ಪ್ರಸಾರ ಭಾರತಿ ಚೇರ್ಮನ್ ಆಗಿ ಕನ್ನಡಿಗ ಎ. ಸೂರ್ಯ ಪ್ರಕಾಶ್ ಮರು ಆಯ್ಕೆ
ನವದೆಹಲಿ, ಡಿಸೆಂಬರ್ 1: ಪ್ರಸಾರ ಭಾರತಿಯ ಚೇರ್ಮನ್ ಆಗಿ ಹಿರಿಯ ಪತ್ರಕರ್ತ ಡಾ. ಅರಕಲಗೂಡು ಸೂರ್ಯ ಪ್ರಕಾಶ್ ರನ್ನು ಮರು ಆಯ್ಕೆ ಮಾಡಲಾಗಿದೆ. ಫೆಬ್ರವರಿ 8, 2020ರವರೆಗೆ ಅಂದರೆ ಅವರಿಗೆ 70 ವರ್ಷವಾಗುವವರೆಗೆ ಅವರು ಈ ಹುದ್ದೆಯಲ್ಲಿ ಇರಲಿದ್ದಾರೆ.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಧ್ಯಕ್ಷತೆಯಲ್ಲಿ ಇಂದು ನಡೆದ ಸಮಿತಿ ಸಭೆಯಲ್ಲಿ ಸೂರ್ಯ ಪ್ರಕಾಶ್ ಹೆಸರನ್ನು ಪ್ರಸಾರ ಭಾರತಿ ಚೇರ್ಮನ್ ಸ್ಥಾನಕ್ಕೆ ಶಿಫಾರಸ್ಸು ಮಾಡಲಾಯಿತು. ಈ ಶಿಫಾರಸ್ಸಿನ ಮೇರೆಗೆ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಸ್ಮೃತಿ ಇರಾನಿ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.

ಪ್ರಸಾರ ಭಾರತಿಯು ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನದ ಆಗುಹೋಗುಗಳನ್ನು ನಿರ್ವಹಿಸಲಿದೆ. ಸೂರ್ಯ ಪ್ರಕಾಶ್ 2014ರ ಅಕ್ಟೋಬರ್ ನಲ್ಲಿ ಮೊದಲ ಬಾರಿಗೆ ಪ್ರಸಾರ ಭಾರತಿ ಚೇರ್ಮನ್ ಆಗಿ ಆಯ್ಕೆಯಾಗಿದ್ದರು.
ಈ ಸಂಬಂಧ ಪಿಟಿಐ ಜತೆ ಮಾತನಾಡಿರುವ ಸೂರ್ಯ ಪ್ರಕಾಶ್, ಈ ಅವಕಾಶ ನೀಡಿದ್ದಕ್ಕಾಗಿ ಉಪರಾಷ್ಟ್ರಪತಿ, ಸಮಿತಿ ಸದಸ್ಯರು ಮತ್ತು ಕೇಂದ್ರ ಸರಕಾರಕ್ಕೆ ಧನ್ಯವಾದ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಯಾರು ಈ ಸೂರ್ಯ ಪ್ರಕಾಶ್?
ಸೂರ್ಯ ಪ್ರಕಾಶ್ ಮೂಲತಃ ಕರ್ನಾಟಕದ ಹಾಸನದವರು. ನಂತರ ಇಲ್ಲಿಂದ ಅವರ ಕುಟುಂಬ ವಲಸೆ ಹೋಗಿತ್ತು.
ಜೀ ನ್ಯೂಸ್, ದಿ ಪಯೋನಿರ್, ಏಷ್ಯಾ ಟೈಮ್ಸ್, ಇಂಡಿಯಾ ಎಡಿಟರ್, ಈ ನಾಡು ಮತ್ತು ಇಂಡಿಯನ್ ಎಕ್ಸ್ಪ್ರೆಸ್ನಲ್ಲಿ ಕೆಲಸ ಮಾಡಿದ ಅನುಭವ ಸೂರ್ಯ ಪ್ರಕಾಶ್ ಬಳಿಯಿದೆ. ಅಲ್ಲದೇ ದೆಹಲಿಯ ಪಯೋನೀರ್ ಮೀಡಿಯಾ ಶಾಲೆಗಳ ಸಂಸ್ಥಾಪಕ-ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಎರಡನೇ ಕನ್ನಡಿಗ:
ಹಿರಿಯ ಪತ್ರಕರ್ತ ಎಂ.ವಿ ಕಾಮತ್ ಪ್ರಸಾರ ಭಾರತಿ ಚೇರ್ಮನ್ ಸ್ಥಾನವನ್ನು ಅಲಂಕರಿಸಿದ ಮೊದಲ ಕನ್ನಡಿಗರಾಗಿದ್ದರು. ಈಗ ಡಾ. ಎ ಸೂರ್ಯ ಪ್ರಕಾಶ್ ಪ್ರಸಾರ ಭಾರತಿಗೆ ಎರಡನೇ ಬಾರಿ ಚೇರ್ಮನ್ ಆಗಿ ಆಯ್ಕೆಯಾಗಿದ್ದಾರೆ.
ಸಿಇಒ ಸ್ಥಾನದಲ್ಲಿ ಶಶಿಶೇಖರ್ ಮಂದುವರಿಕೆ
ಪ್ರಸಾರ ಭಾರತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸ್ಥಾನದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಇಒ ಸ್ಥಾನದಲ್ಲಿ ಶಶಿಶೇಖರ್ ವೆಂಪತಿ ಅವರೇ ಮುಂದುವರಿಯಲಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications