ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಳ್ಳಾರಿಗೆ ಪ್ರವೇಶ: ರೆಡ್ಡಿಗೆ ಅನುಮತಿ ನೀಡಲು ಸುಪ್ರೀಂ ನಕಾರ

|
Google Oneindia Kannada News

ನವದೆಹಲಿ, ಮೇ 4: ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳುವ ಮೂಲಕ ಮತ್ತೆ ರಾಜಕೀಯ ವಲಯದಲ್ಲಿ ತಮ್ಮ ಅಸ್ತಿತ್ವ ಪ್ರದರ್ಶಿಸಲು ಪ್ರಯತ್ನಿಸುತ್ತಿರುವ ಜನಾರ್ದನ ರೆಡ್ಡಿ ಅವರಿಗೆ ಮತ್ತೊಂದು ನಿರಾಸೆ ಎದುರಾಗಿದೆ.

ಕರ್ನಾಟಕ ಚುನಾವಣೆಯಲ್ಲಿ ತಮ್ಮ ಸಹೋದರ ಜಿ. ಸೋಮಶೇಖರ ರೆಡ್ಡಿ ಪರವಾಗಿ ಚುನಾವಣಾ ಪ್ರಚಾರ ನಡೆಸಲು ಬಳ್ಳಾರಿ ಪ್ರವೇಶಿಸಲು ಅನುಮತಿ ಕೋರಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ಪದ್ಮಾವತಿ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ರೆಡ್ಡಿ ವಿರುದ್ಧ ಆರೋಪಪದ್ಮಾವತಿ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ರೆಡ್ಡಿ ವಿರುದ್ಧ ಆರೋಪ

ಬಳ್ಳಾರಿಗೆ ತೆರಳಲು ಅನುಮತಿ ನೀಡಲು ಪೂರಕವಾದ ಯಾವುದೇ ಗಟ್ಟಿ ಅಂಶ ಅರ್ಜಿಯಲ್ಲಿ ಇಲ್ಲ ಎಂದು ಕೋರ್ಟ್ ಹೇಳಿದೆ.

supreme court rejects plea of jardana reddy

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜನಾರ್ದನ ರೆಡ್ಡಿ ಅವರು ಬಳ್ಳಾರಿ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.

ಜರ್ನಾದನ ರೆಡ್ಡಿ ಅವರ ಜಿ. ಸೋಮಶೇಖರ ರೆಡ್ಡಿ ಬಳ್ಳಾರಿಯಿಂದ ಸ್ಪರ್ಧಿಸುತ್ತಿದ್ದರೆ, ಹಿರಿಯ ಸಹೋದರ ಜಿ. ಕರುಣಾಕರ ರೆಡ್ಡಿ ಹರಪನಹಳ್ಳಿ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ಬಿಎಸ್‌ವೈ ಒತ್ತಡಕ್ಕೆ ಮಣಿದ ಅಮಿತ್ ಶಾ, ಮತ್ತೆ ಪ್ರಚಾರಕ್ಕೆ ರೆಡ್ಡಿಬಿಎಸ್‌ವೈ ಒತ್ತಡಕ್ಕೆ ಮಣಿದ ಅಮಿತ್ ಶಾ, ಮತ್ತೆ ಪ್ರಚಾರಕ್ಕೆ ರೆಡ್ಡಿ

ಮೊಳಕಾಲ್ಮೂರು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಸಂಸದ ಬಿ. ಶ್ರೀರಾಮಲು ಪರವಾಗಿ ಚುನಾವಣಾ ಪ್ರಚಾರದಲ್ಲಿ ಜನಾರ್ದನ ರೆಡ್ಡಿ ಭಾಗವಹಿಸಿದ್ದರು. ಈ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

English summary
Supreme Court today rejects Janaradana Reddy's a plea seeking permission to enter Ballari to campaign for his brother Somashekhar Reddy
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X