ಉಗ್ರರ ಮೇಲೆ ಸೇನೆ ದಾಳಿ, ಸರ್ವ ಪಕ್ಷ ಸಭೆ ಕರೆದ ಮೋದಿ
ನವದೆಹಲಿ, ಸೆ. 29: ಉರಿ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪ್ರತಿದಾಳಿಯನ್ನು ಆರಂಭಿಸಿದೆ. ಬುಧವಾರ ರಾತ್ರಿಯಿಂದಲೇ ಉಗ್ರರ ಕ್ಯಾಂಪ್ ಗಳ ಮೇಲೆ ಸೇನೆ ದಾಳಿ ನಡೆಸಿದ್ದು, ಅನೇಕ ಕ್ಯಾಂಪ್ ಗಳು ಧ್ವಂಸವಾಗಿವೆ. ಈ ನಿಟ್ಟಿನಲ್ಲಿ ಚರ್ಚೆ ನಡೆಸಲು ಇಂದು ಸಂಜೆ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ.
ಬುಧವಾರ ಮಧ್ಯರಾತ್ರಿ 12.30 ರಿಂದ 4.30 ರ ಸುಮಾರಿಗೆ ಭಾರತೀಯ ಸೇನೆಯ ವಿಶೇಷ ತಂಡ ಈ ದಾಳಿ ನಡೆಸಿದೆ. ಗಡಿ ನಿಯಂತ್ರಣ ರೇಖೆ(LoC) ಬಳಿ ಇರುವ ಉಗ್ರರ ಕ್ಯಾಂಪ್ ಗಳನ್ನು ಗುರಿಯನ್ನಾಗಿಸಿ ದಾಳಿ ನಡೆಸಲಾಗಿದೆ ಎಂದು ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್ ಮಾಹಿತಿ ನೀಡಿದ್ದಾರೆ. [ಗಡಿ ನಿಯಂತ್ರಣಾ ರೇಖೆ ದಾಟಿ ಉಗ್ರರ ಸದ್ದಡಗಿಸಿದ ಭಾರತೀಯ ಸೇನೆ]

ಸುಮಾರು 500 ಮೀಟರ್ ನಿಂದ 2 ಕಿ.ಮೀ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದೆ. ಈ ಕುರಿತು ಪಾಕಿಸ್ತಾನಕ್ಕೂ ಮಾಹಿತಿ ನೀಡಲಾಗಿದೆ. ಭಯೋತ್ಪಾದನೆ ಹತ್ತಿಕ್ಕುವಲ್ಲಿ ಪಾಕಿಸ್ತಾನ ಕೂಡಾ ನೆರವಾಗಬೇಕಿದೆ ಎಂದು ರಣಬೀರ್ ಸಿಂಗ್ ಹೇಳಿದರು.
Surgical strikes on Pakistani terror camps belonged to multiple terror groups, NO Indian casualties: Sources
— ANI (@ANI_news) September 29, 2016
ಈ ಬಗ್ಗೆ ಮುಂದಿನ ಕಾರ್ಯಾಚರಣೆ ಹೇಗೆ ನಡೆಯಬೇಕು ಎಂಬುದನ್ನು ಚರ್ಚಿಸಲು ಗುರುವಾರ ಸಂಜೆ 4 ಗಂಟೆಗೆ ಸರ್ವ ಪಕ್ಷಗಳ ಸಭೆ ನಡೆಸಲು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ.












Click it and Unblock the Notifications