Kochi Blast: ಕೇರಳದಲ್ಲಿ ಅನುಮಾನಾಸ್ಪದ ಸ್ಫೋಟ, ಒಬ್ಬ ವ್ಯಕ್ತಿ ಬಲಿ: ಕಾರಣ ತಿಳಿಯಿರಿ
ಕೊಚ್ಚಿ: ಕೇರಳದ ಸಭಾ ಭವನ ಒಂದರಲ್ಲಿ ಇಂದು ಸಂಭವಿಸಿದ ಸ್ಫೋಟಕ್ಕೆ ಓರ್ವ ವ್ಯಕ್ತಿ ಬಲಿಯಾಗಿ, ಸುಮಾರು 20 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮತ್ತೊಂದು ಕಡೆ ಇದೀಗ ಗಾಯಗೊಂಡಿರುವ 20 ಜನರ ಪೈಕಿ, ಹಲವರ ಸ್ಥಿತಿ ಗಂಭೀರ ಎನ್ನಲಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಕೂಡ ಆವರಿಸಿದೆ. ತಕ್ಷಣ ಈ ಸ್ಫೋಟಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಸ್ಫೋಟ ಸಂಭವಿಸಿದ್ದೆ ತಡ ಸ್ಥಳದಲ್ಲಿ ಇದ್ದ ಜನ ಬೆಚ್ಚಿಬಿದ್ದಿದ್ದಾರೆ. ಹಾಗೆ ಕೆಲವರು ಇದೇ ವೇಳೆ ಸ್ಥಳದಲ್ಲಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಅಲ್ಲೇ ಓರ್ವ ಮೃತಪಟ್ಟಿದ್ದು, ಇನ್ನು ಗಾಯಗೊಂಡ ಹತ್ತಾರ ಜನರನ್ನು ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹಾಗೇ ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ. ಇದು ಮಾತ್ರ ಅಲ್ಲ, ಸ್ಥಳದಲ್ಲಿ ಹಲವು ಬಾರಿ ಸ್ಫೋಟ ಸಂಭವಿಸಿದ ಎಂಬ ಆರೋಪವೂ ಕೇಳಿಬಂದಿದೆ. ಇದೀಗ ಸ್ಫೋಟದಲ್ಲಿ ಸುಟ್ಟು ಕರಕಲಾದ ದೇವಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರಗೆ ತೆಗೆದಿದ್ದಾರೆ.

ಜೀವ ಭಯದಲ್ಲಿ ಓಡುವಾಗ ಹೊತ್ತಿದ ಬೆಂಕಿ
ದಿಢೀರ್ ಸ್ಫೋಟ ಸಂಭವಿಸಿದರೆ ಯಾರಿಗೆ ತಾನೆ ಭಯ ಆಗದೆ ಇರುವುದಿಲ್ಲ ಹೇಳಿ? ಇದೇ ರೀತಿ ಇಂದು ಸಂಭವಿಸಿದ ಸ್ಫೋಟಗಳು ಕೂಡ ಕೊಚ್ಚಿ ಜನರನ್ನು ಬೆಚ್ಚಿಬೀಳಿಸಿವೆ. ತಕ್ಷಣ, ಎಚ್ಚರಗೊಂಡ ಸಭಾ ಭವನದಲ್ಲಿ ಇದ್ದ ಜನ ಅಲ್ಲಿಂದ ಓಡಿದ್ದಾರೆ. ಆದರೆ ಹೀಗೆ ಓಡುವ ಸಮಯದಲ್ಲಿ ಕೆಲವರಿಗೆ ಬೆಂಕಿ ತಗುಲಿ ಗಾಯವಾಗಿದೆ ಎನ್ನಲಾಗಿದೆ. ಈ ಎಲ್ಲಾ ಕಾರಣದ ಪರಿಣಾಮ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಭೀತಿ ಆವರಿಸಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications