ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗವಿಲ್ಲ ಕಾಯ್ದೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್
ನವದೆಹಲಿ, ಫೆಬ್ರವರಿ.29: ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಜನರು ರಾಜಸ್ಥಾನದಲ್ಲಿ ಸರ್ಕಾರಿ ಉದ್ಯೋಗಗಳಿಗೆ ಅರ್ಹರಾಗಿರುವುದಿಲ್ಲ ಎಂಬ ರಾಜ್ಯದ ಈ 1989 ರ ಕಾನೂನಿಗೆ ಈಗ ಸುಪ್ರೀಂ ಕೋರ್ಟ್ನ ಅನುಮೋದನೆಯ ಮುದ್ರೆ ಸಿಕ್ಕಿದೆ.
ರಾಜಸ್ಥಾನ ಸರ್ಕಾರದ ಈ ನಿಯಮವು ತಾರತಮ್ಯವಲ್ಲ ಮತ್ತು ಸಂವಿಧಾನವನ್ನು ಉಲ್ಲಂಘಿಸುವುದಿಲ್ಲ ಎಂದು ತೀರ್ಪು ನೀಡಿದೆ. ಈ ನಿಯಮ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಈ ತೀರ್ಪು ನೀಡಿದ್ದಾರೆ. ಇದು ನೀತಿಯ ವ್ಯಾಪ್ತಿಗೆ ಒಳಪಡುತ್ತದೆ ಮತ್ತು ಅದರಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ದೀಪಂಕರ್ ದತ್ತಾ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು ಆದೇಶದಲ್ಲಿ ತಿಳಿಸಿದೆ.

2022 ರ ಅಕ್ಟೋಬರ್ 12 ರ ರಾಜಸ್ಥಾನ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ಪೀಠವು ಎತ್ತಿಹಿಡಿದಿದೆ. ನಿಯಮ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಮಾಜಿ ಸೈನಿಕ ರಾಮಜಿ ಲಾಲ್ ಜಾಟ್ ಅವರ ಅರ್ಜಿಯನ್ನು ವಜಾಗೊಳಿಸಿತು. 2017 ರ ಜನವರಿಯಲ್ಲಿ ರಕ್ಷಣಾ ಸೇವೆಗಳಿಂದ ನಿವೃತ್ತರಾದ ನಂತರ, ರಾಮಜಿ ಲಾಲ್ ಜಾಟ್ ಮೇ 2018 ರಲ್ಲಿ ರಾಜಸ್ಥಾನ ಪೊಲೀಸ್ನಲ್ಲಿ ಕಾನ್ಸ್ಟೆಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು.
ಆದರೆ, 1 ಜೂನ್ 2002 ರ ನಂತರ ಅವರು ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರಿಂದ ಅವರ ಅರ್ಜಿಯನ್ನು ರಾಜಸ್ಥಾನ ಪೊಲೀಸ್ ಅಧೀನ ಸೇವಾ ನಿಯಮಗಳು, 1989 ರ ಅಡಿಯಲ್ಲಿ ತಿರಸ್ಕರಿಸಲಾಯಿತು. ರಾಜಸ್ಥಾನದ ವಿವಿಧ ಸೇವಾ (ತಿದ್ದುಪಡಿ) ನಿಯಮಗಳು- 2001 ರ ಪ್ರಕಾರ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಸಿಗುವುದಿಲ್ಲ.
ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ರಾಜಸ್ಥಾನ ಪೊಲೀಸ್ ಅಧೀನ ಸೇವಾ ನಿಯಮಗಳು, 1989 ರ ನಿಯಮ 24 (4) ರ ಪ್ರಕಾರ ಜೂನ್ 1, 2002 ರಂದು ಅಥವಾ ನಂತರ ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಯಾವುದೇ ಅಭ್ಯರ್ಥಿಯು ನೇಮಕಾತಿಗೆ ಅರ್ಹರಾಗಿರುವುದಿಲ್ಲ. ಇದು ತಾರತಮ್ಯವಲ್ಲ ಮತ್ತು ಸಂವಿಧಾನವನ್ನು ಉಲ್ಲಂಘಿಸುವುದಿಲ್ಲ ಎಂದಿದ್ದಾರೆ.

"ಎರಡಕ್ಕಿಂತ ಹೆಚ್ಚು ಜೀವಂತ ಮಕ್ಕಳನ್ನು ಹೊಂದಿರುವ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ ವರ್ಗೀಕರಣವು ತಾರತಮ್ಯವಲ್ಲ ಮತ್ತು ಸಂವಿಧಾನವನ್ನು ಉಲ್ಲಂಘಿಸುವುದಿಲ್ಲ. ಕುಟುಂಬ ಯೋಜನೆಯನ್ನು ಉತ್ತೇಜಿಸುವುದು ಈ ನಿಬಂಧನೆಯ ಹಿಂದಿನ ಉದ್ದೇಶವಾಗಿತ್ತು" ಎಂದು ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಕೆ ವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠ ಹೇಳಿದೆ.
1989 ರ ರಾಜಸ್ಥಾನ ಪೊಲೀಸ್ ಅಧೀನ ಸೇವಾ ನಿಯಮಗಳ ನಿಯಮ 24 (4) ರ ಅಡಿಯಲ್ಲಿ ಮಾಜಿ ಸೈನಿಕರ ಅರ್ಜಿಯನ್ನು ತಿರಸ್ಕರಿಸಲಾಯಿತು. ಜೂನ್ 1, 2002 ರ ನಂತರ ಅವರು ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರಿಂದ, ಅವರು ರಾಜ್ಯದ ರಾಜಸ್ಥಾನದ ವಿವಿಧ ಸೇವಾ (ತಿದ್ದುಪಡಿ) ನಿಯಮಗಳು, 2001ರ ಅಡಿಯಲ್ಲಿ ಸಾರ್ವಜನಿಕ ಉದ್ಯೋಗಕ್ಕೆ ಅನರ್ಹರಾಗಿದ್ದಾರೆ ಎನ್ನಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ರಾಜಸ್ಥಾನ ಹೈಕೋರ್ಟ್ಗೆ ಮೊರೆ ಹೋದರು. ಅವರನ್ನು ಅನರ್ಹಗೊಳಿಸಿರುವ ನಿಯಮವು ನೀತಿಯ ವ್ಯಾಪ್ತಿಯಲ್ಲಿ ಬರುತ್ತದೆ ಮತ್ತು ನ್ಯಾಯಾಲಯದ ಯಾವುದೇ ಹಸ್ತಕ್ಷೇಪವನ್ನು ಸಮರ್ಥಿಸುವುದಿಲ್ಲ ಎಂದು ತೀರ್ಪು ನೀಡಿತ್ತು.
-
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications