ಅದರಲ್ಲಿ ಹಲ್ಲೇ ಇಲ್ಲವಲ್ಲ?: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ
ನವದೆಹಲಿ, ಮಾರ್ಚ್ 5: ನೆಟ್ಫ್ಲಿಕ್ಸ್, ಅಮೇಜಾನ್ ಪ್ರೈಂ ವಿಡಿಯೋದಂತಹ ಓವರ್ ದಿ ಟಾಪ್ (ಒಟಿಟಿ) ಪ್ಲಾಟ್ಫಾರ್ಮ್ಗಳನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ರೂಪಿಸಿರುವ ಹೊಸ ಮಾರ್ಗಸೂಚಿಗೆ ಹಲ್ಲೇ ಇಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಟೀಕಿಸಿದೆ. ಈ ಮಾರ್ಗಸೂಚಿಯ ಪ್ರಕಾರ ತಪ್ಪಿತಸ್ಥ ಸಂಸ್ಥೆಗಳು ಅಥವಾ ವ್ಯಕ್ತಿಗಳಳ ಮೇಲೆ ಕಾನೂನು ಕ್ರಮ ಜರುಗಿಸುವ ಅವಕಾಶವನ್ನೇ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಒಟಿಟಿ ವೇದಿಕೆಗಳನ್ನು ನಿಯಂತ್ರಿಸಲು ಇಂತಹ ಸಾಮಾನ್ಯ ಮಾರ್ಗಸೂಚಿಗಳ ಬದಲು ಸೂಕ್ತ ವ್ಯವಸ್ಥೆಯನ್ನು ಸ್ಥಾಪಿಸಲು ಕಠಿಣವಾದ ಕಾನೂನು ರೂಪಿಸುವ ಅಗತ್ಯವಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಶುಕ್ರವಾರ ವಿಚಾರಣೆಯ ವೇಳೆ ಸುಪ್ರೀಂಕೋರ್ಟ್, ವೆಬ್ ಸರಣಿ 'ತಾಂಡವ್' ವಿವಾದಕ್ಕೆ ಸಂಬಂಧಿಸಿದಂತೆ ಎಫ್ಐಆರ್ಗೆ ಒಳಗಾಗಿರುವ ಅಮೇಜಾನ್ ಪ್ರೈಂ ವಿಡಿಯೋದ ಭಾರತೀಯ ಮುಖ್ಯಸ್ಥೆ ಅಪರ್ಣಾ ಪುರೋಹಿತ್ ಅವರಿಗೆ ಬಂಧನದಿಂದ ರಕ್ಷಣೆಯನ್ನು ನೀಡಿತು.
ಸಚಿವಾಲಯದ ಸೂಚನೆಯಂತೆ ಈಗಾಗಲೇ ಆ ಎರಡು ವಿವಾದಾತ್ಮಕ ದೃಶ್ಯಗಳನ್ನು ತೆಗೆದು ಹಾಕಲಾಗಿದೆ ಎಂದು ಅಮೇಜಾನ್ ಪ್ರೈಂ ವಿಡಿಯೋ ಹಾಗೂ ಅಪರ್ಣಾ ಪುರೋಹಿತ್ ಪರ ಹಾಜರಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ತಿಳಿಸಿದರು.

ಪೋರ್ನೊಗ್ರಫಿ ಪ್ರಸಾರ ಮಾಡುತ್ತಿಲ್ಲ
'ನ್ಯಾಯಮೂರ್ತಿಗಳು ನಿನ್ನ ಹಂಚಿಕೊಂಡ ಅಭಿಪ್ರಾಯವು ಎಲ್ಲೆಡೆಯೂ ಸುದ್ದಿಯಾಗಿದೆ. ನಾವು ಪೋರ್ನೊಗ್ರಫಿ ತೋರಿಸುವುದಿಲ್ಲ. ಅಮೇಜಾನ್ ಮತ್ತು ನೆಟ್ಫ್ಲಿಕ್ಸ್ಗಳು ಜಗತ್ತಿನಾದ್ಯಂತ ಪ್ರಸಾರವಾಗುತ್ತಿವೆ. ಅದರಲ್ಲಿ ಯಾವುದೇ ಪೋರ್ನೊಗ್ರಫಿ ಇಲ್ಲ. ಈ ವೇದಿಕೆಗಳಲ್ಲಿ ಅತ್ಯುತ್ತಮ ಚಿತ್ರಗಳು ಪ್ರದರ್ಶನವಾಗುತ್ತವೆ' ಎಂದು ರೋಹಟಗಿ ಹೇಳಿದರು.

ಬರಿ ಮಾರ್ಗಸೂಚಿಯಷ್ಟೇ ಇದೆ
ಕೇಂದ್ರ ಸರ್ಕಾರವು ರೂಪಿಸಿರುವ ಮಾರ್ಗಸೂಚಿಯು ಸಮಸ್ಯೆಗಳನ್ನು ಎದುರಿಸುವಷ್ಟು ಪ್ರಬಲ ಹಲ್ಲುಗಳನ್ನು ಹೊಂದಿಲ್ಲ. ಅದು ಕೇವಲ ಮಾರ್ಗಸೂಚಿ ರೂಪದಲ್ಲಷ್ಟೇ ಇದೆ ಎಂದು ಹೇಳಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠ, ಕಠಿಣ ಕಾನೂನು ರೂಪಿಸುವುದನ್ನು ಪರಿಗಣಿಸುವಂತೆ ಸೂಚಿಸಿತು.

ಸರ್ಕಾರದಿಂದ ಪರಿಗಣನೆ
ನಿಯಮಗಳನ್ನು ಪಾಲಿಸದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಅವಕಾಶ ಇರಬೇಕು. ಹೀಗಾಗಿ ಸಾಮಾಜಿಕ ಮಾಧ್ಯಮ ಮತ್ತು ಒಟಿಟಿ ಪ್ಲಾಟ್ಫಾರ್ಮ್ಗಳ ನಿಯಂತ್ರಣ ಕಾನೂನಿನ ಅಗತ್ಯವಿದೆ ಎಂಬ ಸುಪ್ರೀಂಕೋರ್ಟ್ ಸಲಹೆಗಳನ್ನು ಒಪ್ಪಿಕೊಂಡ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕಠಿಣ ಕಾನೂನುಗಳನ್ನು ತಯಾರಿಸುವುದನ್ನು ಸರ್ಕಾರ ಖಂಡಿತವಾಗಿಯೂ ಪರಿಗಣಿಸಲಿದೆ. ಕರಡು ಕಾನೂನನ್ನು ನ್ಯಾಯಾಲಯದ ಮುಂದೆ ಇರಿಸಲಿದೆ ಎಂದು ತಿಳಿಸಿದರು.

ಪೋರ್ನೊಗ್ರಫಿ ಪ್ರಸಾರ
ಒಟಿಟಿ ವೇದಿಕೆಯಲ್ಲಿ ಪ್ರಸಾರವಾಗುವ ವೆಬ್ ಕಾರ್ಯಕ್ರಮಗಳು, ಸಿನಿಮಾಗಳು ಹಾಗೂ ಇತರೆ ಕಾರ್ಯಕ್ರಮಗಳನ್ನು ಪರಿಶೀಲನೆಗೆ ಒಳಪಡಿಸುವ ಅಗತ್ಯವಿದೆ ಕೆಲವು ಪ್ರಕರಣಗಳಲ್ಲಿ, ಅಂತಹ ವೇದಿಕೆಗಳಲ್ಲಿ ಪೋರ್ನೊಗ್ರಫಿಯನ್ನೂ ಪ್ರಸಾರ ಮಾಡಲಾಗುತ್ತಿದೆ ಎಂದು ಸುಪ್ರೀಂಕೋರ್ಟ್ ಗುರುವಾರ ಹೇಳಿತ್ತು. ಸಾಮಾಜಿಕ ಮಾಧ್ಯಮಗಳು ಹಾಗೂ ಒಟಿಟಿಯನ್ನು ನಿಯಂತ್ರಿಸಲು ಸರ್ಕಾರ ರೂಪಿಸಿರುವ ಮಾರ್ಗಸೂಚಿಯನ್ನು ತನಗೆ ತೋರಿಸುವಂತೆ ಸೂಚಿಸಿತ್ತು. ಜತೆಗೆ ಅಪರ್ಣಾ ಪುರೋಹಿತ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕಾಯ್ದಿರಿಸಿತ್ತು.
-
Foundation of IT ಆಯ್ಕೆ ವೈರಲ್: ಭಾಷಾ ಸಮಾನತೆಗೆ ದಕ್ಷಿಣ ಭಾರತೀಯರ ಪ್ರಶ್ನೆ, ನಾರ್ಥಿ ಮಾರ್ಕ್ಸ್ ಕಾರ್ಡ್ Viral Post -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ












Click it and Unblock the Notifications