Get Updates
Get notified of breaking news, exclusive insights, and must-see stories!

ಅಪರಾಧಿಯಾದರೂ ಕೆಡವಲು ಅಧಿಕಾರವಿಲ್ಲ: ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂಕೋರ್ಟ್ ಅಸಮಾಧಾನ

ವಿವಿಧ ರಾಜ್ಯಗಳಲ್ಲಿ ಆರೋಪಿಗಳು ಯಾವುದಾರರೂ ಅಪರಾಧ ಚಟುವಟಿಕೆಯಲ್ಲಿ ಭಾಗವಹಿಸಿದಾಗ ಅವರ ಮನೆ, ಆಸ್ತಿಗಳನ್ನು ಬುಲ್ಡೋಜರ್ ಬಳಸಿ ಧ್ವಂಸ ಮಾಡುವ ಕ್ರಮವನ್ನು ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿದೆ. ಆತ ಅಪರಾಧಿ ಎಂದು ಸಾಬೀತಾದರೂ ಮನೆಯನ್ನು ಕೆಡವಲು ಯಾರಿಗೂ ಅಧಿಕಾರವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದ್ದು, ಇದಕ್ಕಾಗಿ ಮಾರ್ಗಸೂಚಿ ಪ್ರಕಟಿಸುವುದಾಗಿ ಹೇಳಿದೆ.

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಮನೆಗಳು ಮತ್ತು ಕಟ್ಟಡಗಳ ಧ್ವಂಸಕ್ಕೆ ಸಂಬಂಧಿಸಿದ ಆತಂಕವನ್ನು ನಿವಾರಿಸಲು ದೇಶಕ್ಕೆ ಅನ್ವಯವಾಗುವಂತೆ ಮಾರ್ಗಸೂಚಿ ಪ್ರಕಟಿಸುವುದಾಗಿ ತಿಳಿಸಿದೆ.

Supreme Court Rules Against Bulldozer Demolition of Convicts Homes

ಮುಸ್ಲಿಂ ವಿದ್ವಾಂಸರ ಸಂಸ್ಥೆ, ಜಮಿಯತ್ ಉಲಮಾ-ಎ-ಹಿಂದ್ ಸಲ್ಲಿಸಿದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ಗವಾಯಿ ಅವರು, ಆರೋಪಿ ಎನ್ನುವ ಕಾರಣಕ್ಕೆ ಮನೆ ಕೆಡುವುದು ಹೇಗೆ, ನ್ಯಾಯಾಲಯದಲ್ಲಿ ಶಿಕ್ಷೆಯಾದರೂ ಕೆಡವಲು ಅವಕಾಶವಿಲ್ಲ. ಎಸ್‌ಸಿ ಬಾರ್‌ಗೆ ಹೇಳಿದರೂ ವರ್ತನೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.

ವಕೀಲರ ವಾದವೇನು?

ಅರ್ಜಿದಾರರ ಪರ ಹಿರಿಯ ವಕೀಲ ದುಶ್ಯಂತ್ ದವೆ ವಾದ ಮಂಡಿಸಿದರು. 2022ರ ಗಲಭೆಯ ನಂತರ ದೆಹಲಿಯಲ್ಲಿ ಹಲವಾರು ಮನೆಗಳನ್ನು ಧ್ವಂಸಗೊಳಿಸಲಾಗಿದೆ. ಆರೋಪಿಗಳು ಹಿಂಸಾಚಾರಕ್ಕೆ ಪ್ರಚೋದನೆ ಕೊಟ್ಟಿದ್ದಾರೆ ಎಂದು ಆರೋಪಿಸಿದರು. ಹಿರಿಯ ವಕೀಲ ಚಂದರ್ ಉದಯ್ ಸಿಂಗ್ ಅವರು ಉದಯಪುರದಲ್ಲಿ ಒಬ್ಬ ವ್ಯಕ್ತಿಯ ಮನೆಯನ್ನು ಕೆಡವಲಾದ ಪ್ರಕರಣವನ್ನು ಉಲ್ಲೇಖಿಸಿದರು, ಬಾಡಿಗೆದಾರನ ಮಗ ಅಪರಾಧದ ಆರೋಪ ಹೊರಿಸಿದ್ದಾನೆ ಎಂದರು.

ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕಾನೂನು ಉಲ್ಲಂಘಿಸಿದಾಗ ಮಾತ್ರ ಮನೆಗಳನ್ನು ಕೆಡವಲಾಗುತ್ತಿದೆ. ನಗರಸಭೆ ಕಾನೂನು ಉಲ್ಲಂಘನೆಯಾದರೆ ಮಾತ್ರ ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಪೀಠವು, "ದೂರುಗಳನ್ನು ಗಮನಿಸಿದಾಗ ನಿಯಮಗಳನ್ನು ಉಲ್ಲಂಘಿಸಲಾಗಿದೆ, ಕಾನೂನಿನ ಸ್ಥಾಣವಾಗಿದ್ದರೂ, ಅದನ್ನು ಉಲ್ಲಂಘಿಸುವಲ್ಲಿ ಹೆಚ್ಚು ಅನುಸರಿಸಲಾಗುತ್ತಿದೆ ಎಂದು ಹೇಳಿದರು. ಒಂದು ವೇಳೆ ಅನಧಿಕೃತವಾಗಿ ನಿರ್ಮಾಣ ಮಾಡಿದ್ದರು, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕು ಎಂದರು.

ಅನಧಿಕೃತ ಕಟ್ಟಡಗಳನ್ನು ಕೆಡವಲು ಮಾರ್ಗಸೂಚಿ ಪ್ರಕಟಿಸುವ ಅಗತ್ಯವಿದೆ ಎಂದು ನ್ಯಾಯಮೂರ್ತಿ ವಿಶ್ವನಾಥನ್ ಅಭಿಪ್ರಾಯಪಟ್ಟಿದ್ದಾರೆ. ಸಲಹೆಗಳು ಬರಲಿ. ನಾವು ದೇಶಾದ್ಯಂತ ಜಾರಿಗೆ ಬರುವಂತೆ ಮಾರ್ಗಸೂಚಿಗಳನ್ನು ನೀಡುತ್ತೇವೆ ಎಂದು ನ್ಯಾಯಮೂರ್ತಿ ಗವಾಯಿ ಹೇಳಿದರು.

ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 17 ರಂದು ಮುಂದುವರೆಸಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಉತ್ತರ ಪ್ರದೇಶ ಮತ್ತು ದೆಹಲಿಯಲ್ಲಿ ಇದೇ ರೀತಿ ಹಲವು ಪ್ರಕರಣಗಳು ವರದಿಯಾಗಿದ್ದವು, ಇದೀಗ ಸುಪ್ರೀಂ ಕೋರ್ಟ್ ಹೇಳಿಕೆ ಮಹತ್ವ ಪಡೆದುಕೊಂಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+