ವಿವಾಹಿತ ಪುರುಷರ ಆತ್ಮಹತ್ಯೆ: ರಾಷ್ಟ್ರೀಯ ಪುರುಷರ ಆಯೋಗ ಸ್ಥಾಪನೆಗೆ ಸಪ್ರೀಂಕೋರ್ಟ್ನಲ್ಲಿ ಅರ್ಜಿ ವಿಚಾರಣೆ
ಮಹಿಳೆಯರ ಪರವಾಗಿ ದನಿ ಎತ್ತಲು ರಾಷ್ಟ್ರಮಟ್ಟದಲ್ಲಿ ಮಹಿಳಾ ಆಯೋಗ ಇರುವಂತೆ, ಪುರುಷರ ವಿರುದ್ಧ ನಡೆಯುವ ಕೌಟುಂಬಿಕ ದೌರ್ಜನ್ಯದ ದೂರನ್ನು ಕೇಳುವ, ಸಮಸ್ಯೆಗೆ ಸ್ಪಂದಿಸಲು 'ಪುರುಷರಿಗಾಗಿ ರಾಷ್ಟ್ರೀಯ ಆಯೋಗ'ವನ್ನು ರಚಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಜುಲೈ 3 ರಂದು ವಿಚಾರಣೆ ನಡೆಸಲಿದೆ.
ಭಾರತದಲ್ಲಿ ವಿವಾಹಿತ ಪುರುಷರ ಆತ್ಮಹತ್ಯೆ ಪ್ರಮಾಣ ಹೆಚ್ಚುತ್ತಿದ್ದು ಆತಂಕ ಮೂಡಿಸುವ ವಿಷಯವಾಗಿದೆ. ಕೌಟುಂಬಿಕ ಹಿಂಸಾಚಾರಕ್ಕೆ ಒಳಗಾಗುವ ಪುರುಷರ ಹಿತಾಸಕ್ತಿ ಕಾಪಾಡಲು ಮಾರ್ಗಸೂಚಿಗಳನ್ನು ರೂಪಿಸಲು ಆಯೋಗ ರಚನೆ ಮಾಡಬೇಕು ಎಂದು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.

ಸುಪ್ರೀಂ ಕೋರ್ಟ್ ವೆಬ್ಸೈಟ್ ಪ್ರಕಾರ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠವು ಸೋಮವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗಾಗಿ ಪಟ್ಟಿ ಮಾಡಿದೆ ಎಂದು ಡಿಹೆಚ್ ವರದಿ ಮಾಡಿದ.
ಹೆಚ್ಚಾಗುತ್ತಿರುವ ವಿವಾಹಿತ ಪುರುಷರ ಆತ್ಮಹತ್ಯೆ
ವಕೀಲ ಮಹೇಶ್ ಕುಮಾರ್ ತಿವಾರಿ ಅವರು ಸಲ್ಲಿಸಿರುವ ಮನವಿಯಲ್ಲಿ 2021 ರಲ್ಲಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್ಸಿಆರ್ಬಿ) ಭಾರತದಲ್ಲಿ ಆಕಸ್ಮಿಕ ಸಾವುಗಳ ಕುರಿತು ಪ್ರಕಟಿಸಿದ ಅಂಕಿ-ಅಂಶಗಳನ್ನು ಉಲ್ಲೇಖಿಸಿದ್ದಾರೆ. 2021ರಲ್ಲಿ ಭಾರತದಲ್ಲಿ 1,64,033 ಜನರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದು, ಅದರಲ್ಲಿ 81,063 ವಿವಾಹಿತ ಪುರುಷರು, 28,680 ವಿವಾಹಿತ ಮಹಿಳೆಯರು ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
"2021ರಲ್ಲಿ ಆತ್ಮಹತ್ಯೆ ಮಾಡಿಕೊಂಡ ಪುರುಷರಲ್ಲಿ 33.2 ಪ್ರತಿಶತ ಕೌಟುಂಬಿಕ ಸಮಸ್ಯೆಗಳಿಗಾಗಿ ಆತ್ಮಹತ್ಯೆ ಹಾದಿ ಹಿಡಿದಿದ್ದರೆ, 4.8 ಪ್ರತಿಶತ ಪುರುಷರು ವಿವಾಹ ಸಂಬಂಧಿತ ಸಮಸ್ಯೆಗಳಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. 2021ರಲ್ಲಿ ಒಟ್ಟು 1,18,979 ಪುರುಷರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, 45,026 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಟ್ಟು ಆತ್ಮಹತ್ಯೆ ಪ್ರಕರಣಗಳಲ್ಲಿ ಪುರುಷರ ಆತ್ಮಹತ್ಯೆ ಪ್ರಮಾಣ ಶೇಕಡಾ 72ರಷ್ಟಿದ್ದರೆ, ಮಹಿಳೆಯರ ಆತ್ಮಹತ್ಯೆ ಪ್ರಮಾಣ ಶೇಕಡಾ 27ರಷ್ಟಿದೆ" ಎಂದು ಎನ್ಸಿಆರ್ಬಿ ಒದಗಿಸಿದ ಅಂಕಿ-ಅಂಶಗಳನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಪುರುಷರ ದೂರುಗಳನ್ನು ಸ್ವೀಕರಿಸಲು ಆಯೋಗ
ವಿವಾಹಿತ ಪುರುಷರ ಆತ್ಮಹತ್ಯೆಯ ಸಮಸ್ಯೆಯನ್ನು ನಿಭಾಯಿಸಲು ಮತ್ತು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಪುರುಷರ ದೂರುಗಳನ್ನು ಸ್ವೀಕರಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ಕೋರಲಾಗಿದೆ.
