ಸುಶಾಂತ್ ಸಿಂಗ್ ಪ್ರಕರಣ: ಮುಂಬೈ ಪೊಲೀಸರಿಗೆ ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ
ನವದೆಹಲಿ, ಅಕ್ಟೋಬರ್ 14: ಸುಶಾಂತ್ ಸಿಂಗ್ ರಜಪೂತ್ ಅವರ ಸಾವು ಆತ್ಮಹತ್ಯೆಯಿಂದ ಸಂಭವಿಸಿದೆ ಎಂಬ ಏಮ್ಸ್ ವರದಿಯನ್ನು ಸುಶಾಂತ್ ಕುಟುಂಬದ ಪರ ವಕೀಲ ವಿಕಾಸ್ ಸಿಂಗ್ ತಳ್ಳಿಹಾಕಿದ ಬೆನ್ನಲ್ಲೇ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಮುಂಬೈ ಪೊಲೀಸರ ನಡೆಯನ್ನು ಪ್ರಶ್ನಿಸಿದ್ದಾರೆ.
ಸಾಯುವ ಮೊದಲು ಸುಶಾಂತ್ ಸಿಂಗ್ ರಜಪೂತ್ ಕಿತ್ತಳೆ ಜ್ಯೂಸ್ ಕುಡಿದಿದ್ದರು ಎಂದು ಹೇಳಲಾಗಿತ್ತು. ಈ ವಿಚಾರವಾಗಿ ಮುಂಬೈ ಪೊಲೀಸರು ಇಡೀ ಪ್ರಕರಣದ ತನಿಖೆ ನಡೆಸಿದ ಬಗೆಯನ್ನು ಸುಬ್ರಮಣಿಯನ್ ಸ್ವಾಮಿ ಅನುಮಾನಿಸಿದ್ದಾರೆ.
'ಬೆಳಿಗ್ಗೆ ಕಿತ್ತಳೆ ಜ್ಯೂಸ್. ಸುಶಾಂತ್ ಸಿಂಗ್ ಕಿತ್ತಳೆ ಜ್ಯೂಸ್ ಕುಡಿದ ಗ್ಲಾಸ್ಅನ್ನು ಏಕೆ ಸಂರಕ್ಷಿಸಿ ಇಡಲಿಲ್ಲ? ಅಸಹಜ ಸಾವಿನ ಪ್ರಕರಣಗಳಲ್ಲಿ ಕಡ್ಡಾಯವಾಗಿ ಮಾಡುವಂತೆ ಸುಶಾಂತ್ ಅವರ ಅಪಾರ್ಟ್ಮೆಂಟ್ಅನ್ನು ಮುಂಬೈ ಪೊಲೀಸರು ಸೀಲ್ ಮಾಡದೆ ಇರುವುದು ಅಚ್ಚರಿಯೇನೂ ಮೂಡಿಸುತ್ತಿಲ್ಲ' ಎಂದು ಸ್ವಾಮಿ ಹೇಳಿದ್ದಾರೆ.

'ಸುಶಾಂತ್ ಸಿಂಗ್ ಪ್ರಕರಣವನ್ನು ಆತ್ಮಹತ್ಯೆಗೆ ಪ್ರಚೋದನೆಯಿಂದ ಕೊಲೆ ಪ್ರಕರಣ ಎಂದು ಪರಿವರ್ತಿಸುವ ನಿರ್ಧಾರ ತೆಗೆದುಕೊಳ್ಳಲು ಸಿಬಿಐ ವಿಳಂಬ ಮಾಡುತ್ತಿರುವುದು ಹತಾಶೆ ಮೂಡಿಸುತ್ತಿದೆ. ಏಮ್ಸ್ ತಂಡದ ಭಾಗವಾಗಿದ್ದ ವೈದ್ಯರೊಬ್ಬರು ನಾನು ಕಳುಹಿಸಿದ್ದ ಫೋಟೊವನ್ನು ಪರಿಶೀಲಿಸಿ, ಇದು ಶೇ 200ರಷ್ಟು ಕತ್ತು ಹಿಸುಕಿ ಮಾಡಿದ ಕೊಲೆ, ಆತ್ಮಹತ್ಯೆಯಲ್ಲ ಎಂದು ಬಹಳ ಹಿಂದೆಯೇ ಹೇಳಿದ್ದರು' ಎಂದು ವಕೀಲ ವಿಕಾಸ್ ಸಿಂಗ್ ತಿಳಿಸಿದ್ದರು.
ಈ ನಡುವೆ ಸುಶಾಂತ್ ಸಿಂಗ್ ಅವರ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಸಾಮಾಜಿಕ ಜಾಲತಾಣದಲ್ಲಿ ಹೊಸ ಆಂದೋಲನ ಆರಂಭಿಸಿದ್ದಾರೆ. 'ಸುಶಾಂತ್ ಪ್ರಕರಣದ ಸತ್ಯ ಮತ್ತು ನ್ಯಾಯಕ್ಕಾಗಿ ನಮ್ಮ ಧ್ವನಿಗಳನ್ನು ಎತ್ತಲು ಇದು ಸೂಕ್ತ ಅವಕಾಶ ಎನಿಸುತ್ತಿದೆ. ಈ ವಿಚಾರವಾಗಿ ನಾವು ಒಗ್ಗಟ್ಟಿನಿಂದ ಇರಬೇಕು ಮತ್ತು ಜನರು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ ಎಂಬುದನ್ನು ತೋರಿಸಬೇಕು' ಎಂದಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications