ಕರ್ನಾಟಕ ಕಬ್ಬಿಣ ಅದಿರು ಇ- ಹರಾಜು ರದ್ದು ಸಾಧ್ಯವಿಲ್ಲ: ಸುಪ್ರೀಂ
ಕಬ್ಬಿಣ ಅದಿರು ಇ-ಹರಾಜು ಪ್ರಕ್ರಿಯೆ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ. ಎಫ್ಐಎಂಐ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸರ್ವೋಚ್ಛ ನ್ಯಾಯಾಲಯ.
ಬೆಂಗಳೂರು, ಆಗಸ್ಟ್ 29: ಸದ್ಯಕ್ಕೆ ಚಾಲ್ತಿಯಲ್ಲಿರುವ ಕಬ್ಬಿಣದ ಅದಿರಿನ ಇ-ಹರಾಜು ವ್ಯವಸ್ಥೆಯನ್ನು ಸ್ಥಗಿತಗೊಳಿಸುವಂತೆ ಕೋರಿ ಭಾರತೀಯ ಖನಿಜ ಕೈಗಾರಿಕೆಗಳ ಒಕ್ಕೂಟ (ಎಫ್ಐಎಂಐ) ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
Recommended Video

ಕಬ್ಬಿಣ ಅದಿರಿನ ಇ-ಹರಾಜು ಬದಲಿಗೆ ಬೇರೊಂದು ವ್ಯವಸ್ಥೆ ಅಥವಾ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಲು ಅನುಮತಿ ನೀಡಬೇಕೆಂದು ಕೋರಿ ನ್ಯಾಯಾಲಯಕ್ಕೆ ವೇದಾಂತ ಹಾಗೂ ಎಫ್ಐಎಂಐ ಮನವಿ ಸಲ್ಲಿಸಿದ್ದವು.

ಸೋಮವಾರ (ಆಗಸ್ಟ್ 28) ಅರ್ಜಿಯ ಬಗ್ಗೆ ತನ್ನ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್, ಸದ್ಯಕ್ಕೆ ಚಾಲ್ತಿಯಲ್ಲಿರುವ ಇ-ಟೆಂಡರ್ ವ್ಯವಸ್ಥೆಯು ಪಾರದರ್ಶಕವಾಗಿದ್ದು, ಪರಿಣಾಮಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ, ಇ-ಹರಾಜು ಪದ್ಧತಿಯನ್ನು ಕೈಬಿಟ್ಟು ಬದಲಿ ಮಾರ್ಗಗಳನ್ನು ಕಂಡುಕೊಳ್ಳುವ ಅವಶ್ಯಕತೆ ಕಂಡುಬರುತ್ತಿಲ್ಲ. ಹಾಗಾಗಿ, ವೇದಾಂತ ಹಾಗೂ ಎಫ್ಐಎಂಐ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ ಎಂದು ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿಗಳಾದ ರಂಜನ್ ಗೊಗೈ ಮತ್ತು ನವೀನ್ ಸಿಂಗ್ ಅವರು ತಿಳಿಸಿದರು.
ಕರ್ನಾಟಕದ ಗಣಿಗಾರಿಕೆ ಕ್ಷೇತ್ರದಲ್ಲಿ ವ್ಯಾಪಕ ಅಕ್ರಮಗಳು ಕೇಳಿಬಂದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕೆಲ ವರ್ಷಗಳ ಹಿಂದೆ ಗಣಿಗಾರಿಕೆಗೆ ಪೂರ್ತಿ ವಿರಾಮ ಹಾಡಿತ್ತು. ಆದರೆ, 2013ರಲ್ಲಿ ಬಳ್ಳಾರಿ, ತುಮಕೂರು ಹಾಗೂ ಚಿತ್ರದುರ್ಗ ಪ್ರಾಂತ್ಯಗಳಲ್ಲಿ ಗಣಿಗಾರಿಕೆ ನಡೆಸಲು ಅನುಮತಿ ಕೊಟ್ಟಿತ್ತಾದರೂ ವರ್ಷಕ್ಕೆ 30 ದಶಲಕ್ಷ ಟನ್ ಗಳನ್ನು ಮೀರಬಾರದೆಂದು ಆದೇಶಿಸಿತ್ತು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications