ಪ್ರಸಾರ ಭಾರತಿ ಚೇರ್ಮನ್ ಆಗಿ ಕನ್ನಡಿಗ ಎ. ಸೂರ್ಯ ಪ್ರಕಾಶ್ ಮರು ಆಯ್ಕೆ
ನವದೆಹಲಿ, ಡಿಸೆಂಬರ್ 1: ಪ್ರಸಾರ ಭಾರತಿಯ ಚೇರ್ಮನ್ ಆಗಿ ಹಿರಿಯ ಪತ್ರಕರ್ತ ಡಾ. ಅರಕಲಗೂಡು ಸೂರ್ಯ ಪ್ರಕಾಶ್ ರನ್ನು ಮರು ಆಯ್ಕೆ ಮಾಡಲಾಗಿದೆ. ಫೆಬ್ರವರಿ 8, 2020ರವರೆಗೆ ಅಂದರೆ ಅವರಿಗೆ 70 ವರ್ಷವಾಗುವವರೆಗೆ ಅವರು ಈ ಹುದ್ದೆಯಲ್ಲಿ ಇರಲಿದ್ದಾರೆ.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಧ್ಯಕ್ಷತೆಯಲ್ಲಿ ಇಂದು ನಡೆದ ಸಮಿತಿ ಸಭೆಯಲ್ಲಿ ಸೂರ್ಯ ಪ್ರಕಾಶ್ ಹೆಸರನ್ನು ಪ್ರಸಾರ ಭಾರತಿ ಚೇರ್ಮನ್ ಸ್ಥಾನಕ್ಕೆ ಶಿಫಾರಸ್ಸು ಮಾಡಲಾಯಿತು. ಈ ಶಿಫಾರಸ್ಸಿನ ಮೇರೆಗೆ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಸ್ಮೃತಿ ಇರಾನಿ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.

ಪ್ರಸಾರ ಭಾರತಿಯು ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನದ ಆಗುಹೋಗುಗಳನ್ನು ನಿರ್ವಹಿಸಲಿದೆ. ಸೂರ್ಯ ಪ್ರಕಾಶ್ 2014ರ ಅಕ್ಟೋಬರ್ ನಲ್ಲಿ ಮೊದಲ ಬಾರಿಗೆ ಪ್ರಸಾರ ಭಾರತಿ ಚೇರ್ಮನ್ ಆಗಿ ಆಯ್ಕೆಯಾಗಿದ್ದರು.
ಈ ಸಂಬಂಧ ಪಿಟಿಐ ಜತೆ ಮಾತನಾಡಿರುವ ಸೂರ್ಯ ಪ್ರಕಾಶ್, ಈ ಅವಕಾಶ ನೀಡಿದ್ದಕ್ಕಾಗಿ ಉಪರಾಷ್ಟ್ರಪತಿ, ಸಮಿತಿ ಸದಸ್ಯರು ಮತ್ತು ಕೇಂದ್ರ ಸರಕಾರಕ್ಕೆ ಧನ್ಯವಾದ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಯಾರು ಈ ಸೂರ್ಯ ಪ್ರಕಾಶ್?
ಸೂರ್ಯ ಪ್ರಕಾಶ್ ಮೂಲತಃ ಕರ್ನಾಟಕದ ಹಾಸನದವರು. ನಂತರ ಇಲ್ಲಿಂದ ಅವರ ಕುಟುಂಬ ವಲಸೆ ಹೋಗಿತ್ತು.
ಜೀ ನ್ಯೂಸ್, ದಿ ಪಯೋನಿರ್, ಏಷ್ಯಾ ಟೈಮ್ಸ್, ಇಂಡಿಯಾ ಎಡಿಟರ್, ಈ ನಾಡು ಮತ್ತು ಇಂಡಿಯನ್ ಎಕ್ಸ್ಪ್ರೆಸ್ನಲ್ಲಿ ಕೆಲಸ ಮಾಡಿದ ಅನುಭವ ಸೂರ್ಯ ಪ್ರಕಾಶ್ ಬಳಿಯಿದೆ. ಅಲ್ಲದೇ ದೆಹಲಿಯ ಪಯೋನೀರ್ ಮೀಡಿಯಾ ಶಾಲೆಗಳ ಸಂಸ್ಥಾಪಕ-ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಎರಡನೇ ಕನ್ನಡಿಗ:
ಹಿರಿಯ ಪತ್ರಕರ್ತ ಎಂ.ವಿ ಕಾಮತ್ ಪ್ರಸಾರ ಭಾರತಿ ಚೇರ್ಮನ್ ಸ್ಥಾನವನ್ನು ಅಲಂಕರಿಸಿದ ಮೊದಲ ಕನ್ನಡಿಗರಾಗಿದ್ದರು. ಈಗ ಡಾ. ಎ ಸೂರ್ಯ ಪ್ರಕಾಶ್ ಪ್ರಸಾರ ಭಾರತಿಗೆ ಎರಡನೇ ಬಾರಿ ಚೇರ್ಮನ್ ಆಗಿ ಆಯ್ಕೆಯಾಗಿದ್ದಾರೆ.
ಸಿಇಒ ಸ್ಥಾನದಲ್ಲಿ ಶಶಿಶೇಖರ್ ಮಂದುವರಿಕೆ
ಪ್ರಸಾರ ಭಾರತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸ್ಥಾನದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಇಒ ಸ್ಥಾನದಲ್ಲಿ ಶಶಿಶೇಖರ್ ವೆಂಪತಿ ಅವರೇ ಮುಂದುವರಿಯಲಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications