ಒಡಿಶಾ: ಕಾಲಿಗೆ ಕ್ಯಾಮೆರಾ ಕಟ್ಟಿದ ಪತ್ತೇದಾರಿ ಪಾರಿವಾಳ ಪತ್ತೆ
ಒಡಿಶಾದ ಕರಾವಳಿಯಲ್ಲಿ ಪತ್ತೆದಾರಿ ಪಾರಿವಾಳವೊಂದು ಕಂಡುಬಂದಿದೆ. ಈ ಪಾರಿವಾಳ ಕ್ಯಾಮೆರಾ ಮತ್ತು ಮೈಕ್ರೊಚಿಪ್ ಸೇರಿದಂತೆ ಇತರ ಸಾಧನಗಳನ್ನು ಹೊಂದಿದೆ.
ಭುವನೇಶ್ವರ ಮಾರ್ಚ್ 9: ಒಡಿಶಾದ ಕರಾವಳಿಯಲ್ಲಿ ಪತ್ತೆದಾರಿ ಪಾರಿವಾಳವೊಂದು ಕಂಡುಬಂದಿದೆ. ಒಡಿಶಾದ ಜಗತ್ಸಿಂಗ್ಪುರ ಜಿಲ್ಲೆಯ ಪಾರಾದೀಪ್ ಕರಾವಳಿಯಲ್ಲಿ ಮೀನುಗಾರಿಕಾ ದೋಣಿಯಿಂದ ಕ್ಯಾಮೆರಾ ಮತ್ತು ಮೈಕ್ರೊಚಿಪ್ ಸೇರಿದಂತೆ ಸಾಧನಗಳನ್ನು ಹೊಂದಿದ್ದ ಪತ್ತೇದಾರಿ ಪಾರಿವಾಳವೊಂದು ಸೆರೆ ಸಿಕ್ಕಿದೆ. ಈ ಪಾರಿವಾಳವನ್ನು ಬೇಹುಗಾರಿಕೆಗೆ ಬಳಸಿಕೊಳ್ಳಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಮಾತನಾಡಿದ ಜಗತ್ಸಿಂಗ್ಪುರ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಪಿಆರ್ ಅವರು, "ಪಾರಿವಾಳದ ಕಾಲುಗಳಿಗೆ ಜೋಡಿಸಲಾದ ಸಾಧನಗಳನ್ನು ಪರೀಕ್ಷಿಸಲು ನಾವು ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯವನ್ನು ಪಡೆಯುತ್ತೇವೆ. ಸಾಧನಗಳು ಕ್ಯಾಮೆರಾ ಮತ್ತು ಮೈಕ್ರೋಚಿಪ್ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಪ್ರಯೋಗಾಲಯದ ಬಳಿಕ ಹೆಚ್ಚಿನ ಮಾಹಿತಿ ಸಿಗಲಿದೆ" ಎಂದು ಹೇಳಿದರು.

ಸ್ಥಳೀಯ ಪೊಲೀಸರಿಗೆ ತಿಳಿಯದ ಭಾಷೆಯಲ್ಲಿ ಹಕ್ಕಿಯ ರೆಕ್ಕೆಗಳ ಮೇಲೆ ಏನೋ ಗೀಚಿದಂತಿದೆ. "ಏನು ಬರೆಯಲಾಗಿದೆ ಎಂಬುದನ್ನು ಕಂಡುಹಿಡಿಯಲು ತಜ್ಞರ ಸಹಾಯವನ್ನು ಸಹ ಪಡೆಯಲಾಗುವುದು" ಎಂದು ಎಸ್ಪಿ ಹೇಳಿದರು.
'ಸಾರಥಿ' ಎಂಬ ಮೀನುಗಾರಿಕಾ ಟ್ರಾಲರ್ನ ಉದ್ಯೋಗಿ ಪಿತಾಂಬರ ಬೆಹೆರಾ ಅವರು ಪಾರಿವಾಳವನ್ನು ದೋಣಿಯ ಮೇಲೆ ಕುಳಿತಿರುವುದನ್ನು ನೋಡಿರುವುದಾಗಿ ಹೇಳಿದರು. ಬೆಹೆರಾ ಅವರು ಕಳೆದ ಹಲವು ದಿನಗಳಿಂದ ಹಕ್ಕಿಗೆ ಆಹಾರವನ್ನು ನೀಡುತ್ತಿರುವುದಾಗಿ ತಿಳಿಸಿದ್ದಾರೆ.
"ಹಕ್ಕಿಯ ಕಾಲುಗಳಿಗೆ ಕೆಲವು ವಸ್ತುಗಳನ್ನು ಹಾಕಿರುವುದನ್ನು ನಾನು ಇದ್ದಕ್ಕಿದ್ದಂತೆ ಗಮನಿಸಿದೆ. ಅದರ ರೆಕ್ಕೆಗಳ ಮೇಲೆ ಏನೋ ಬರೆದಿರುವುದನ್ನು ನಾನು ಕಂಡುಕೊಂಡೆ. ಅದು ಒಡಿಯಾದಲ್ಲಿ ಇಲ್ಲದ ಕಾರಣ ನನಗೆ ಅದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ'' ಎಂದು ಬೆಹೆರಾ ಮಾಧ್ಯಮದವರಿಗೆ ತಿಳಿಸಿದರು.

ಹತ್ತಿರ ಬರುತ್ತಿದ್ದಂತೆ ಅವರು ಹಕ್ಕಿಯನ್ನು ಹಿಡಿದಿದ್ದಾರೆ. ಅದಕ್ಕೆ ಏನೋ ಆಗಿದೆ ಎನ್ನುವ ಅನುಮಾನದಲ್ಲಿ ಅವರು ಅದನ್ನು ಪಶುವೈದ್ಯರ ಬಳಿ ಪರೀಕ್ಷಿಸಲು ಕರೆದುಕೊಂಡು ಹೋಗಿದ್ದಾರೆ. ಬಳಿಕ ಅನುಮಾನ ಹೆಚ್ಚಾದಲ್ಲಿ ಪೊಲೀಸರಿಗೆ ಮಾಃಇತಿ ನೀಡಿದ್ದಾರೆ. ಸದ್ಯ ಪೊಲೀಸರು ಪಾರಿವಾಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಸುಮಾರು 10 ದಿನಗಳ ಹಿಂದೆ ಕೋನಾರ್ಕ್ ಕರಾವಳಿಯಿಂದ 35 ಕಿಮೀ ದೂರದಲ್ಲಿ ಟ್ರಾಲರ್ನಲ್ಲಿ ಶಂಕಿತ ಪಾರಿವಾಳ ಪತ್ತೆಯಾಗಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications