ಮುಂದಿನ ಆದೇಶದವರೆಗೂ ದೇಶದ್ರೋಹ ಕಾಯ್ದೆಗೆ ಸುಪ್ರೀಂ ತಡೆ
ನವದೆಹಲಿ, ಮೇ 11: ಕೇಂದ್ರ ಸರಕಾರ ದೇಶದ್ರೋಹ ಪ್ರಕರಣದ (Sedition Law) ಪುನರ್ಪರಿಶೀಲನೆಗೆ ಒಪ್ಪಿಕೊಂಡ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಬುಧವಾರ ದೇಶಾದ್ಯಂತ ಈ ಪ್ರಕರಣಗಳಿಗೆ ತಡೆ ನೀಡಿದೆ. ನ್ಯಾಯಾಲಯದಿಂದ ಮುಂದಿನ ಆದೇಶ ಬರುವವರೆಗೂ ಐಪಿಸಿಯ ಸೆಕ್ಷನ್ 124A ಅಡಿಯಲ್ಲಿ ಯಾವುದೇ ಹೊಸ ಪ್ರಕರಣಗಳನ್ನು ದಾಖಲಿಸಬಾರದು ಎಂದು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಆದೇಶ ಮಾಡಿದೆ. ಹಾಗೆಯೇ, ಈಗ ಹಾಲಿ ಇರುವ ದೇಶದ್ರೋಹ ಪ್ರಕರಣಗಳಿಗೂ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ.
ದೇಶದ್ರೋಹ ಕಾನೂನಿನ ಅವಶ್ಯಕತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಆದೇಶದಲ್ಲಿ ಈ ಪ್ರಕರಣಗಳಿಗೆ ತಾತ್ಕಾಲಿಕವಾಗಿ ತಡೆ ನೀಡಿದೆ. "ಈ ಕಾಯ್ದೆಯ ಅಂಶವನ್ನು ತಡೆಯಲ್ಲಿಡುವುದು ಸೂಕ್ತ" ಎಂದು ಸುಪ್ರೀಂ ನ್ಯಾಯಪೀಠ ತಿಳಿಸಿದೆ.
ಜೈಲಿನಲ್ಲಿದ್ದವರಿಗೆ ನಿರಾಳ: ದೇಶದ್ರೋಹ ಕಾನೂನು ಇರುವ ಐಪಿಸಿ ಸೆಕ್ಷನ್ 124-A ಅಡಿ ಬಂಧಿತರಾಗಿರುವ ವ್ಯಕ್ತಿಗಳಿಗೆ ಸುಪ್ರೀಂ ಕೋರ್ಟ್ ಆದೇಶ ನಿರಾಳತೆ ತಂದಿದೆ. ಇವರು ಜಾಮೀನಿಗಾಗಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಕೋರ್ಟ್ ಹೇಳಿದೆ.

ಇದೇ ವೇಳೆ, ಕೇಂದ್ರ ಸರಕಾರ ವಿವಾದಿತ ದೇಶದ್ರೋಹ ಕಾಯ್ದೆಯಲ್ಲಿ ಮಾರ್ಪಾಡು ತರಲು ಒಪ್ಪಿಕೊಂಡು ಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಿತ್ತು. ಜೊತೆಗೆ, ತಾನು ತಿದ್ದುಪಡಿ ಕಾನೂನು ತರುವವರೆಗೂ ಹಾಲಿ ದೇಶದ್ರೋಹ ಕಾಯ್ದೆ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಮುಂದೂಡುವಂತೆಯೂ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಅಂದರೆ, ಈಗ ಚಾಲ್ತಿಯಲ್ಲಿರುವ ಕಾನೂನು ಸದ್ಯಕ್ಕೆ ಮುಂದುವರಿದುಕೊಂಡು ಹೋಗಲಿ ಎಂಬುದು ಸರಕಾರದ ನಿಲುವು.

ಸರಕಾರದ ಈ ಮನವಿಯನ್ನು ಅರ್ಜಿದಾರರ ಪರ ವಕೀಲರು ಬಲವಾಗಿ ವಿರೋಧಿಸಿದರು. ಈಗಿರುವ ದೇಶದ್ರೋಹ ಪ್ರಕರಣಗಳನ್ನು ಮುಂದುವರಿಸಿದಂತೆ ತಡೆ ನೀಡಬೇಕೆಂದು ಹಿರಿಯ ವಕೀಲ ಕಪಿಲ್ ಸಿಬಲ್ ಕೇಳಿಕೊಂಡರು. ಅರ್ಜಿದಾರರ ವಾದ ಪುರಸ್ಕರಿಸಿದ ಸರ್ವೋಚ್ಚ ನ್ಯಾಯಾಲಯ, ಯಾವುದೇ ಹೊಸ ದೇಶದ್ರೋಹ ಪ್ರಕರಣ ದಾಖಲು ಮಾಡುವಂತಿಲ್ಲ, ಹಾಲಿ ಪ್ರಕರಣಗಳನ್ನು ಮುಂದುವರಿಸುವಂತಿಲ್ಲ ಎಂದು ಆದೇಶ ಮಾಡಿದೆ.
(ಒನ್ಇಂಡಿಯಾ ಸುದ್ದಿ)
Recommended Video
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications