ತಡರಾತ್ರಿ ಏಕಾಏಕಿ ಹಾಸ್ಟೆಲ್ ತಪಾಸಣೆ: 89 ವಿದ್ಯಾರ್ಥಿನಿಯರು ನಾಪತ್ತೆ!
ಉತ್ತರ ಪ್ರದೇಶ, ಆಗಸ್ಟ್ 23: ಉತ್ತರ ಪ್ರದೇಶ ಸರ್ಕಾರ ನಡೆಸುತ್ತಿರುವ ವಸತಿ ಶಾಲೆಯೊಂದರ ವಾರ್ಡನ್ ಸೇರಿದಂತೆ ನಾಲ್ವರ ವಿರುದ್ಧಎಫ್ಐಆರ್ ದಾಖಲಾಗಿದ್ದು, ಹಠಾತ್ ತಪಾಸಣೆಯ ವೇಳೆ ಒಟ್ಟು 100 ವಿದ್ಯಾರ್ಥಿನಿಯರಲ್ಲಿ 11 ಮಂದಿ ಮಾತ್ರ ಪತ್ತೆಯಾಗಿದ್ದು, ಉಳಿದ 89 ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಆಘಾತಕಾರಿ ಘಟನೆ ವರದಿಯಾಗಿದೆ.
ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಪರಸ್ಪುರದಲ್ಲಿ ಈ ಘಟನೆ ನಡೆದಿದ್ದು, ಪರಸ್ಪುರದ ಕಸ್ತೂರಬಾ ಗಾಂಧಿ ವಸತಿ ಸೋಮವಾರ ರಾತ್ರಿ ತಪಾಸಣೆ ನಡೆಸಿದಾಗ ಈ ಘಟನೆ ಬೆಳಕಿಗೆ ಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ್ಡನ್ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪರಸ್ಪುರದ ಕಸ್ತೂರಬಾ ಗಾಂಧಿ ವಸತಿ ಬಾಲಕಿಯರ ಹಾಸ್ಟೆಲ್ನಲ್ಲಿ ಒಟ್ಟು 100 ವಿದ್ಯಾರ್ಥಿನಿಯರು ದಾಖಲಾಗಿದ್ದಾರೆ. ಆದರೆ, ತಪಾಸಣೆ ವೇಳೆ ಕೇವಲ 11 ಬಾಲಕಿಯರು ಮಾತ್ರ ಪತ್ತೆಯಾಗಿದ್ದು, ಉಳಿದ 89 ಬಾಲಕಿಯರು ನಾಪತ್ತೆಯಾಗಿದ್ದಾರೆ.
ಆದರೆ, 11 ವಿದ್ಯಾರ್ಥಿನಿಯರು ಮಾತ್ರ ಹಾಸ್ಟೆಲ್ನಲ್ಲಿ ಹಾಜರಿರುವುದು ಕಂಡುಬಂದಿದೆ. 89 ವಿದ್ಯಾರ್ಥಿನಿಯರ ಗೈರುಹಾಜರಿಯ ಬಗ್ಗೆ ವಾರ್ಡನ್ ಸರಿತಾ ಸಿಂಗ್ ಅವರನ್ನು ವಿಚಾರಿಸಿದಾಗ ತೃಪ್ತಿಕರ ಉತ್ತರವನ್ನು ನೀಡಲಿಲ್ಲ ಎಂದು ಜಿಲ್ಲಾಧಿಕಾರಿ ನೇಹಾ ಶರ್ಮಾ ತಿಳಿಸಿದ್ದಾರೆ. ಇದು ಗಂಭೀರ ನಿರ್ಲಕ್ಷ್ಯ, ವಸತಿ ಬಾಲಕಿಯರ ಹಾಸ್ಟೆಲ್ ಅನ್ನು ಈ ರೀತಿ ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಫ್ಐಆರ್ ದಾಖಲಿಸಲು ಆದೇಶಿಸಿದ್ದಾರೆ
ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಹಾಸ್ಟೆಲ್ ವಾರ್ಡನ್ ಪೂರ್ಣಾವಧಿ ಶಿಕ್ಷಕ ಕಾವಲುಗಾರ ಮತ್ತು ಪ್ರಾಂತೀಯ ರಕ್ಷಣಾ ದಳದ (ಪಿಆರ್ಡಿ) ಜವಾನನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಜಿಲ್ಲಾ ಮೂಲ ಶಿಕ್ಷಾ ಅಧಿಕಾರಿ (ಬಿಎಸ್ಎ), ಪ್ರೇಮ್ ಚಂದ್ ಯಾದವ್ ಮಾಹಿತಿ ನೀಡಿದ್ದಾರೆ.
-
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ












Click it and Unblock the Notifications