ಉಗ್ರರ ಮೇಲೆ ಸೇನೆ ದಾಳಿ, ಸರ್ವ ಪಕ್ಷ ಸಭೆ ಕರೆದ ಮೋದಿ

ನವದೆಹಲಿ, ಸೆ. 29: ಉರಿ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪ್ರತಿದಾಳಿಯನ್ನು ಆರಂಭಿಸಿದೆ. ಬುಧವಾರ ರಾತ್ರಿಯಿಂದಲೇ ಉಗ್ರರ ಕ್ಯಾಂಪ್ ಗಳ ಮೇಲೆ ಸೇನೆ ದಾಳಿ ನಡೆಸಿದ್ದು, ಅನೇಕ ಕ್ಯಾಂಪ್ ಗಳು ಧ್ವಂಸವಾಗಿವೆ. ಈ ನಿಟ್ಟಿನಲ್ಲಿ ಚರ್ಚೆ ನಡೆಸಲು ಇಂದು ಸಂಜೆ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ.

ಬುಧವಾರ ಮಧ್ಯರಾತ್ರಿ 12.30 ರಿಂದ 4.30 ರ ಸುಮಾರಿಗೆ ಭಾರತೀಯ ಸೇನೆಯ ವಿಶೇಷ ತಂಡ ಈ ದಾಳಿ ನಡೆಸಿದೆ. ಗಡಿ ನಿಯಂತ್ರಣ ರೇಖೆ(LoC) ಬಳಿ ಇರುವ ಉಗ್ರರ ಕ್ಯಾಂಪ್ ಗಳನ್ನು ಗುರಿಯನ್ನಾಗಿಸಿ ದಾಳಿ ನಡೆಸಲಾಗಿದೆ ಎಂದು ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್ ಮಾಹಿತಿ ನೀಡಿದ್ದಾರೆ. [ಗಡಿ ನಿಯಂತ್ರಣಾ ರೇಖೆ ದಾಟಿ ಉಗ್ರರ ಸದ್ದಡಗಿಸಿದ ಭಾರತೀಯ ಸೇನೆ]

Surgical Strikes Across LoC, Government calls an all party meeting

ಸುಮಾರು 500 ಮೀಟರ್ ನಿಂದ 2 ಕಿ.ಮೀ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದೆ. ಈ ಕುರಿತು ಪಾಕಿಸ್ತಾನಕ್ಕೂ ಮಾಹಿತಿ ನೀಡಲಾಗಿದೆ. ಭಯೋತ್ಪಾದನೆ ಹತ್ತಿಕ್ಕುವಲ್ಲಿ ಪಾಕಿಸ್ತಾನ ಕೂಡಾ ನೆರವಾಗಬೇಕಿದೆ ಎಂದು ರಣಬೀರ್ ಸಿಂಗ್ ಹೇಳಿದರು.

ಈ ಬಗ್ಗೆ ಮುಂದಿನ ಕಾರ್ಯಾಚರಣೆ ಹೇಗೆ ನಡೆಯಬೇಕು ಎಂಬುದನ್ನು ಚರ್ಚಿಸಲು ಗುರುವಾರ ಸಂಜೆ 4 ಗಂಟೆಗೆ ಸರ್ವ ಪಕ್ಷಗಳ ಸಭೆ ನಡೆಸಲು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+