ಪ್ರಸಾರ ಭಾರತಿಗೆ ಕನ್ನಡದ ಸೂರ್ಯ ಪ್ರಕಾಶ
ನವದೆಹಲಿ, ಅ. 29: ಕನ್ನಡಿಗ, ಹಿರಿಯ ಪತ್ರಕರ್ತ ಅರಕಲಗೂಡು ಸೂರ್ಯಪ್ರಕಾಶ್ ಪ್ರಸಾರ ಭಾರತಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಉಪರಾಷ್ಟ್ರಪತಿ ಎಂ.ಹಮೀದ್ ಅನ್ಸಾರಿ ಅವರ ನೇತೃತ್ವದ ಸಮಿತಿ ಮೂರು ವರ್ಷಗಳ ಅವಧಿಗೆ ಸೂರ್ಯಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ದೆಹಲಿ ಮೂಲದ ಚಿಂತಕರ ಕೂಟವಾದ ವಿವೇಕಾನಂದ ಅಂತಾರಾಷ್ಟ್ರೀಯ ಪ್ರತಿಷ್ಠಾನದಲ್ಲಿ ತೊಡಗಿಕೊಂಡಿರುವ ಪ್ರಕಾಶ್ ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮ ಕ್ಷೇತ್ರದಲ್ಲಿ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ ಅನುಭವ ಹೊಂದಿದ್ದಾರೆ.[ಪೆನ್ನನ್ನೇ ಪೊರಕೆಯಾಗಿಸಿದ ಪತ್ರಕರ್ತರಿಗೆ ಮೋದಿ ಧನ್ಯವಾದ]

ಪ್ರಸಾರ ಭಾರತಿ ಅಧ್ಯಕ್ಷೆಯಾಗಿದ್ದ ಹಿರಿಯ ಪತ್ರಕರ್ತೆ ಮೃಣಾಲ್ ಪಾಂಡೆ ಅವರ ಅಧಿಕಾರಾವಧಿ ಏ.30ಕ್ಕೆ ಮುಕ್ತಾಯವಾಗಿತ್ತು. ಹುದ್ದೆ ಖಾಲಿಯಾದ ಆರು ತಿಂಗಳ ವಿಳಂಬದ ಬಳಿಕ ಹೊಸ ಅಧ್ಯಕ್ಷರ ನೇಮಕವಾಗಿದೆ.
ಜೀ ನ್ಯೂಸ್, ದಿ ಪಯೋನಿರ್, ಏಷ್ಯಾ ಟೈಮ್ಸ್, ಇಂಡಿಯಾ ಎಡಿಟರ್, ಈ ನಾಡು ಮತ್ತು ಇಂಡಿಯನ್ ಎಕ್ಸ್ಪ್ರೆಸ್ನಲ್ಲಿ ಕೆಲಸ ಮಾಡಿದ ಅನುಭವ ಸೂರ್ಯ ಪ್ರಕಾಶ್ ಬಳಿಯಿದೆ. ಅಲ್ಲದೇ ದೆಹಲಿಯ ಪಯೋನೀರ್ ಮೀಡಿಯಾ ಶಾಲೆಗಳ ಸಂಸ್ಥಾಪಕ-ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.[ದಿನಪತ್ರಿಕೆಗಳ ಮುಖಪುಟದಲ್ಲಿ 'ಮಂಗಳಯಾನ']
ಎರಡನೇ ಕನ್ನಡಿಗ
ಹಾಸನ ಜಿಲ್ಲೆಯ ಅರಕಲಗೂಡು ಮೂಲದ ಸೂರ್ಯ ಪ್ರಕಾಶ್ ಪ್ರಸಾರ ಭಾರತಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಎರಡನೇ ಕನ್ನಡಿಗ. ಈ ಮೊದಲು ಹಿರಿಯ ಪತ್ರಕರ್ತ ಎಂ.ವಿ.ಕಾಮತ್ ಅವರು ಪ್ರಸಾರ ಭಾರತಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಪ್ರಸಾರ ಭಾರತಿ ವ್ಯಾಪ್ತಿ ಎಷ್ಟು?
ಮಾಹಿತಿ ಮತ್ತು ಪ್ರಸಾರ ಸಚಿವಾಲಯ ವ್ಯಾಪ್ತಿಯಲ್ಲಿನ ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೊ ನಿರ್ವಹಣೆ ಹೊಣೆಗಾರಿಕೆಯನ್ನು ಪ್ರಸಾರ ಭಾರತಿ ಹೊಂದಿದೆ. ಪ್ರಸಾರ ಭಾರತಿ ಮಂಡಳಿಯು ಅಧ್ಯಕ್ಷ, ಕಾರ್ಯನಿರ್ವಾಹಕ ಸದಸ್ಯ, ಇಬ್ಬರು ಸದಸ್ಯರು ಮತ್ತು ಆರು ಮಂದಿ ಅರೆಕಾಲಿಕ ಸದಸ್ಯರನ್ನು ಒಳಗೊಂಡಿರುತ್ತದೆ. ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೊದಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳ ಹೊಣೆಗಾರಿಕೆ ಇವರ ಮೇಲಿರುತ್ತದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications