Get Updates
Get notified of breaking news, exclusive insights, and must-see stories!

ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನಡೆ?

ನವದೆಹಲಿ, ಏಪ್ರಿಲ್. 13: ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಇತರೆ ಹಿಂದುಳಿದ ವರ್ಗಗಳ (ಒಬಿಸಿ) ವಿಭಾಗದಲ್ಲಿ ಮುಸ್ಲಿಮರಿಗೆ ನೀಡಿದ್ದ ಶೇಕಡಾ 4ರಷ್ಟು ಮೀಸಲಾತಿ ರದ್ದು ಮಾಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಇದು ತರ್ಕಬದ್ಧವಲ್ಲದ ಗ್ರಹಿಕೆ ಆಧಾರದಲ್ಲಿ ನಡೆದಿದೆ ಎಂದು ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಲಾಗಿದೆ.

ಮತ್ತೊಂದು ಕಡೆ ಈ ನಿರ್ಧಾರ ದೋಷಪೂರಿತ ಎಂದು ಸುಪ್ರೀಂಕೋರ್ಟ್ ಹೇಳಿದೆ. 'ಮುಸ್ಲಿಮರ ಶೇಕಡಾ 4ರ ಒಬಿಸಿ ಕೋಟಾವನ್ನು ರದ್ದುಪಡಿಸಿ, ಒಕ್ಕಲಿಗರು ಹಾಗೂ ಲಿಂಗಾಯತರ ಮೀಸಲಾತಿಯನ್ನು ತಲಾ ಶೇ 2ರಷ್ಟು ಹೆಚ್ಚಿಸುವ ನಿರ್ಧಾರವು ಮೇಲ್ನೋಟಕ್ಕೆ ಅಸ್ಥಿರ ಹಾಗೂ ದೋಷಪೂರಿತ' ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಮೂಲಕ ಚುನಾವಣೆ ಸಂದರ್ಭದಲ್ಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನಡೆ ಉಂಟಾದಂತಾಗಿದೆ.

Supreme Court pauses Bommai government Muslim quota cut decision

ಚರ್ಚೆ ಹುಟ್ಟುಹಾಕಿದ್ದ ನಿರ್ಧಾರ

ಮತ್ತೊಂದು ಕಡೆ ಕರ್ನಾಟಕ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲು ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿತ್ತು. ಸಿಜೆಐ ಡಿವೈ ಚಂದ್ರಚೂಡ್, ನ್ಯಾ. ಪಿಎಸ್ ನರಸಿಂಹ ಹಾಗೂ ನ್ಯಾ. ಜೆಬಿ ಪರ್ಡಿವಾಲಾ ಅವರನ್ನು ಒಳಗೊಂಡ ಪೀಠದ ಅರ್ಜಿ ವಿಚಾರಣೆ ಆರಂಭಿಸಿತ್ತು. ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲಿಕೆಯಾಗಿರುವ ಈ ಅರ್ಜಿಯ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆ ಘೋಷಣೆಯಾಗುವ ಮೊದಲೇ ಬಿಜೆಪಿ ಸರ್ಕಾರ ಪ್ರಕಟಿಸಿದ್ದ ಈ ನಿರ್ಧಾರ ಚರ್ಚೆ ಹುಟ್ಟುಹಾಕಿತ್ತು.

ನಿಯಮ ಉಲ್ಲಂಘನೆ ಆರೋಪ

ರಾಜ್ಯದ ಜನಸಂಖ್ಯೆಯಲ್ಲಿ ಶೇ.13ರಷ್ಟಿರುವ ಮುಸ್ಲಿಮರ ವಿಚಾರದಲ್ಲಿ ತಾರತಮ್ಯ ಮಾಡುವ ಮೂಲಕ ಕರ್ನಾಟಕ ಸರ್ಕಾರ ಸಂವಿಧಾನದ ಸಮಾನತೆ ಮತ್ತು ಜಾತ್ಯತೀತ ತತ್ವ ಉಲ್ಲಂಘಿಸಿದೆ ಎಂದು ಅರ್ಜಿದಾರರು ವಾದಿಸಿದರು. ಸರ್ಕಾರವು ತನ್ನ ನಿರ್ಧಾರವನ್ನು ಸಮರ್ಥಿಸಲು ಯಾವುದೇ ಅಧ್ಯಯನವನ್ನು ನಡೆಸಿಲ್ಲ ಅಥವಾ ಯಾವುದೇ ಪ್ರಾಯೋಗಿಕ ಮಾಹಿತಿ ಸಂಗ್ರಹಿಸಿಲ್ಲ ಎಂದು ಆರೋಪಿಸಲಾಗಿತ್ತು.

ಏನಿದು ಮೀಸಲಾತಿ ವಿವಾದ?

ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಮುಸ್ಲಿಮರಿಗೆ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿ ರದ್ದುಪಡಿಸಲು ನಿರ್ಧರಿಸಿತ್ತು. ಸರ್ಕಾರವು ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಗಾಗಿ ಎರಡು ಹೊಸ ವರ್ಗಗಳನ್ನು ಘೋಷಿಸಿದೆ. ನಂತರ ಇತರ ಹಿಂದುಳಿದ ವರ್ಗಗಳ (OBC) ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇಕಡಾ 4ರ ಕೋಟಾವನ್ನು ರದ್ದುಗೊಳಿಸಿತು. 4 ಪ್ರತಿಶತ ಒಬಿಸಿ ಮುಸ್ಲಿಂ ಕೋಟಾವನ್ನು ರಾಜ್ಯದ ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತರ ನಡುವೆ ಸಮಾನವಾಗಿ ಹಂಚಲಾಗಿದೆ.

ಪ್ರಸ್ತುತ, ಒಕ್ಕಲಿಗರು 4 ಪ್ರತಿಶತ ಮತ್ತು ಲಿಂಗಾಯತರು 5 ಪ್ರತಿಶತ ಮೀಸಲಾತಿ ಹೊಂದಿದ್ದಾರೆ. ರಾಜ್ಯ ಕ್ಯಾಬಿನೆಟ್ ನಿರ್ಧಾರದ ನಂತರ, ಒಕ್ಕಲಿಗರು ಕ್ರಮವಾಗಿ 2 (ಸಿ) ಮತ್ತು 2 (ಡಿ) ಅಡಿಯಲ್ಲಿ ಕ್ರಮವಾಗಿ ಶೇಕಡಾ 6 ರಷ್ಟು ಮೀಸಲಾತಿ ಮತ್ತು ಲಿಂಗಾಯತರು ಶೇಕಡಾ 7 ರಷ್ಟು ಮೀಸಲಾತಿಯನ್ನು ಪಡೆಯುತ್ತಾರೆ. ಈ ಸಮುದಾಯಗಳು ಈ ಹಿಂದೆ 3A ಮತ್ತು 3B ವರ್ಗಗಳ ಅಡಿಯಲ್ಲಿದ್ದರು, ಅದನ್ನು ರದ್ದುಗೊಳಿಸಲಾಗಿದೆ.

ಒಬಿಸಿ ವರ್ಗದಿಂದ ಮುಸ್ಲಿಮರನ್ನು ತೆಗೆದುಹಾಕಿ ಶೇಕಡಾ 10 ರಷ್ಟು ಮೀಸಲಾತಿ ಇರುವ ಆರ್ಥಿಕವಾಗಿ ದುರ್ಬಲ ವಿಭಾಗ (ಇಡಬ್ಲ್ಯೂಎಸ್) ಅಡಿಯಲ್ಲಿ ಅವರಿಗೆ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ. "ಕ್ಯಾಬಿನೆಟ್ ಉಪಸಮಿತಿ ಕೋಟಾ ವಿಭಾಗಗಳಲ್ಲಿ ಬದಲಾವಣೆಗಳನ್ನು ಶಿಫಾರಸು ಮಾಡಿದೆ. ಈ ಕಾರಣದಿಂದ ನಾವು ಮೀಸಲಾತಿ ಬದಲಾವಣೆ ಮಾಡಿದ್ದೇವೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ಘೋಷಣೆ ವೇಳೆ ತಿಳಿಸಿದ್ದರು. ಇದು ರಾಜ್ಯದಲ್ಲಿ ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+