ರಾಜಸ್ಥಾನ ಹಾಗೂ ಬಿಹಾರದಲ್ಲಿ ಕೊರೊನಾ ವೈರಸ್ ಭೀತಿ
ಜೈಪುರ, ಜನವರಿ 27: ಮಾರಣಾಂತಿಕ ಕೊರೊನಾ ವೈರಸ್ ಭೀತಿ ಚೀನಾದಲ್ಲಿ ಮಾತ್ರವಲ್ಲದೆ ಭಾರತದಲ್ಲೂ ಆವರಿಸಿದೆ.
ಜೈಪುರದಲ್ಲಿ ಓರ್ವ ಶಂಕಿತ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಸಚಿವ ರಘು ಶರ್ಮಾ ತಿಳಿಸಿದ್ದಾರೆ. ಚೀನಾದಲ್ಲಿ ಎಂಬಿಬಿಎಸ್ ಮುಗಿಸಿ ಭಾರತಕ್ಕೆ ಆತ ವಾಪಸಾಗಿದ್ದ, ಎಸ್ಎಂಎಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ. ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ.
ಅವರ ಕುಟುಂಬದ ಎಲ್ಲರನ್ನೂ ಪರಿಶೀಲನೆಗೆ ಒಳಪಡಿಸಲಾಗಿದೆ. ಪುಣೆಯಲ್ಲಿರುವ ನ್ಯಾಷನಲ್ ವೈರಾಲಜಿ ಲ್ಯಾಬೊರೇಟರಿಗೆ ರಕ್ತದ ಸ್ಯಾಂಪಲ್ ಕಳುಹಿಸಲಾಗಿದೆ.

ಅದೇ ಜಿಲ್ಲೆಯ 18 ಮಂದಿ ಚೀನಾದಿಂದ ಹಿಂದಿರುಗಿದ್ದಾರೆ. ಮುಂದಿನ 28 ದಿನಗಳ ಕಾಲ ಅವರನ್ನು ತೀವ್ರ ನಿಗಾದಲ್ಲಿಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಇನ್ನು ಬಿಹಾರದಲ್ಲಿ ಕೂಡ 137 ವಿಮಾನಗಳ ಒಟ್ಟು 29,700 ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಬಿಹಾರದ ಛಾಪ್ರಾದ ವಿದ್ಯಾರ್ಥಿನಿಯೊಬ್ಬಳು ಚೀನಾದಿಂದ ವಾಪಸಾಗಿದ್ದಳು.ಆಕೆಯಲ್ಲಿ ಕೂಡ ಕೊರೊನಾ ವೈರಸ್ ಮಾದರಿಯ ಲಕ್ಷಣಗಳು ಕಾಣಿಸಿಕೊಂಡಿದೆ.
ಅವರನ್ನು ಛಾಪ್ರಾದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ರಾಜಸ್ಥಾನದ ವೈದ್ಯರೊಬ್ಬರು ಕೂಡ ಚೀನಾದಿಂದ ಮರಳಿದ್ದು ಅವರಲ್ಲೂ ರೋಗದ ಲಕ್ಷಣಗಳು ಕಾಣಿಸಿಕೊಂಡಿದೆ. ಕೇರಳ ಹಾಗೂ ಮಹಾರಾಷ್ಟ್ರ ಸೇರಿ 100ಕ್ಕೂ ಹೆಚ್ಚ ಮಂದಿಯನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ.
ಚೀನಾದಲ್ಲಿ ಇದುವರೆಗೆ 80 ಮಂದಿ ಕೊರೊನಾ ವೈರಸ್ಗೆ ಬಲಿಯಾಗಿದ್ದಾರೆ, 2800 ಮಂದಿಗೆ ಸೋಂಕು ತಗುಲಿರುವ ಸಾಧ್ಯತೆ ಇದೆ ಎಂದು ಚೀನಾ ತಿಳಿಸಿದೆ.












Click it and Unblock the Notifications