ವಿಷ್ಣು ಅವತಾರ ಪ್ರಕರಣ: ಧೋನಿ ವಿರುದ್ಧದ ಪ್ರಕರಣ ವಜಾ
2013ರಲ್ಲಿ ಜನಪ್ರಿಯ ನಿಯತಕಾಲಿಕೆಯೊಂದರ ಮುಖಪುಟದಲ್ಲಿ ಧೋನಿ ಅವರನ್ನು ಹಿಂದೂಗಳ ಆರಾಧ್ಯ ದೈವವಾದ ವಿಷ್ಣುವಿನಂತೆ ಬಿಂಬಿಸಿದ ಫೋಟೋ ಹಾಕಲಾಗಿದ್ದ ವಿರುದ್ಧ ದಾಖಲಾಗಿದ್ದ ಪ್ರಕರಣ.
ನವದೆಹಲಿ, ಏಪ್ರಿಲ್ 20: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿರುದ್ಧ ದಾಖಲಾಗಿದ್ದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ ಆರೋಪಗಳ ಪ್ರಕರಣವನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ.
ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವ ಬಗ್ಗೆ ಧೋನಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಧೋನಿ ವಿರುದ್ಧ ದಾಖಲಾಗಿರುವ ಆರೋಪಗಳು ನ್ಯಾಯ ಸಮ್ಮತವಾಗಿಲ್ಲ ಎಂದು ಹೇಳಿದೆ.

2013ರಲ್ಲಿ ಜನಪ್ರಿಯ ನಿಯತಕಾಲಿಕೆಯೊಂದರ ಮುಖಪುಟದಲ್ಲಿ ಧೋನಿ ಅವರನ್ನು ಹಿಂದೂಗಳ ಆರಾಧ್ಯ ದೈವವಾದ ವಿಷ್ಣುವಿನಂತೆ ಬಿಂಬಿಸಿದ ಫೋಟೋ ಹಾಕಲಾಗಿತ್ತು. ಇದು ವಿವಾದಕ್ಕೆ ಕಾರಣವಾಗಿ, ಕರ್ನಾಟಕ ಹೈಕೋರ್ಟ್ ನಲ್ಲಿ ಧೋನಿ ವಿರುದ್ಧ ಪ್ರಕರಣ ದಾಖಲಾಗಿತ್ತು.
ಮೊದಲಿಗೆ ಈ ಪ್ರಕರಣ ಕರ್ನಾಟಕ ಹೈಕೋರ್ಟ್ ನಲ್ಲಿ ದಾಖಲಾಗಿತ್ತು. ಆ ಪ್ರಕರಣದ ವಿಚಾರಣೆ ನಡೆಸಿದ್ದ ರಾಜ್ಯ ಹೈಕೋರ್ಟ್, ಧೋನಿಗೆ ಸಮನ್ಸ್ ಜಾರಿಗೊಳಿಸಿತ್ತು. ಆನಂತರ ಧೋನಿ ಇದರ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. 2016ರಲ್ಲಿ, ಸುಪ್ರೀಂ ಕೋರ್ಟ್ ಆ ಪ್ರಕರಣವನ್ನು ರದ್ದುಗೊಳಿಸಿತ್ತು.
ಆದರೆ, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ಎಫ್ ಐಆರ್ ದಾಖಲಾಗಿದ್ದರಿಂದಾಗಿ, ಧೋನಿ ಮತ್ತೆ ಸುಪ್ರೀಂ ಕೋರ್ಟ್ ಕದ ತಟ್ಟಿದ್ದರು. ಅದರ ವಿಚಾರಣೆಯ ಕೆಲವಾರು ದಿನಗಳಿಂದ ನಡೆಯುತ್ತಲೇ ಇತ್ತು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications