜಾತಿ ಆಧಾರಿತ ಸಾಮಾಜಿಕ ತಾರತಮ್ಯದ ಬಗ್ಗೆ ವಿವರವಾಗಿ ಮಾತನಾಡಿದ್ದರು. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರರೂ ಆಗಿರುವ ಉದಯನಿಧಿ ಅವರು ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, "ಸನಾತನ ಧರ್ಮವನ್ನು ಬೇರುಸಹಿತ ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ" ಎಂದು ಹೇಳಿದ್ದರು.

ಈ ಹಿಂದೆ ಅವರು, ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಅಥವಾ ಕೊರೊನಾವೈರಸ್‌ನಂತಹ ಕಾಯಿಲೆಗಳಿಗೆ ಹೋಲಿಸಿದ್ದರು. ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ. ಅವನ್ನು ಮಾತ್ರ ನಿರ್ಮೂಲನೆ ಮಾಡಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕರೋನಾವನ್ನು ವಿರೋಧಿಸಲು ಸಾಧ್ಯವಿಲ್ಲ, ಬದಲಾಗಿ ನಾವು ಅವುಗಳನ್ನು ನಿರ್ಮೂಲನೆ ಮಾಡಬೇಕು. ನಾವು ಸನಾತನವನ್ನು ಹೇಗೆ ನಿರ್ಮೂಲನೆ ಮಾಡುತ್ತೇವೆ. ಸನಾತನವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು ಎಂದು ಅವರು ಹೇಳಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+