ನಮ್ಮ ಆದೇಶದಂತೆ 'ಅವನಿ' ಹತ್ಯೆ ನಡೆದಿದೆ: ನ್ಯಾಯಾಂಗ ನಿಂದನೆ ತಿರಸ್ಕರಿಸಿದ ಸುಪ್ರೀಂಕೋರ್ಟ್
ನವದೆಹಲಿ, ಫೆಬ್ರವರಿ 26: ನರಭಕ್ಷಕ ಹೆಣ್ಣು ಹುಲಿ 'ಅವನಿ'ಯ ಹತ್ಯೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಅರಣ್ಯ ಅಧಿಕಾರಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಅರ್ಜಿಯನ್ನು ಹಿಂದಕ್ಕೆ ತೆಗೆದುಕೊಳ್ಳಲಾಗಿದೆ. ಅವನಿಯ ಹತ್ಯೆಯನ್ನು ನ್ಯಾಯಾಲಯದ ನಿರ್ದೇಶನದಂತೆಯೇ ನಡೆಸಲಾಗಿದೆ ಎಂದು ಕೋರ್ಟ್ ಹೇಳಿದೆ.
ಅವನಿ ಅಥವಾ ಟಿ1 ಎಂಬ ಹೆಸರಿನಿಂದ ಕರೆಯಲಾಗುತ್ತಿದ್ದ ಹೆಣ್ಣು ಹುಲಿಯನ್ನು ಸುಪ್ರೀಂಕೋರ್ಟ್ ಆದೇಶದ ವಿರುದ್ಧವಾಗಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ವನ್ಯಜೀವಿ ಕಾರ್ಯಕರ್ತೆ ಸಂಗೀತಾ ಡೋಗ್ರಾ, ಅರಣ್ಯ ಅಧಿಕಾರಿಗಳು, ಸರ್ಕಾರದ ಇತರೆ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ತೆಗೆದುಕೊಳ್ಳಬೇಕು ಎಂದು ಅರ್ಜಿ ಸಲ್ಲಿಸಿದ್ದರು.
ಅಸ್ಗರ್ ಅಲಿ ಎಂಬ ಬೇಟೆಗಾರನ ನೆರವಿನಿಂದ ಅವನಿಯನ್ನು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಬಳಿಕ ಅಸ್ಗರ್ ಅಲಿಗೆ ಬಹುಮಾನವಾಗಿ ಹುಲಿಯ ಬೆಳ್ಳಿ ವಿಗ್ರಹವನ್ನು ನೀಡಲಾಗಿತ್ತು. ಹುಲಿಯನ್ನು ಕೊಂದಿದ್ದಕ್ಕಾಗಿ ಗ್ರಾಮಸ್ಥರ ಕೈಯಿಂದ ಬಹುಮಾನ ನೀಡಲಾಗಿತ್ತು ಎಂದು ಸಂಗೀತಾ ಆರೋಪಿಸಿದ್ದರು.

ನ್ಯಾಯಾಲಯದ ಆದೇಶದಂತೆ ಹುಲಿ ಹತ್ಯೆ ಮಾಡಲಾಗಿದೆ. ಇದರ ಯಾವ ಹಂತದಲ್ಲಿಯೂ ಅರಣ್ಯ ಅಧಿಕಾರಿಗಳು ಭಾಗವಹಿಸಿರಲಿಲ್ಲ. ತನಿಖೆ ಕೂಡ ಇದನ್ನು ಖಚಿತಪಡಿಸಿದೆ. ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ವಾದಿಸಿತು.
ತಮ್ಮ ಮೇಲೆ ಮತ್ತೆ ಹುಲಿ ದಾಳಿ ಮಾಡುವುದಿಲ್ಲ ಎಂದು ಗ್ರಾಮಸ್ಥರು ಸಂಭ್ರಮಿಸಿದ್ದಾರೆ. ಇದಕ್ಕೆ ಅರಣ್ಯ ಅಧಿಕಾರಿಗಳು ಹೊಣೆಯಾಗುತ್ತಾರೆಯೇ? ಎಂದು ಅರ್ಜಿದಾರರನ್ನು ಸಿಜೆಐ ಎಸ್ಎ ಬೊಬ್ಡೆ ಪ್ರಶ್ನಿಸಿದರು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications