ಭಾರತದೊಳು ನುಗ್ಗುವ ಉಗ್ರರ ಯತ್ನ ವಿಫಲ, ಬೋಟ್ ಸ್ಫೋಟ
ಪೋರಬಂದರ್(ಗುಜರಾತ್) ಜ.2: ಸ್ಫೋಟಕಗಳಿಂದ ತುಂಬಿದ್ದ ಪಾಕಿಸ್ತಾನದ ದೋಣಿಯೊಂದು ಇಲ್ಲಿನ ಅರಬ್ಬಿ ಸಮುದ್ರದಲ್ಲಿ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ಲಾಹೋರಿನ ಕೇತಿ ಬಂದರ್ ಮೂಲದ ದೋಣಿ ಇದಾಗಿದ್ದು, ಮೀನುಗಾರಿಕಾ ಬೋಟ್ ನಲ್ಲಿ ನಾಲ್ವರು ಇದ್ದರು ಎಂದು ತಿಳಿದು ಬಂದಿದೆ.
ಪಾಕಿಸ್ತಾನಿ ಮೂಲದ ಉಗ್ರರು 26/11 ಮುಂಬೈ ದಾಳಿ ಮಾದರಿಯಲ್ಲೇ ವಿಧ್ವಂಸಕ ಕೃತ್ಯದ ಸಂಚನ್ನು ರೂಪಿಸಿದ್ದರು. ಹೊಸ ವರ್ಷಾಚರಣೆ ವೇಳೆ ಜಲಮಾರ್ಗದ ಮೂಲಕ ದೇಶದೊಳಗೆ ನುಗ್ಗಲು ಯತ್ನಿಸಿದ್ದರು. ಆದರೆ, ಉಗ್ರರ ಸಂಚನ್ನು ಭಾರತೀಯ ಜಲ ಸೇನೆ ಹಾಗೂ ಕರಾವಳಿ ಕಾವಲು ಪಡೆ ವಿಫಲಗೊಳಿಸಿದೆ. [ಸಾವಿನಲ್ಲೂ ಸಾರ್ಥಕತೆ ಮೆರೆದ ಹುತಾತ್ಮನ ಪತ್ನಿ]

ಡಿಸೆಂಬರ್ 31ರಂದು ಪಾಕಿಸ್ತಾನದ ಬೋಟ್ ಗುಜರಾತಿನ ಪೋರಬಂದರ್ ಕರಾವಳಿಯಲ್ಲಿ ಪತ್ತೆಯಾಗಿತ್ತು. ಗುಪ್ತಚರ ಇಲಾಖೆ ಮಾಹಿತಿ ಪ್ರಕಾರ ಈ ಬೋಟಿನಲ್ಲಿ ನಾಲ್ವರು ಶಂಕಿತ ಉಗ್ರರಿರುವುದು ಪತ್ತೆಯಾಗಿದೆ. [ಮುಂಬೈ ದಾಳಿ ರುವಾರಿ ಹೆಡ್ಲಿಗೆ 35 ವರ್ಷ ಶಿಕ್ಷೆ]
ಕರಾವಳಿ ಕಾವಲು ಪಡೆ ಈ ಬೋಟನ್ನು ಚೇಸ್ ಮಾಡಿ ಸುತ್ತುವರೆದಿದ್ದಾರೆ. ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಅದರೆ, ಕಾವಲು ಪಡೆಗೆ ಸೊಪ್ಪು ಹಾಕದೆ ಮುಂದೆ ಸಾಗಿದ ಬೋಟು ಕೆಲ ಸಮಯದ ನಂತರ ಬೆಂಕಿಗೆ ಆಹುತಿಯಾಗಿದೆ. ಬೋಟಿನಲ್ಲಿದ್ದ ನಾಲ್ವರು ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾರೆ ಎಂದು ಕಾವಲು ಪಡೆ ಅಧಿಕಾರಿಗಳು ಹೇಳಿದ್ದಾರೆ. [ಓಂಬಳೆ ಸಾಹಸ ಸ್ಮರಣೀಯ]
ಪೋರಬಂದರ್ ನಿಂದ ನೈಋತ್ಯಕ್ಕೆ ಸುಮಾರು 365 ಕಿ.ಮೀ ದೂರದಲ್ಲಿ ಅರಬ್ಬಿ ಸಮುದ್ರದಲ್ಲಿ ಈ ಘಟನೆ ಜರುಗಿದೆ. ಜ.1 ರ ಮುಂಜಾನೆ ನಡೆದ ಈ ಘಟನೆ ವಿವರಗಳು ಈಗಷ್ಟೇ ಲಭ್ಯವಾಗಿದೆ. ಬೋಟ್ ಹಾಗೂ ಅದರಲ್ಲಿದ್ದ ನಾಲ್ವರ ವಿವರಗಳು ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಅದರೆ, 26/11 ಮಾದರಿಯಲ್ಲಿ ದಾಳಿ ನಡೆಸಲು ಈ ಮೀನುಗಾರಿಕಾ ಬೋಟ್ ಬಳಸಿಕೊಂಡು ಹಂಚು ಹಾಕಿದ್ದರು ಎಂದು ತಿಳಿದು ಬಂದಿದೆ.
ಬೋಟ್ ಟ್ರ್ಯಾಕ್ ಮಾಡಲಾಗಿತ್ತು: ಪಾಕಿಸ್ತಾನದ ಕರಾವಳಿಯನ್ನು ಈ ಶಂಕಿತ ಬೋಟ್ ಬಿಡುತ್ತಿದ್ದಂತೆ National Technical Research Organisation (NTRO) ತಂಡ ಟ್ರ್ಯಾಕ್ ಮಾಡತೊಡಗಿತ್ತು. ಡೊರ್ನಿಯರ್ ಏರ್ ಕ್ರಾಫ್ಟ್ ಬಳಸಿ ಬೋಟ್ ನ ಚಲನವಲನದ ಬಗ್ಗೆ ನಿಗಾವಹಿಸುವಂತೆ ಕರಾವಳಿ ಕಾವಲು ಪಡೆಗೆ ಮಾಹಿತಿ ನೀಡಿತ್ತು. ಅದರಂತೆ ಭಾರತದ ಗಡಿ ಪ್ರವೇಶಿಸಿದ ಮೇಲೆ ಬೋಟ್ ವಶಕ್ಕೆ ಪಡೆಯಲು ಕಾವಲು ಪಡೆ ಯತ್ನಿಸಿತ್ತು.
26/11ರಂದು ಪಾಕಿಸ್ತಾನದ ಬೋಟ್ ಮೂಲಕ ಮುಂಬೈ ಕರಾವಳಿಗೆ 10 ಜನ ಉಗ್ರರು ಬಂದಿಳಿದು ಸುಮಾರು 166 ಜನರನ್ನು ಬಲಿ ತೆಗೆದುಕೊಂಡಿದ್ದು ಈಗ ಇತಿಹಾಸ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications