Waqf: ವಕ್ಫ್ ಜೆಪಿಸಿ ಸದಸ್ಯರ ಅಮಾನತು; ಲೋಕಸಭಾ ಸ್ಪೀಕರ್ಗೆ ಪತ್ರ ಬರೆದು ದೂರು
ವಕ್ಪ್ ತಿದ್ದುಪಡಿ ಮಸೂದೆಯ ಮೇಲಿನ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಸದಸ್ಯರನ್ನು ಅಮಾನುತು ಮಾಡಲಾಗಿದ್ದು, ಅಮಾನತುಗೊಂಡ ಸದಸ್ಯರು ಲೋಕಸಭಾ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ. ಸಭೆಯಲ್ಲಿ ಗದ್ದಲ ನಡೆದ ಕಾರಣ ಸದಸ್ಯರನ್ನು ಅಮಾನತು ಮಾಡಲಾಗಿದೆ. ಇದೀಗ ಘಟನೆ ವಿವಾದದ ಸ್ವರೂಪ ಪಡೆದಿದ್ದು ಪರಸ್ಪರ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ.
ಅಮಾನತುಗೊಂಡಿರುವ ಸದಸ್ಯರು ಲೋಕಸಣಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಸಮಿತಿಯ ಅಧ್ಯಕ್ಷೆ ಬಿಜೆಪಿ ನಾಯಕಿ ಜಗದಾಂಬಿಕಾ ಪಾಲ್ ವಿರುದ್ಧ ಆರೋಪ ಮಾಡಿದ್ದಾರೆ. ಪಾಲ್ ಅವರು ಯಾರೊಂದಿಗೆ ಮೊಬೈಲ್ನಲ್ಲಿ ಮಾತನಾಡಿದ ಬಳಿಕ ತಮ್ಮನ್ನು ಸಮಿತಿಯಿಂದ ಅಮಾನತು ಮಾಡಿದ್ದಾರೆ ಎಂದು ದೂರಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆಯ ಕುರಿತಾದ ಸಂಸದೀಯ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಹತ್ತು ವಿರೋಧ ಪಕ್ಷದ ಸದಸ್ಯರನ್ನು ಶುಕ್ರವಾರ ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಲಾಗಿದೆ, ಜಗದಾಂಬಿಕಾ ಪಾಲ್ ಅವರ ವಿರುದ್ಧ ಗಂಭೀರ ಅರೋಪ ಮಾಡಿದ್ದು, ನಮ್ಮ ವಾದವನ್ನು ಅಧ್ಯಕ್ಷರು ಕಡೆಗಣಿಸಿದ್ದಾರೆ ಎಂದು ದೂರಿದ್ದಾರೆ.
ಸದಸ್ಯರು ಬರೆದ ಪತ್ರದಲ್ಲಿ ಏನಿದೆ?
"ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸಭೆ ಪ್ರಾರಂಭವಾದಾಗ, ವಿರೋಧ ಪಕ್ಷದ ಸದಸ್ಯರಾದ ನಾವು ಅಧ್ಯಕ್ಷರ ನಡವಳಿಕೆ ವಿರುದ್ಧ ಗೌರವಯುತವಾಗಿ ಧ್ವನಿ ಎತ್ತಿದ್ದೇಬೆ. ನಿಯಮಗಳಲ್ಲಿ ಪರಿಗಣಿಸಲಾಗಿರುವ ಸೂಕ್ತ ಪ್ರಕ್ರಿಯೆಯನ್ನು ನಿರ್ಲಕ್ಷಿಸುವ ಮೂಲಕ ಜೆಪಿಸಿಯ ಏಕಪಕ್ಷೀಯ ಮತ್ತು ಅನ್ಯಾಯದ ಕಾರ್ಯವೈಖರಿಯನ್ನು ಎತ್ತಿ ತೋರಿಸಿದ್ದೇವೆ. ಜನವರಿ 24 ಮತ್ತು 25 ರಂದು ಸಭೆಗೆ ನಿಗದಿ ಮಾಡಿ ಸೂಚನೆ ನೀಡಿದ್ದರಿಂದ, ಜನವರಿ 31ರಿಂದ ಸಂಸತ್ತಿನ ಅಧಿವೇಶ ಪ್ರಾರಂಭವಾಗುವುದರಿಂದ ಜನವರಿ 27 ರಿಂದ 30 ರವರೆಗೆ ಸಭೆಯನ್ನು ಮುಂದೂಡುವಂತೆ ಮನವಿ ಮಾಡಿದ್ದೇವೆ" ಎಂದು ಹೇಳಿದರು.
ನಾವು ನಮ್ಮ ವಾದವನ್ನು ಸಭ್ಯ ರೀತಿಯಲ್ಲಿಯೇ ಅಧ್ಯಕ್ಷರಿಗೆ ತಿಳಿಸಿದೆವು. ಆದರೆ ಅವರು ಪ್ರತಿಕ್ರಿಯೆ ನೀಡುವ ಪ್ರಯತ್ನವನ್ನು ಮಾಡಲಿಲ್ಲ. ನಮಗೆ ಅವಮಾನವಾದ ಕಾರಣ, ನಾವು ಎದ್ದು ನಿಂತು ನಮ್ಮ ಬೇಡಿಕೆಗಳನ್ನು ಮುಂದಿಟ್ಟೆವು, ಅಧ್ಯಕ್ಷರು ಯಾರೊಂದಿಗೋ ಮೊಬೈಲ್ನಲ್ಲಿ ಮಾತನಾಡಿದರು, ಇದ್ದಕ್ಕಿದ್ದಂತೆ ಅವರು ನಮ್ಮನ್ನು ಅಮಾನತುಗೊಳಿಸಲು ಆದೇಶ ನೀಡಿದರು ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಸಮಿತಿಯ ವಿಚಾರಣೆಯನ್ನು ಪಾರದರ್ಶಕವಾಗಿ ನಡೆಸಬೇಕೆಂದು ಒತ್ತಾಯಿಸಿದ ವಿರೋಧ ಪಕ್ಷದ ಸಂಸದರು, ಪಾಲ್ ಅವರು ಅಮಾನತುಗೊಳಿಸುವ ಅಧಿಕಾರ ಹೊಂದಿದ್ದಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಜೆಪಿಸಿಯ ಅಧ್ಯಕ್ಷರಿಗೆ ಸಮಿತಿಯ ಸದಸ್ಯರನ್ನು ಅಮಾನತುಗೊಳಿಸುವ ಅಧಿಕಾರವಿಲ್ಲ ಎನ್ನುವುದು ನಮ್ಮ ಅಭಿಪ್ರಾಯ, ಅಧ್ಯಕ್ಷರು 27ನೇ ಸಭೆಯನ್ನು ಮುಂದೂಡಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.
ಬಿಜೆಪಿ ಸದಸ್ಯ ನಿಶಿಕಾಂತ್ ದುಬೆ ಅವರು ವಿರೋಧ ಪಕ್ಷದ ಸದಸ್ಯರನ್ನು ಅಮಾನತುಗೊಳಿಸುವ ಪ್ರಸ್ತಾವನೆಯನ್ನು ಮಂಡಿಸಿದರು, ಇದನ್ನು ಸಮಿತಿಯು ಅಂಗೀಕರಿಸಿತು, ಬ್ಯಾನರ್ಜಿ ಮತ್ತು ನದೀಮ್-ಉಲ್ ಹಕ್ (ತೃಣಮೂಲ ಕಾಂಗ್ರೆಸ್), ಮೊಹಮ್ಮದ್ ಜಾವೇದ್, ಇಮ್ರಾನ್ ಮಸೂದ್ ಮತ್ತು ಸೈಯದ್ ನಸೀರ್ ಹುಸೇನ್ (ಕಾಂಗ್ರೆಸ್), ಎ ರಾಜಾ ಮತ್ತು ಮೊಹಮ್ಮದ್ ಅಬ್ದುಲ್ಲಾ (ಡಿಎಂಕೆ), ಅಸಾದುದ್ದೀನ್ ಓವೈಸಿ (ಎಐಎಂಐಎಂ), ಮೊಹಿಬುಲ್ಲಾ (ಎಸ್ಪಿ) ಮತ್ತು ಅರವಿಂದ್ ಸಾವಂತ್ (ಶಿವಸೇನೆ-ಯುಬಿಟಿ) ಅಮಾನತುಗೊಂಡ ಸದಸ್ಯರಾಗಿದ್ದಾರೆ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ












Click it and Unblock the Notifications