ವೈಫಲ್ಯ ಮುಚ್ಚಿಡಲು ಸರ್ಜಿಕಲ್ ಸ್ಟ್ರೈಕ್ ವಿಡಿಯೋ ಬಿಡುಗಡೆ: ಮಾಯಾವತಿ ಕಿಡಿ
ನವದೆಹಲಿ, ಜೂನ್ 29: ಸರ್ಜಿಕಲ್ ಸ್ಟ್ರೈಕ್ ವಿಡಿಯೋ ಬಿಡುಗಡೆ ಮಾಡಿದ ಕೇಂದ್ರ ಸರಕಾರದ ತೀರ್ಮಾನವನ್ನು ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ ಟೀಕಿಸಿದ್ದಾರೆ.
ಕೇಂದ್ರ ಸರಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಈ ವಿಡಿಯೋ ಬಿಡುಗಡೆ ಮಾಡಿದೆ. ಈ ಮೂಲಕ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಯತ್ನಿಸಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
"2019ಕ್ಕೂ ಮೊದಲ ತಮ್ಮ ಎಲ್ಲಾ ವೈಫಲ್ಯಗಳನ್ನು ಮುಚ್ಚಿ ಹಾಕಲು ಈ ಸರಕಾರ ಸರ್ಜಿಕಲ್ ಸ್ಟ್ರೈಕ್ ನ ವಿಡಿಯೋ ಬಿಡುಗಡೆ ಮಾಡಿದೆ," ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಮಾಯಾವತಿ ಕಿಡಿಕಾರಿದ್ದಾರೆ.

ಒಂದೊಮ್ಮೆ ಪುರಾವೆ ನೀಡುವ ಉದ್ದೇಶಕ್ಕೇ ಈ ವಿಡಿಯೋ ಬಿಡುಗಡೆ ಮಾಡಿದ್ದರೆ, ಸರ್ಜಿಕಲ್ ಸ್ಟ್ರೈಕ್ ನಡೆದಾಗಲೇ ಯಾಕೆ ವಿಡಿಯೋ ಬಿಡುಗಡೆ ಮಾಡಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.
ಎರಡು ವರ್ಷದ ಕೆಳಗೆ ಅಂದರೆ 29 ಸೆಪ್ಟೆಂಬರ್ 2016ರಲ್ಲಿ ಕೇಂದ್ರ ಸರಕಾರ ಪಾಕಿಸ್ತಾನದ ನೆಲದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿತ್ತು. ಇದರ ವಿಡಿಯೋ ಬುಧವಾರ ರಾತ್ರಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿತ್ತು.












Click it and Unblock the Notifications