"ಕೌಟುಂಬಿಕ ಹಿಂಸಾಚಾರಕ್ಕೆ ಒಳಗಾದವರ, ಕೌಟುಂಬಿಕ ಸಮಸ್ಯೆಗಳು ಮತ್ತು ಮದುವೆ ಸಂಬಂಧಿತ ಸಮಸ್ಯೆಗಳಿಂದಾಗಿ ಒತ್ತಡದಲ್ಲಿ ಇರುವವರ ದೂರನ್ನು ಸ್ವೀಕರಿಸಲು ಪ್ರತಿ ಪೊಲೀಸ್ ಠಾಣೆಯ ಪೊಲೀಸ್ ಪ್ರಾಧಿಕಾರಕ್ಕೆ, ಸ್ಟೇಷನ್ ಹೌಸ್ ಆಫೀಸರ್ಗೆ ಗೃಹ ಸಚಿವಾಲಯದ ಮೂಲಕ ಸರಿಯಾದ ಮಾರ್ಗಸೂಚಿಗಳನ್ನು ನೀಡಲು ಭಾರತೀಯ ಒಕ್ಕೂಟಕ್ಕೆ (ಪ್ರತಿವಾದಿ ಸಂಖ್ಯೆ 1) ನಿರ್ದೇಶನ ನೀಡಬೇಕು. ಭಾರತ ಸರ್ಕಾರದಿಂದ ಸರಿಯಾದ ಕಾನೂನು ಜಾರಿಗೆ ಬರುವವರೆಗೆ ಇಂತಹ ಪ್ರಕರಣಗಳ ವಿಲೇವಾರಿ ಮಾಡಲು ರಾಜ್ಯ ಮಾನವ ಹಕ್ಕು ಆಯೋಗಕ್ಕೆ ನಿರ್ದೇಶನ ನೀಡುವಂತೆ" ಕೋರಲಾಗಿದೆ.
"ಕೌಟುಂಬಿಕ ಹಿಂಸಾಚಾರ ಅಥವಾ ಕೌಟುಂಬಿಕ ಸಮಸ್ಯೆ ಮತ್ತು ವಿವಾಹ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವಿವಾಹಿತ ಪುರುಷರ ಆತ್ಮಹತ್ಯೆಯ ವಿಷಯದ ಬಗ್ಗೆ ಸಂಶೋಧನೆ ನಡೆಸಲು ಮತ್ತು ರಾಷ್ಟ್ರೀಯ ಪುರುಷರ ಆಯೋಗವನ್ನು ರಚಿಸುವ ಬಗ್ಗೆ ಅಗತ್ಯ ವರದಿಯನ್ನು ಮಾಡಲು ಭಾರತೀಯ ಕಾನೂನು ಆಯೋಗಕ್ಕೆ ನಿರ್ದೇಶನ ನೀಡಿ" ಎಂದು ಮನವಿಯಲ್ಲಿ ತಿಳಿಸಲಾಗಿದೆ.
-
ಶೂಟಿಂಗ್ ವೇಳೆ ನನ್ನ ಖಾಸಗಿ ಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ: ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ನಟಿ ಮೊನಾಲಿಸಾ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ











Click it and Unblock the Notifications